Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:27 - ಕನ್ನಡ ಸತ್ಯವೇದವು J.V. (BSI)

27 ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಠರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಜ್ಞಾನಿಗಳನ್ನು ನಾಚಿಕೆಗೀಡುಮಾಡಲು ದೇವರು ಲೋಕದ ದೃಷ್ಟಿಯಲ್ಲಿ ಮೂರ್ಖರನ್ನು ಆರಿಸಿಕೊಂಡರು; ಅಂತೆಯೇ ಬಲಿಷ್ಠರನ್ನು ಲಜ್ಜೆಗೀಡುಮಾಡಲು ಲೋಕದ ದೃಷ್ಟಿಯಲ್ಲಿ ಬಲಹೀನರನ್ನು ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ದೇವರು ಈ ಲೋಕದ ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಮೂಢರನ್ನು ಆರಿಸಿಕೊಂಡಿದ್ದಾನೆ; ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಬಲಹೀನರನ್ನು ಆರಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವಂತೆ, ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾರೆ. ದೇವರು ಬಲಿಷ್ಠರನ್ನು ನಾಚಿಕೆಪಡಿಸುವಂತೆ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖರೆ ಶಾನ್ಯಾಕ್ನಿ ಲಜ್ಜಾ ಕರಿಸರ್ಕೆ ಕರುಸಾಟ್ನಿ ದೆವಾನ್ ಮುದ್ದಮ್ ಹ್ಯಾ ಜಗಾಕ್ ಪಿಶೆಪಾನ್ ಸರ್ಕೆ ದಿಸ್ತಲೆ ಎಚುನ್ ಘೆಟ್ಲ್ಯಾನ್ ಅನಿ ಘಟ್ಮುಟ್ ಮನುನ್ ಅಸಲ್ಲ್ಯಾಕ್ನಿ ಲಜ್ಜಾ ಕರಿಸರ್ಕೆ ಕರುಕ್ ಹ್ಯಾ ಜಗಾತ್ ಬಳ್ ನಸಲ್ಲೆ ತೆನಿ ಎಚುಕ್ ಕಾಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:27
27 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?


ಆ ಸಮಯದಲ್ಲಿ ಯೇಸು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಜ್ಞಾನಿಯು ಎಲ್ಲಿ? ಶಾಸ್ತ್ರಿಯೆಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕಜ್ಞಾನವನ್ನು ಹುಚ್ಚುತನವಾಗ ಮಾಡಿದ್ದಾನಲ್ಲವೇ.


ನಿನಗೆ ವಿರೋಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವದಕ್ಕೋಸ್ಕರ ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.


ಹೀಗಿರುವದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕಾಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವದು, ವಿವೇಕಿಗಳ ವಿವೇಕವು ಅಡಗುವದು ಎಂದು ಹೇಳಿದನು.


ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಬಲಾಧಿಕ್ಯವು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂದು ತೋರುವದಕ್ಕಾಗಿ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.


ಆತನಿಗೆ - ಇವರು ಹೇಳುವದನ್ನು ಕೇಳುತ್ತೀಯಾ ಎಂದು ಹೇಳಲು ಯೇಸು - ಹೌದು, ಕೇಳುತ್ತೇನೆ, ಸಣ್ಣ ಮಕ್ಕಳ ಬಾಯಿಂದಲೂ ಮೊಲೇಕೂಸುಗಳ ಬಾಯಿಂದಲೂ ಸ್ತೋತ್ರವನ್ನು ಸಿದ್ಧಿಗೆ ತಂದಿ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ? ಅಂದನು.


ದೀನದರಿದ್ರಜನವನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು.


ಅವನಿಂದ ಬಂದ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆ ಬಾರದ್ದು ಅನ್ನುತ್ತಾರೆ.


ದೀನರು ಯೆಹೋವನಲ್ಲಿ ಹೆಚ್ಚುಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲ್ಯರ ಸದಮಲಸ್ವಾವಿುಯಲ್ಲಿ ಉಲ್ಲಾಸಿಸುವರು.


ಯೇಸು ಅಲ್ಲಿಂದ ಹೋಗುತ್ತಿರುವಾಗ ಸುಂಕಕ್ಕೆ ಕೂತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ - ನನ್ನನ್ನು ಹಿಂಬಾಲಿಸು ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.


ಇದಲ್ಲದೆ ಎಪಿಕೂರಿಯರು ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು - ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ? ಅಂದರು. ಅವನು ಯೇಸುವಿನ ವಿಷಯವಾಗಿಯೂ ಸತ್ತವರು ಎದ್ದುಬರುವರೆಂಬುವ ವಿಷಯವಾಗಿಯೂ ಸಾರುತ್ತಿದ್ದದರಿಂದ - ಇವನು ಅನ್ಯದೇಶದ ದೈವಗಳನ್ನು ಪ್ರಸಿದ್ಧಿಪಡಿಸುವವನಾಗಿ ತೋರುತ್ತಾನೆಂದು ಬೇರೆ ಕೆಲವರು ಹೇಳಿದರು.


ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.


ಅವರು ಯಾವ ಮೋಶೆಯನ್ನು - ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರೆಂದು ಹೇಳಿ ಬೇಡವೆಂದರೋ ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ ಬಿಡುಗಡೆಮಾಡುವವನನ್ನಾಗಿಯೂ ನೇವಿುಸಿದನು.


ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ ಕಣಿಹೇಳುವವರನ್ನು ಮರುಳುಗೊಳಿಸಿ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಹುಚ್ಚುತನವಾಗಮಾಡಿ


ಜ್ಞಾನಿಗಳು ಆಶಾಭಂಗಪಟ್ಟು ಬೆಬ್ಬರಬಿದ್ದು ಸಿಕ್ಕಿಕೊಂಡಿದ್ದಾರೆ; ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು;


ಹೇಗಂದರೆ ಲೋಕವು ಜ್ಞಾನವೆನಿಸುವ ಮಾರ್ಗದಿಂದ ದೇವರನ್ನು ತಿಳುಕೊಳ್ಳದೆ ಹೋದದ್ದು ದೇವರ ಜ್ಞಾನದ ಸಂಕಲ್ಪವೆ; ಹೀಗಾದ ಮೇಲೆ ಹುಚ್ಚು ಮಾತು ಎಣಿಸಿಕೊಂಡಿರುವ ನಮ್ಮ ಪ್ರಸಂಗದಿಂದಲೇ ನಂಬುವವರನ್ನು ರಕ್ಷಿಸುವದು ದೇವರಿಗೆ ಒಳ್ಳೇದೆಂದು ತೋಚಿತು.


ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ದಯಪಾಲಿಸಿರುವ ಕೃಪಾವರಗಳನ್ನು ತಿಳುಕೊಳ್ಳುವದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದೆವು.


ಅದಕ್ಕೆ ಆ ಕತ್ತೆ - ನಿನ್ನ ಜೀವಮಾನವೆಲ್ಲಾ ಇಂದಿನವರೆಗೂ ನೀನು ಹತ್ತುತ್ತಾ ಇರುವ ನಿನ್ನ ಕತ್ತೆಯು ನಾನಲ್ಲವೇ; ನಾನು ಯಾವಾಗಲಾದರೂ ಈ ರೀತಿಯಾಗಿ ಮಾಡಿದ್ದುಂಟೋ ಅಂದಾಗ ಬಿಳಾಮನು ಇಲ್ಲವೆಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು