Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:23 - ಕನ್ನಡ ಸತ್ಯವೇದವು J.V. (BSI)

23 ಅನಂತರ ಅವನು ಸಮುದ್ರವೆನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅನಂತರ ಹೀರಾಮನು ಸಮುದ್ರ ಎನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ‍ ಚಂದ್ರಾಕಾರವಾಗಿಯೂ, ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ ಮತ್ತು ಸುತ್ತಳತೆ ಮೂವತ್ತು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅನಂತರ ಅವನು ‘ಕಡಲು’ ಎನಿಸಿಕೊಳ್ಳುವ ಎರಕದ ಒಂದು ಕೊಳವನ್ನು ಮಾಡಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ 4:4 ಮೀಟರ್ ಉದ್ದ ಇತ್ತು. ಅದರ ಎತ್ತರ 2:2 ಮೀಟರ್, ಸುತ್ತಳತೆ 13:2 ಮೀಟರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಂತರ ಹೀರಾಮನು ವೃತ್ತಾಕಾರದ ಹಿತ್ತಾಳೆಯ ತೊಟ್ಟಿಯನ್ನು ಮಾಡಿದನು. ಅವರು ಈ ತೊಟ್ಟಿಯನ್ನು “ಸಮುದ್ರ”ವೆಂದು ಕರೆದರು. ಆ ತೊಟ್ಟಿಯ ಸುತ್ತಳತೆಯು ನಲವತ್ತೈದು ಅಡಿಗಳು. ಅದರ ಒಂದು ಅಂಚಿನಿಂದ ಮತ್ತೊಂದು ಅಂಚಿಗೆ ಹದಿನೈದು ಅಡಿಗಳು ಮತ್ತು ಆಳ ಏಳುವರೆ ಅಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅನಂತರ ಅವನು ಸಮುದ್ರಪಾತ್ರೆ ಎಂದು ಕರೆಯಲಾಗುವ ಎರಕದ ದೊಡ್ಡ ಪಾತ್ರೆಯನ್ನು ಮಾಡಿಸಿದನು. ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಸುಮಾರು ನಾಲ್ಕು ಮೀಟರ್. ಅದರ ಎತ್ತರ ಸುಮಾರು ಎರಡು ಮೀಟರ್. ಸುತ್ತಳತೆ ಸುಮಾರು ಹದಿನಾಲ್ಕು ಮೀಟರಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:23
13 ತಿಳಿವುಗಳ ಹೋಲಿಕೆ  

ಅನಂತರ ಅವನು ಸಮುದ್ರವೆನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿಸಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ.


ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ ಪೀಠಗಳನ್ನೂ ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು


ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ ಪೀಠಗಳನ್ನೂ ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು ಅವುಗಳ ಎಲ್ಲಾ ತಾಮ್ರವನ್ನೂ


ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳನ್ನು ಹೊರುವ ಹನ್ನೆರಡು ತಾಮ್ರದ ಹೋರಿಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು.


ಇದಲ್ಲದೆ ಹದರೆಜರನ ಪಟ್ಟಣಗಳಾದ ಟಿಭತಿನಿಂದಲೂ ಕೂನಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು. ಸೊಲೊಮೋನನು ಆ ತಾಮ್ರದಿಂದ ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನೂ ಕಂಬಗಳನ್ನೂ ಬೇರೆ ಸಾಮಾನುಗಳನ್ನೂ ಮಾಡಿಸಿದನು.


ದೇವದರ್ಶನದ ಗುಡಾರದ ಬಾಗಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ತಾಮ್ರದ ದರ್ಪಣಗಳಿಂದ ಗಂಗಾಳವನ್ನೂ ಅದರ ಪೀಠವನ್ನೂ ಮಾಡಿದನು.


ಅರಸನಾದ ಆಹಾಜನು ಅಶ್ಶೂರದ ಅರಸನ ನಿವಿುತ್ತವಾಗಿ ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು; ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು; ಸಮುದ್ರವೆನಿಸುವ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಣಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.


ಅವನು ಕಂಬಗಳ ಮೇಲೆ ಕಮಲಾಲಂಕಾರವನ್ನು ಮಾಡಿ ಅವುಗಳ ಕೆಲಸವನ್ನು ತೀರಿಸಿದನು.


ಸಮುದ್ರವೆನಿಸಿಕೊಳ್ಳುವ ಪಾತ್ರೆಯು, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು, ಹಂಡೆ ಸಲಿಕೆ ಬೋಗುಣಿಗಳು ಇವೇ.


ಯೆಹೋವನು ಮೋಶೆಗೆ ಮತ್ತೂ ಹೇಳಿದ್ದೇನಂದರೆ -


ಯಾಜಕನಾದ ಊರೀಯನಿಗೆ - ಪ್ರಾತಃಕಾಲದ ಸರ್ವಾಂಗಹೋಮವನ್ನೂ ಸಾಯಂಕಾಲದ ನೈವೇದ್ಯವನ್ನೂ ಅರಸನು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಇವುಗಳನ್ನೂ ಜನರು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು; ಮತ್ತು ಸರ್ವಾಂಗ ಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿವಿುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವದಕ್ಕಾಗಿ ತಾಮ್ರವೇದಿಯನ್ನು ಉಪಯೋಗಿಸುವೆನು ಎಂದು ಹೇಳಿದನು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಯೆಹೂದದ ಮತ್ತು ಯೆರೂಸಲೇವಿುನ ಸಮಸ್ತ ಪ್ರಧಾನರನ್ನೂ ಯೆರೂಸಲೇವಿುನಿಂದ ಬಾಬೆಲಿಗೆ ಸೆರೆ ಒಯ್ದಾಗ ಕೆಲವು ಸಾಮಾನುಗಳನ್ನು ತೆಗೆದುಕೊಳ್ಳಲಿಲ್ಲವಲ್ಲಾ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು