16 ಆತನು - ನಾನು ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಆಳುವದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ ಎಂದು ಹೇಳಿದ್ದನು.
16 ಆತನು, ‘ನಾನು ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್ ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ’ ಎಂದು ಹೇಳಿದ್ದನು.
16 ‘ನಾನು ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಆಲಯ ಸ್ಥಾನವನ್ನಾಗಲಿ, ಇಸ್ರಯೇಲ್ ಕುಲಗಳ ಯಾವ ಪಟ್ಟಣವನ್ನಾಗಲಿ ಆರಿಸಿಕೊಳ್ಳಲಿಲ್ಲ. ಆದರೆ ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನು ಆರಿಸಿಕೊಂಡೆ’ ಎಂದು ಹೇಳಿದ್ದರು.
16 ‘ನಾನು ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದೆನು. ಆದರೆ ನನ್ನನ್ನು ಘನಪಡಿಸಿಕೊಳ್ಳುವುದಕ್ಕಾಗಿ ಆಲಯವೊಂದನ್ನು ಕಟ್ಟಲು ಇಸ್ರೇಲಿನ ಕುಲಗಳಿಂದ ನಾನಿನ್ನೂ ಯಾವ ನಗರವನ್ನು ಆರಿಸಿಕೊಂಡಿರಲಿಲ್ಲ. ಇಸ್ರೇಲಿನ ಜನರನ್ನಾಳುವ ನಾಯಕನನ್ನು ನಾನಿನ್ನೂ ಆರಿಸಿಕೊಂಡಿರಲಿಲ್ಲ, ಆದರೆ ನಾನೀಗ ಜೆರುಸಲೇಮನ್ನು ನನಗೆ ಸನ್ಮಾನವನ್ನು ತರುವಂಥ ಸ್ಥಳವನ್ನಾಗಿ ಆರಿಸಿಕೊಂಡಿರುವೆ. ಇಸ್ರೇಲಿನ ನನ್ನ ಜನರನ್ನು ಆಳಲು ದಾವೀದನನ್ನು ನಾನು ಆರಿಸಿಕೊಂಡಿರುವೆ’ ಎಂದು ಹೇಳಿದ್ದನು.
16 ‘ನನ್ನ ಜನರಾದ ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು, ನನ್ನ ನಾಮವು ಅದರಲ್ಲಿರುವ ಹಾಗೆ, ಆಲಯವನ್ನು ಕಟ್ಟುವುದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆಯ್ದುಕೊಳ್ಳದೆ, ನನ್ನ ಜನರಾದ ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನು ಆಯ್ದುಕೊಂಡೆನು,’ ಎಂಬುದು.
ಇಸ್ರಾಯೇಲ್ ದೇವರಾದ ಯೆಹೋವನು ನನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಾಯೇಲ್ಯರ ಅರಸನಾಗಿರುವದಕ್ಕೆ ಆರಿಸಿಕೊಂಡನು. ಆತನು ಯೆಹೂದಕುಲವು ರಾಜಕುಲವಾಗಬೇಕೆಂದು ನೇವಿುಸಿ ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡನು. ನನ್ನ ತಂದೆಯ ಎಲ್ಲಾ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ ಇಸ್ರಾಯೇಲ್ಯರೆಲ್ಲರ ಅರಸನನ್ನಾಗಿ ಮಾಡಿದನು.
ಈ ಸ್ಥಳವನ್ನು ಕುರಿತು - ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವದು ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸು.
ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ ಬೆಳೆಯ ದಶಮಾಂಶಗಳನ್ನೂ ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ
ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವದಾದರೆ ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ತಿರಿಗಿ ಬರಮಾಡುವೆನು ಎಂದು ಹೇಳಿದಿಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಬೇಕು, ಸ್ವಾಮೀ.
ಆತನು - ಇಸ್ರಾಯೇಲ್ಯರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗೋಸ್ಕರ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು ಎಂದು ಹೇಳಿದನು.
ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.
ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕೂ ತಾನು ವಾಸಮಾಡುವದಕ್ಕೂ ನಿಮ್ಮ ಎಲ್ಲಾ ಕುಲಗಳೊಳಗಿಂದ ಆದುಕೊಳ್ಳುವ ಸ್ಥಳದಲ್ಲೇ ನೀವು ಆತನ ದರ್ಶನಕ್ಕಾಗಿ ಕೂಡಬೇಕು.