39 ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು; ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.
39 ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ, ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು. ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.
39 ಮನುಷ್ಯರ ಅಂತರಂಗಗಳನ್ನು ಬಲ್ಲಂಥ ನೀವು, ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ; ನೀವೊಬ್ಬರೇ ಎಲ್ಲಾ ಮಾನವರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡಿ.
39 ದಯವಿಟ್ಟು ಅವನ ಪ್ರಾರ್ಥನೆಯನ್ನು ನಿನ್ನ ನಿವಾಸವಾದ ಪರಲೋಕದಿಂದ ಆಲಿಸಿ, ಜನರನ್ನು ಕ್ಷಮಿಸಿ, ಅವರಿಗೆ ಸಹಾಯ ಮಾಡು. ಜನರು ನಿಜವಾಗಿ ಆಲೋಚಿಸುವ ಸಂಗತಿಗಳು ನಿನಗೆ ಮಾತ್ರ ತಿಳಿದಿವೆ. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಗೂ ತೀರ್ಪುನೀಡು ಮತ್ತು ಅವನಿಗೆ ನ್ಯಾಯವಾದದ್ದನ್ನು ಮಾಡು.
39 ನೀವು ವಾಸಮಾಡುವ ಪರಲೋಕದಿಂದ ಕೇಳಿ, ಮನ್ನಿಸಿ, ನಡೆಸಿರಿ. ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ.
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
ಮತ್ತೀಯನನ್ನೂ ನಿಲ್ಲಿಸಿ ಪ್ರಾರ್ಥನೆ ಮಾಡುತ್ತಾ - ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವದರಿಂದ ಆ ಸ್ಥಾನವನ್ನು ಹೊಂದುವದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿಕೊಂಡವನನ್ನು ತೋರಿಸಿಕೊಡು ಎಂದು ಹೇಳಿದರು.
ಆದರೆ ಯೆಹೋವನು ಸಮುವೇಲನಿಗೆ - ನೀನು ಅವನ ಚೆಲುವಿಕೆಯನ್ನೂ ನೀಳವನ್ನೂ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ ಅಂದನು.
ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.
ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.
ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ ಅವರಿಗೆ ಪಾಪ ಪರಿಹಾರವನ್ನು ಅನುಗ್ರಹಿಸು. ನೀನೊಬ್ಬನೇ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.
ಪರಲೋಕದಲ್ಲಿರುವ ನೀನು ಲಾಲಿಸಿ ನಿನ್ನ ಸೇವಕರೂ ಪ್ರಜೆಗಳೂ ಆದ ಇಸ್ರಾಯೇಲ್ಯರ ಪಾಪಗಳನ್ನು ಕ್ಷವಿುಸಿ ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿ ನಿನ್ನ ಪ್ರಜೆಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.
ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು; ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ ಅವನು ಅಪರಾಧಿಯೆಂದೂ ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.
ಇದಕ್ಕೆ ಸಾಕ್ಷಿ; ದೇವದೇವನಾದ ಯೆಹೋವನಿಗೆ ಇದು ಗೊತ್ತುಂಟು. ಇಸ್ರಾಯೇಲ್ಯರಿಗೂ ಗೊತ್ತಾಗುವದು. ನಾವು ದ್ರೋಹಿಗಳೂ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರೂ ಆಗಿದ್ದರೆ ಆತನು ನಮ್ಮನ್ನು ಈ ಹೊತ್ತೇ ಕೈಬಿಡಲಿ.
ವ್ಯಾಧಿಯಿಂದಾಗಲಿ ಬಾಧೆಯುಂಟಾಗುವಲ್ಲಿ ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲ್ಯರಾಗಲಿ ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ನಿನಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುವದಾದರೆ