Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:20 - ಕನ್ನಡ ಸತ್ಯವೇದವು J.V. (BSI)

20 ಇಸ್ರಾಯೇಲ್ ಯೆಹೂದ್ಯರು ಸಮುದ್ರತೀರದ ಉಸುಬಿನಷ್ಟು ಅಸಂಖ್ಯರಾಗಿದ್ದರು; ಅವರು ಅನ್ನಪಾನಗಳಲ್ಲಿ ತೃಪ್ತರಾಗಿ ಸಂತೋಷದಿಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಸ್ರಾಯೇಲರು ಮತ್ತು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯರಾಗಿ ಅಭಿವೃದ್ಧಿಯಾದರು. ಅವರು ಅನ್ನಪಾನಗಳನ್ನು ಮಾಡುತ್ತಾ ತೃಪ್ತರಾಗಿ ಸಂತೋಷದಿಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇಸ್ರಯೇಲ್ ಹಾಗು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾದರು; ಅನ್ನ ಪಾನಗಳಲ್ಲಿ ಸಂತೃಪ್ತರಾಗಿ ಸಂತೋಷದಿಂದ ಬಾಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಅನೇಕ ಜನರಿದ್ದರು. ಅಲ್ಲಿನ ಜನಸಂಖ್ಯೆಯು ಸಮುದ್ರತೀರದ ಮರಳಿನ ಕಣಗಳಷ್ಟಿತ್ತು. ಜನರು ಸಂತುಷ್ಟರಾಗಿ ಜೀವಿಸುತ್ತಿದ್ದರು. ಅವರು ತಿಂದು ಕುಡಿದು ಸಂತೋಷಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೂದ ಮತ್ತು ಇಸ್ರಾಯೇಲಿನ ಜನರು ಸಮುದ್ರದ ಮರಳಿನ ಹಾಗೆ ಅಸಂಖ್ಯಾತರಾದರು. ಅವರು ಉಂಡು ಕುಡಿದು ಸುಖದಿಂದ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:20
20 ತಿಳಿವುಗಳ ಹೋಲಿಕೆ  

ವ್ಯವಹಾರಜ್ಞಾನವಿಲ್ಲದವನು, ನಿನ್ನ ಸೇವಕನಾದ ನಾನು ಲೆಕ್ಕಿಸಲಾಗದಂಥ ಮಹಾ ಜನಾಂಗವಾಗಿರುವ ನಿನ್ನ ಸ್ವಕೀಯ ಪ್ರಜೆಯ ಮಧ್ಯದಲ್ಲಿದ್ದೇನೆ.


ನಿನ್ನ ಸಂತತಿಯನ್ನು ಹೆಚ್ಚಿಸೇ ಹೆಚ್ಚಿಸುವೆನು; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು.


ನಿನಗೆ ಒಳ್ಳೇದನ್ನು ಮಾಡಿ ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲವೇ ಅಂದನು.


ಅವರು ದಿನಾಲು ಏಕಮನಸ್ಸಿನಿಂದ ದೇವಾಲಯದಲ್ಲಿ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ ಸರಲ ಹೃದಯದಿಂದಲೂ ಊಟಮಾಡುತ್ತಾ ಇದ್ದರು;


ಸೇನಾಧೀಶ್ವರ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು [ಶತ್ರುಗಳನ್ನು] ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; [ರಕ್ತವನ್ನು] ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ ಯಜ್ಞವೇದಿಯ ಮೂಲೆಗಳ ಹಾಗೂ ರಕ್ತಪೂರ್ಣರಾಗಿರುವರು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನೀವೆಲ್ಲರು ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿಗೆ ಕರೆಯುವಿರಿ.


ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷಾಲತೆ, ಅಂಜೂರಗಿಡ, ಇವುಗಳ ನೆರಳಿನಲ್ಲಿ ಕೂತುಕೊಳ್ಳುವನು; ಅವರನ್ನು ಯಾರೂ ಹೆದರಿಸರು; ಸೇನಾಧೀಶ್ವರನಾದ ಯೆಹೋವನ ಬಾಯೇ ಇದನ್ನು ನುಡಿದಿದೆ.


ಆದರೆ ಇಗೋ, ಉಲ್ಲಾಸ, ಹರ್ಷ, ದನಕೊಯ್ಯುವದು, ಕುರಿಕಡಿಯುವದು, ಮಾಂಸತಿನ್ನುವದು, ದ್ರಾಕ್ಷಾರಸ ಕುಡಿಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವದು [ಇವೇ ನಿಮ್ಮ ಕಾರ್ಯ].


ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬದನ್ನೂ ಕಂಡುಕೊಂಡೆನು.


ಪ್ರಜೆಗಳ ವೃದ್ಧಿ ರಾಜನ ಮಹಿಮೆ; ಪ್ರಜೆಗಳ ಕ್ಷಯ ಪ್ರಭುವಿಗೆ ಭಯ.


ಸಂಗಡಲೇ ಬೇರೊಬ್ಬನು ಬಂದು ನಿನ್ನ ಕುಮಾರ ಕುಮಾರ್ತೆಯರು ತಮ್ಮ ಅಣ್ಣನ ಮನೆಯಲ್ಲಿ ಉಂಡು ಕುಡಿಯುತ್ತಿರುವಾಗ


ಅವರು ಅಲ್ಲಿ ಮೂರು ದಿವಸ ದಾವೀದನ ಸಂಗಡ ಇದ್ದು ಅನ್ನಪಾನಗಳನ್ನು ತೆಗೆದುಕೊಂಡರು; ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು.


ಅವರು ಅಲ್ಲಿಗೆ ಹೋದಾಗ ಆ ಗುಂಪಿನವರು ತಮಗೆ ಫಿಲಿಷ್ಟಿಯ ಯೆಹೂದ ಪ್ರಾಂತಗಳಲ್ಲಿ ದೊರಕಿದ ದೊಡ್ಡ ಕೊಳ್ಳೆಯ ನಿವಿುತ್ತವಾಗಿ ಸಂತೋಷಿಸಿ ಉಂಡು ಕುಡಿದು ಕುಣಿದಾಡುತ್ತಾ ಅಲ್ಲಿನ ಬೈಲಿನಲ್ಲಿ ವ್ಯಾಪಿಸಿಕೊಂಡಿದ್ದರು.


ಅವನನ್ನು ಹೊರಗೆ ಕರತಂದು - ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವದು ನಿನ್ನಿಂದಾದರೆ ಲೆಕ್ಕಿಸು; ನಿನ್ನ ಸಂತಾನವು ಅಷ್ಟಾಗುವದು ಅಂದನು.


ನಿನ್ನ ಸಂತಾನದವರನ್ನು ಭೂವಿುಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂವಿುಯಲ್ಲಿರುವ ಧೂಳನ್ನು ಲೆಕ್ಕಮಾಡುವದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಲಾದೀತು.


ದೇವರು ಸೊಲೊಮೋನನಿಗೆ ಸಮುದ್ರತೀರದ ಉಸುಬಿನಷ್ಟು ಅಪರಿವಿುತವಾದ ಜ್ಞಾನವಿವೇಕಗಳನ್ನೂ ಮನೋವಿಶಾಲತೆಯನ್ನೂ ಅನುಗ್ರಹಿಸಿದನು.


ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.


ನಿನಗೆ ಒಬ್ಬ ಮಗನು ಹುಟ್ಟುವನು; ಅವನು ಸಮಾಧಾನಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಣಗಿಸಿ ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವದು. ಅವನ ಕಾಲದಲ್ಲಿ ಇಸ್ರಾಯೇಲ್ಯರಿಗೆ ಸಮಾಧಾನವನ್ನೂ ಸೌಭಾಗ್ಯವನ್ನೂ ದಯಪಾಲಿಸುವೆನು.


ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ ಸಮುದ್ರಮಾರ್ಗವಾಗಿ ನೀನು ನೇವಿುಸುವ ಸ್ಥಳಕ್ಕೆ ಕಳುಹಿಸಿ ಅಲ್ಲಿ ಬಿಚ್ಚಿಸುವೆನು; ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರಪದಾರ್ಥಗಳನ್ನು ಕೊಡಬೇಕೆಂಬದೇ ನನ್ನ ಅಪೇಕ್ಷೆಯಾಗಿದೆ ಎಂದು ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು