Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:20 - ಕನ್ನಡ ಸತ್ಯವೇದವು J.V. (BSI)

20 ಜ್ಞಾನಿಯು ಎಲ್ಲಿ? ಶಾಸ್ತ್ರಿಯೆಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕಜ್ಞಾನವನ್ನು ಹುಚ್ಚುತನವಾಗ ಮಾಡಿದ್ದಾನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹೀಗಿರುವಾಗ ಜ್ಞಾನಿಯೆಲ್ಲಿ? ಶಾಸ್ತ್ರಜ್ಞನೆಲ್ಲಿ? ಜಗತ್ತಿನ ತರ್ಕನಿಪುಣನೆಲ್ಲಿ? ಪ್ರಪಂಚದ ಜ್ಞಾನವನ್ನು ದೇವರು ಹುಚ್ಚುತನವಾಗಿಸಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜ್ಞಾನಿಯು ಎಲ್ಲಿದ್ದಾನೆ? ವಿದ್ಯಾವಂತನು ಎಲ್ಲಿದ್ದಾನೆ? ಈ ಕಾಲದ ತತ್ವಜ್ಞಾನಿಯು ಎಲ್ಲಿದ್ದಾನೆ? ದೇವರು ಲೋಕದ ಜ್ಞಾನವನ್ನು ಮೂರ್ಖತನವನ್ನಾಗಿ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಜ್ಞಾನಿಯಾದ ಮನುಷ್ಯನೆಲ್ಲಿ? ಪಂಡಿತನು ಎಲ್ಲಿ? ಈ ಕಾಲದ ತತ್ವಜ್ಞಾನಿ ಎಲ್ಲಿ? ಈ ಲೋಕದ ಜ್ಞಾನವನ್ನು ದೇವರು ಬುದ್ದಿಹೀನತೆಯನ್ನಾಗಿ ಮಾಡಿದ್ದಾರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಶಾನೊ ಮಾನುಸ್ ಅತ್ತಾ ಖೈ ಹಾಯ್? ಶಾಸ್ತರಾ ಶಿಕ್ವುತಲೊ ಖೈ ಹಾಯ್? ಚರ್ಚಾ ಕರ್‍ತಲಿ ಅಮ್ಚ್ಯಾ ಹ್ಯಾ ಕಾಲಾಚಿ ಲೈ ಶಿಕಲ್ಲಿ ಲೊಕಾ ಖೈ ಗೆಲ್ಲಿ ಹಾತ್? ಹ್ಯಾ ಜಗಾಚೆ ಶಾನ್‍ಪಾನ್‍ ದೆವಾನ್ ಪಿಶೆಪಾನ್‍ ಸರ್ಕೆ ಕರುನ್ ಟಾಕ್ಲಾ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:20
28 ತಿಳಿವುಗಳ ಹೋಲಿಕೆ  

ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.


ಮಂತ್ರಿಗಳನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ನ್ಯಾಯಾಧಿಪತಿಗಳನ್ನು ಹುಚ್ಚರನ್ನಾಗಿ ಮಾಡುವನು.


ಯಾಕಂದರೆ ಇಹಲೋಕ ಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡುಕೊಳ್ಳುತ್ತಾನೆಂತಲೂ


ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ನಿರಾಕರಿಸುವೆನು ಎಂಬದಾಗಿ ಶಾಸ್ತ್ರೋಕ್ತಿಯುಂಟಲ್ಲಾ.


ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ ಕಣಿಹೇಳುವವರನ್ನು ಮರುಳುಗೊಳಿಸಿ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಹುಚ್ಚುತನವಾಗಮಾಡಿ


ಪ್ರಜಾಪ್ರಮುಖರ ಬುದ್ಧಿಯನ್ನು ತೊಲಗಿಸಿ ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವನು.


ಆದರೂ ಪ್ರವೀಣರಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಇಲ್ಲದೆ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.


ನಾವು ಕೇಳಿದ ಸಂಗತಿಯನ್ನು [ನಮ್ಮಲ್ಲಿ] ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?


ಆಗ ನೀವು [ಹಿಂದಿನ] ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ - [ಕಪ್ಪವನ್ನು] ಲೆಕ್ಕಿಸಿದವನು ಎಲ್ಲಿ, ತೂಕಮಾಡಿದವನು ಎಲ್ಲಿ, ಬುರುಜುಗಳನ್ನು ಗಣಿಸಿದವನು ಎಲ್ಲಿ ಅಂದುಕೊಳ್ಳುವಿರಿ.


ಆಲೋಚನಾಕರ್ತರ ವಾಕ್ಚಾತುರ್ಯವನ್ನು ಹಾರಿಸಿ ಹಿರಿಯರ ವಿವೇಕವನ್ನು ತೆಗೆದುಹಾಕುವನು.


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದು ಕತ್ತೆಗೆ ತಡಿಹಾಕಿಸಿ ಕೂತುಕೊಂಡು ತನ್ನ ಊರಿಗೆ ಹೋಗಿ ಮನೆಯಲ್ಲಿ ವ್ಯವಸ್ಥೆಮಾಡಿ ಉರ್ಲುಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು.


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್ಯರೂ ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೇದಾಗಿದೆ ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟು ಮಾಡಬೇಕೆಂದು ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದನು.


ಆ ಕಾಲದಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿಗಿರುವಷ್ಟು ಬೆಲೆಯಿತ್ತು. ದಾವೀದನೂ ಅಬ್ಷಾಲೋಮನೂ ಅವನ ಆಲೋಚನೆಗಳನ್ನು ಗೌರವಿಸುತ್ತಿದ್ದರು.


ಅಬ್ಷಾಲೋಮನ ಸಂಗಡ ಒಳಸಂಚುಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು - ಯೆಹೋವನೇ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು ಎಂದು ಪ್ರಾರ್ಥಿಸಿದನು.


ಜನಾಂಗಗಳ ಅರಸನೇ, ಯಾರು ನಿನಗೆ ಅಂಜದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ ರಾಜಪರಂಪರೆಯಲ್ಲಿಯೂ ನಿನ್ನ ಸಮಾನನು ಯಾವನೂ ಇಲ್ಲವಷ್ಟೆ.


ಒಬ್ಬನು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ ಐಶ್ವರ್ಯದಿಂದುಂಟಾಗುವ ಮೋಸವೂ ಆ ವಾಕ್ಯವನ್ನು ಅಡಗಿಸಿಬಿಡುವದರಿಂದ, ಫಲವನ್ನು ಕೊಡದೆ ಇರುತ್ತಾನೆ; ಇವನೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವನು.


ಈಗ ಈ ಲೋಕಕ್ಕೆ ತೀರ್ಪು ಆಗುತ್ತದೆ; ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು.


ಇದಲ್ಲದೆ ಎಪಿಕೂರಿಯರು ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು - ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ? ಅಂದರು. ಅವನು ಯೇಸುವಿನ ವಿಷಯವಾಗಿಯೂ ಸತ್ತವರು ಎದ್ದುಬರುವರೆಂಬುವ ವಿಷಯವಾಗಿಯೂ ಸಾರುತ್ತಿದ್ದದರಿಂದ - ಇವನು ಅನ್ಯದೇಶದ ದೈವಗಳನ್ನು ಪ್ರಸಿದ್ಧಿಪಡಿಸುವವನಾಗಿ ತೋರುತ್ತಾನೆಂದು ಬೇರೆ ಕೆಲವರು ಹೇಳಿದರು.


ಹೇಗಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯಶಕ್ತಿಯೂ ದೇವತ್ವವೂ ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತವೆ; ಹೀಗಿರುವದರಿಂದ ಅವರು ಉತ್ತರವಿಲ್ಲದವರಾಗಿದ್ದಾರೆ.


ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ. ನಿಮ್ಮೊಳಗೆ ಲೌಕಿಕ ದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಅಧಿಕಾರಿಗಳೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.


ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಠರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;


ದೇವರು ಈ ಲೋಕದ ಕುಲಹೀನರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವದಕ್ಕಾಗಿ ಗಣನೆಗೆ ಬಾರದವರನ್ನು ಆರಿಸಿಕೊಂಡಿದ್ದಾನೆ. ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.


ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;


ಯಾವನೂ ತನ್ನನ್ನು ತಾನೇ ಮೋಸಗೊಳಿಸದಿರಲಿ. ತಾನು ನಿಮ್ಮಲ್ಲಿ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವವನು ಜ್ಞಾನಿಯಾಗುವಂತೆ ಹುಚ್ಚನಾಗಲಿ.


ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬದು ನಿಮಗೆ ತಿಳಿಯದೋ? ಲೋಕವು ನಿವ್ಮಿುಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪ ಸಂಗತಿಗಳನ್ನು ಕುರಿತು ತೀರ್ಪುಮಾಡುವದಕ್ಕೆ ಅಯೋಗ್ಯರಾಗಿದ್ದೀರೋ?


ಆದರೆ ನಾವು ಕರ್ತನ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು - ಇವರಿಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ಶಿಕ್ಷಿಸುತ್ತಾನೆ. ಆದಕಾರಣ ನನ್ನ ಸಹೋದರರೇ,


ವ್ಯಭಿಚಾರಿಗಳು ನೀವು; ಇಹಲೋಕಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು