Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:29 - ಕನ್ನಡ ಸತ್ಯವೇದವು J.V. (BSI)

29 ಈ ಸ್ಥಳವನ್ನು ಕುರಿತು - ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವದು ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ. ಇಲ್ಲಿ ನಿನ್ನ ಸೇವಕರು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವರಿಗೆ ಸದುತ್ತರವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವರೇ, ನಿಮ್ಮ ಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿಮ್ಮ ದಾಸನು ನಿಮ್ಮನ್ನು ಪ್ರಾರ್ಥಿಸುವಾಗಲೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ‘ಅಲ್ಲಿ ನಾನು ಸನ್ಮಾನಿಸಲ್ಪಡುವೆನು’ ಎಂದು ನೀನು ಬಹುಕಾಲದ ಹಿಂದೆ ಹೇಳಿರುವೆ. ಆದ್ದರಿಂದ ಈ ಆಲಯವನ್ನು ಹಗಲಿರುಳೂ ದೃಷ್ಟಿಸು. ನಾನು ಈ ಆಲಯದಲ್ಲಿ ನಿನಗೆ ಮಾಡುವ ಪ್ರಾರ್ಥನೆಯನ್ನು ದಯವಿಟ್ಟು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನಿಮ್ಮ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀವು ಕೇಳುವ ಹಾಗೆ, ‘ಇಲ್ಲಿ ನನ್ನ ನಾಮಪ್ರಭಾವ ಇರುವುದು,’ ಎಂದು ನೀವು ಹೇಳಿದ ಈ ಆಲಯದ ಮೇಲೆ ರಾತ್ರಿ ಹಗಲೂ ನಿಮ್ಮ ಕಟಾಕ್ಷವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:29
34 ತಿಳಿವುಗಳ ಹೋಲಿಕೆ  

ಈ ಸ್ಥಳವನ್ನು ಕುರಿತು - ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವದು ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ಪ್ರಾರ್ಥಿಸುವಾಗೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸು.


ಕೃಪೆಮಾಡಿ ಕಿವಿಗೊಡಬೇಕು, ಕಟಾಕ್ಷಿಸಬೇಕು; ನಿನ್ನ ಸೇವಕನ ಪ್ರಾರ್ಥನೆಯನ್ನು ಲಾಲಿಸಬೇಕು. ನಾನು ಈಗ ಹಗಲಿರುಳೂ ನಿನ್ನ ಸನ್ನಿಧಿಯಲ್ಲಿ ನಿನ್ನ ಸೇವಕರಾದ ಇಸ್ರಾಯೇಲ್ಯರಿಗೋಸ್ಕರ ಪ್ರಾರ್ಥಿಸುತ್ತಾ ಅವರು ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆಮಾಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಿಕರೂ ಆ ಪಾಪಗಳಲ್ಲಿ ಪಾಲುಗಾರರು.


ಆತನು - ನಾನು ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಆಳುವದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್‍ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ ಎಂದು ಹೇಳಿದ್ದನು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ ಬೆಳೆಯ ದಶಮಾಂಶಗಳನ್ನೂ ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ


ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳುಪ್ರದೇಶಗಳನ್ನೂ ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೆಂತಲ್ಲ, ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆಮಾಡುತ್ತಿದ್ದೇವೆ.


ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವದಾದರೆ ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ತಿರಿಗಿ ಬರಮಾಡುವೆನು ಎಂದು ಹೇಳಿದಿಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಬೇಕು, ಸ್ವಾಮೀ.


ಯೆಹೋವನು ಯೆರೂಸಲೇವಿುನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವದಕ್ಕಾಗಿ ಆರಿಸಿಕೊಂಡ


ಆತನು - ಇಸ್ರಾಯೇಲ್ಯರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗೋಸ್ಕರ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು ಎಂದು ಹೇಳಿದನು.


ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇವಿುನ ಕಡೆಗೆ ಕದವಿಲ್ಲದ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ಯಥಾಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರಸಲ್ಲಿಸಿದನು.


ಅವರು ಈ ದೇಶದಲ್ಲಿ ಇಳುಕೊಂಡು ಇದರಲ್ಲಿ ನಿನ್ನ ಹೆಸರಿಗೋಸ್ಕರ ಪವಿತ್ರಾಲಯವನ್ನು ಕಟ್ಟಿ -


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಟಿಯನ್ನು ಪ್ರಸರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿದ್ದೀ; ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುವವು ಎಂದು ಹೇಳಿದನು.


ನನ್ನ ದೇವರೇ, ಕಟಾಕ್ಷವಿಟ್ಟು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡು.


ತಾನು ಮಾಡಿಸಿದ ಅಶೇರವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ - ಇಸ್ರಾಯೇಲ್ಯರು ತಮಗೆ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವದಾದರೆ


ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕಾಗಿ ಆರಿಸಿಕೊಂಡ ಯೆರೂಸಲೇವಿುನ ದೇವಾಲಯದ ಎರಡು ಪ್ರಾಕಾರಗಳಲ್ಲಿಯೂ


ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವದಕ್ಕೋಸ್ಕರ ಹೇಳಿಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.


ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್‍ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.


ನಿನ್ನ ಸೇವಕನ ಮೇಲೆಯೂ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆಯೂ ಕಟಾಕ್ಷವಿಟ್ಟು ಅವರು ಪ್ರಾರ್ಥಿಸುವಾಗೆಲ್ಲಾ ಅವರ ವಿಜ್ಞಾಪನೆಗಳನ್ನು ಲಾಲಿಸು.


ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು; ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮಮಹತ್ತನ್ನು ತಿಳಿದು ನಿನ್ನ ಜನರಾದ ಇಸ್ರಾಯೇಲ್ಯರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು.


ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿಯೂ ನೀವು ಕೆಲವು ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಹೋಗಿ


ಆತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀವು ಐಗುಪ್ತದೇಶದಿಂದ ಹೊರಟುಬಂದ ಕಾಲವಾದ ಸೂರ್ಯಾಸ್ತಮಾನಕಾಲದಲ್ಲಿ ಅದನ್ನು ವಧಿಸಬೇಕು.


ನೀವು ಆಡುಕುರಿಗಳಲ್ಲಾಗಲಿ ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು.


ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಸರ್ವಾಂಗ ಹೋಮಮಾಡುವಾಗಲೂ ಸಮಾಧಾನ ಯಜ್ಞಮಾಡುವಾಗಲೂ ನಿಮ್ಮ ಕುರಿದನಗಳನ್ನು ಅಂಥ ವೇದಿಯಲ್ಲಿಯೇ ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ನಿಮ್ಮ ನೆನಪಿಗೆ ಬರಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.


ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.


ತಾನು ಮಾಡಿಸಿದ ವಿಗ್ರಹಸ್ತಂಭವನ್ನು ದೇವಾಲಯದಲ್ಲಿಡಿಸಿದನು; ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ - ಇಸ್ರಾಯೇಲ್ಯರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರವಿಧಿ ನ್ಯಾಯಗಳನ್ನು ಅನುಸರಿಸಿ ನಡೆಯುವದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲ್ಯರ ಎಲ್ಲಾ ಊರುಗಳೊಳಗೆ ನನಗೆ ಇಷ್ಟವಾಗಿರುವ ಯೆರೂಸಲೇವಿುನಲ್ಲಿಯೂ ಸದಾಕಾಲವಿರುವದು;


ಆತನು ಅವನಿಗೆ - ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.


ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು. ಆದರೆ ರಾಜ್ಯವನ್ನೆಲ್ಲಾ ಕಿತ್ತು ಕೊಳ್ಳುವದಿಲ್ಲ; ನನ್ನ ಸೇವಕನಾದ ದಾವೀದನಿಗೋಸ್ಕರವೂ ನಾನು ಆರಿಸಿಕೊಂಡ ಯೆರೂಸಲೇಮ್‍ಪಟ್ಟಣಕ್ಕೋಸ್ಕರವೂ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು ಎಂದು ಹೇಳಿದನು.


ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡ ಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ವಾಗ್ದಾನವನ್ನು ವಿಶೇಷರೀತಿಯಿಂದ ನೆರವೇರಿಸಿ ನಿನ್ನ ನಾಮಮಹತ್ತನ್ನು ಹೆಚ್ಚಿಸಿದ್ದೀ.


ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕೂ ತಾನು ವಾಸಮಾಡುವದಕ್ಕೂ ನಿಮ್ಮ ಎಲ್ಲಾ ಕುಲಗಳೊಳಗಿಂದ ಆದುಕೊಳ್ಳುವ ಸ್ಥಳದಲ್ಲೇ ನೀವು ಆತನ ದರ್ಶನಕ್ಕಾಗಿ ಕೂಡಬೇಕು.


ನಿಮ್ಮ ಕುಲಗಳಲ್ಲಿ ಯಾವದೋ ಒಂದು ಕುಲದಲ್ಲಿ ಯೆಹೋವನು ಆದುಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡಿಸಬೇಕು.


ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ನಾಲ್ವತ್ತೊಂದು ವರುಷದವನಾಗಿದ್ದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲ್ಯರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರುಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳಿಗೆ ತಬ್ಬಿಬ್ಬನ್ನು ಉಂಟುಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು