Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:7 - ಕನ್ನಡ ಸತ್ಯವೇದವು J.V. (BSI)

7 ಸೊಲೊಮೋನನು ಎಲ್ಲಾ ಇಸ್ರಾಯೇಲ್ಯರ ಮೇಲೆ ಹನ್ನೆರಡು ಮಂದಿ ಪ್ರದೇಶಾಧಿಪತಿಗಳನ್ನು ನೇವಿುಸಿದನು. ಅವರಲ್ಲಿ ಪ್ರತಿಯೊಬ್ಬನು ಒಂದೊಂದು ತಿಂಗಳು ಅರಸನಿಗೂ ಅವನ ಮನೆಯವರಿಗೂ ಬೇಕಾದ ಆಹಾರಪದಾರ್ಥಗಳನ್ನು ಪ್ರತಿವರುಷವೂ ಒದಗಿಸಿ ಕೊಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸೊಲೊಮೋನನು ಎಲ್ಲಾ ಇಸ್ರಾಯೇಲರ ಮೇಲ್ವಿಚಾರಣೆಗಾಗಿ ಹನ್ನೆರಡು ಕಾರ್ಯನಿರ್ವಾಹಕರನ್ನು ನೇಮಿಸಿದನು. ಅವರಲ್ಲಿ ಪ್ರತಿಯೊಬ್ಬನು ಒಂದೊಂದು ತಿಂಗಳು ಅರಸನಿಗೂ ಮತ್ತು ಅವನ ಮನೆಯವರಿಗೂ ಬೇಕಾದ ಆಹಾರ ಪದಾರ್ಥಗಳನ್ನು ಪ್ರತಿವರ್ಷವೂ ಒದಗಿಸಿಕೊಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವ ಇಸ್ರಯೇಲರ ಮೇಲೆ ಸೊಲೊಮೋನನು ಹನ್ನೆರಡು ಜನ ಜಿಲ್ಲಾಧಿಕಾರಿಗಳನ್ನು ನೇಮಿಸಿದ್ದನು. ಅವರು ತಮ್ಮ ಜಿಲ್ಲೆಗಳಿಂದ ಅರಸನಿಗೂ ಅರಮನೆಯವರಿಗೂ ಬೇಕಾದ ಆಹಾರ ಪದಾರ್ಥಗಳನ್ನು ಪೂರೈಸುತ್ತಿದ್ದರು. ಪ್ರತಿಯೊಬ್ಬನೂ ವರ್ಷದಲ್ಲಿ ಒಂದೊಂದು ತಿಂಗಳು ಪೂರೈಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲರನ್ನು ಹನ್ನೆರಡು ವಿಭಾಗ ಮಾಡಿ ಅವುಗಳನ್ನು ಜಿಲ್ಲೆಗಳೆಂದು ಕರೆದರು. ಪ್ರತಿಯೊಂದು ಜಿಲ್ಲೆಯನ್ನು ಆಳಲು ಸೊಲೊಮೋನನು ರಾಜ್ಯಪಾಲರನ್ನು ನೇಮಿಸಿದನು. ಈ ರಾಜ್ಯಪಾಲರು ತಮ್ಮ ಜಿಲ್ಲೆಗಳಿಂದ ಆಹಾರಪದಾರ್ಥಗಳನ್ನು ಸಂಗ್ರಹಿಸಿ ರಾಜನಿಗೂ ಅವನ ಕುಟುಂಬಕ್ಕೂ ಕೊಡಬೇಕೆಂದು ಆಜ್ಞಾಪಿಸಿದನು. ಪ್ರತಿಯೊಬ್ಬ ರಾಜ್ಯಪಾಲನು ವರ್ಷಕ್ಕೆ ಒಂದು ತಿಂಗಳು ರಾಜನಿಗೆ ಆಹಾರಪದಾರ್ಥಗಳನ್ನು ಕೊಡುವ ಜವಾಬ್ದಾರಿಯನ್ನು ಹೊಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಅರಸನಿಗೂ, ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವುದಕ್ಕೋಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಜಿಲ್ಲಾಧಿಕಾರಿಗಳು ಇದ್ದರು. ಪ್ರತಿಯೊಬ್ಬನೂ ತನಗೆ ವರುಷದಲ್ಲಿ ನೇಮಕವಾದ ತಿಂಗಳು ಬಂದಾಗ, ದವಸಧಾನ್ಯಗಳನ್ನು ಒದಗಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:7
6 ತಿಳಿವುಗಳ ಹೋಲಿಕೆ  

ನಾತಾನನ ಮಗನಾದ ಅಜರ್ಯನು ಪ್ರದೇಶಾಧಿಪತಿಗಳ ಮುಖ್ಯಸ್ಥನು; ನಾತಾನನ ಮಗನಾದ ಜಾಬೂದನು ಯಾಜಕನೂ ಅರಸನ ವಿುತ್ರನೂ ಆಗಿದ್ದನು;


ಅಹೀಷಾರನು ರಾಜಗೃಹಾಧಿಪತಿಯು; ಅಬ್ದನ ಮಗನಾದ ಅದೋನೀರಾಮನು ಬಿಟ್ಟೀ ಕೆಲಸಮಾಡಿಸುವವರ ಮುಖ್ಯಸ್ಥನು.


ಅವರು ಯಾರಂದರೆ - ಎಫ್ರಾಯೀಮ್ ಪರ್ವತಪ್ರದೇಶದಲ್ಲಿದ್ದ ಹೂರನ ಮಗನು.


ನಿನ್ನ ತಂದೆಯು ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದನು; ನಿನ್ನ ತಂದೆಯು ನೇವಿುಸಿದ ಬಿಟ್ಟೀಕೆಲಸವನ್ನು ನೀನು ಕಡಿಮೆಮಾಡಿ ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವದಾದರೆ ನಾವು ನಿನ್ನನ್ನು ಸೇವಿಸುವೆವು ಎಂದು ಹೇಳಲು ಅವನು -


ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು - ಈ ಮಹಾಜನಾಂಗವನ್ನು ಆಳುವದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ ಎಂದು ನುಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು