Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:58 - ಕನ್ನಡ ಸತ್ಯವೇದವು J.V. (BSI)

58 ನಾವು ನಮ್ಮ ಪಿತೃಗಳಿಗೆ ಕೊಡಲ್ಪಟ್ಟ ಆಜ್ಞಾನಿಯಮ ವಿಧಿಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ನಾವು ನಮ್ಮ ಪೂರ್ವಿಕರಿಗೆ ಕೊಡಲ್ಪಟ್ಟ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿಕೊಳ್ಳಿಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

58 ನಮ್ಮ ಪೂರ್ವಜರಿಗೆ ಕೊಡಲಾದ ಆಜ್ಞಾನಿಯಮ ವಿಧಿಗಳನ್ನು ನಾವು ಕೈಗೊಂಡು, ದೈವಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 ಈ ರೀತಿಯಲ್ಲಿ ನಾವು ಆತನ ಕಡೆಗೆ ತಿರುಗಿ, ಆತನನ್ನು ಅನುಸರಿಸುವಂತೆ ಆತನು ಮಾಡಲಿ. ಆತನು ನಮ್ಮ ಪೂರ್ವಿಕರಿಗೆ ನೀಡಿದ ಎಲ್ಲ ಕಟ್ಟಳೆಗಳಿಗೆ, ತೀರ್ಪುಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗಿರಲು ಆಗ ನಮಗೆ ಸಾಧ್ಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

58 ನಮ್ಮ ಪಿತೃಗಳಿಗೆ ಕೊಟ್ಟ ಆಜ್ಞೆಗಳನ್ನು, ಅಪ್ಪಣೆಗಳನ್ನು, ನಿಯಮಗಳನ್ನು ಕೈಗೊಂಡು ಅವರ ಎಲ್ಲಾ ಮಾರ್ಗಗಳಲ್ಲಿ ನಡೆಯಲು ಅವರು ನಮ್ಮ ಹೃದಯಗಳನ್ನು ಅವರ ಕಡೆಗೆ ತಿರುಗಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:58
12 ತಿಳಿವುಗಳ ಹೋಲಿಕೆ  

ನನ್ನ ಮನಸ್ಸನ್ನು ದ್ರವ್ಯಾಶೆಗಲ್ಲ, ನಿನ್ನ ಕಟ್ಟಳೆಗಳಿಗೆ ತಿರುಗಿಸು.


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ನೀವು ತನ್ನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಯನ್ನು ನಿಮಗೆ ಅನುಗ್ರಹಿಸಲಿ. ಆತನು ಯೇಸು ಕ್ರಿಸ್ತನ ಮೂಲಕ ತನಗೆ ಸಮರ್ಪಕವಾದದ್ದನ್ನು ನಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ಯಾಕಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.


ನನ್ನನ್ನು ತುಸು ಎಳೆ; ನಿನ್ನ ಹಿಂದೆ ಓಡಿ ಬರುವೆವು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ದ್ರಾಕ್ಷಾರಸಕ್ಕಿಂತಲೂ ನಿನ್ನ ಲಾಲನೆಯನ್ನು ಹೆಚ್ಚಾಗಿ ಕೊಂಡಾಡುವೆವು; ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.


ನೀವು ಹೊಳೆ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ವಿಧಿನಿರ್ಣಯಗಳೂ ಇವೇ.


ಇಸ್ರಾಯೇಲ್ಯರು ಐಗುಪ್ತದೇಶದಿಂದ ಬಂದಾಗ ಯೊರ್ದನ್ ಹೊಳೆಯ ಆಚೆ ಬೇತ್‍ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೆಷ್ಬೋನಿನಲ್ಲಿ ವಾಸಿಸಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆ ಇಸ್ರಾಯೇಲ್ಯರಿಗೆ ತಿಳಿಸಿದ ಆಜ್ಞಾವಿಧಿನಿರ್ಣಯಗಳು ಇವೇ. (ಮೋಶೆಯೂ ಇಸ್ರಾಯೇಲ್ಯರೂ ಐಗುಪ್ತದೇಶದಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು.


ಇಸ್ರಾಯೇಲ್ಯರೇ, ಕೇಳಿರಿ; ನೀವು ಬದುಕಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಂತೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವಕ ಸೈನಿಕರು ಉದಯಕಾಲದ ಇಬ್ಬನಿಯಂತಿರುವರು.


ಆಗ ಯೆಹೋಶುವನು ಅವರಿಗೆ - ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೆಗೆದು ಹಾಕಿ ಇಸ್ರಾಯೇಲ್‍ದೇವರಾದ ಯೆಹೋವನ ಕಡೆಗೆ ಮನಸ್ಸನ್ನು ತಿರುಗಿಸಿಕೊಳ್ಳಿರಿ ಅಂದನು.


ನಾನು ಈಗ ನಮ್ಮ ದೇವರಾದ ಯೆಹೋವನಿಗೆ ಮಾಡಿದ ಪ್ರಾರ್ಥನೆಯು ಹಗಲಿರುಳು ಆತನ ಜ್ಞಾಪಕದಲ್ಲಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು