Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:30 - ಕನ್ನಡ ಸತ್ಯವೇದವು J.V. (BSI)

30 ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಕಶ್ಯಾಕ್ ಮಟ್ಲ್ಯಾರ್ ದೆವಾಕ್ ಲಾಗುನುಚ್ ತುಮಿ ಕ್ರಿಸ್ತಾಚ್ಯಾ ಎಕ್ವಟ್ಟಾತ್ ಹಾಶಿ. ದೆವಾನ್ ಜೆಜು ಕ್ರಿಸ್ತಾಕುಚ್ ಅಮ್ಚೆ ಶಾನ್‍ಪಾನ್ ಕರ್‍ಲ್ಯಾನಾಯ್, ತೆನಿಚ್ ತೆಕಾ ಅಮ್ಚೆ ಭಕ್ತಿಪಾನ್, ಅಮ್ಚೆ ಪವಿತ್ರಪಾನ್ ಅನಿ ಅಮ್ಚಿ ಸುಟ್ಕಾ ಕರ್‍ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:30
76 ತಿಳಿವುಗಳ ಹೋಲಿಕೆ  

ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.


ಇದರಲ್ಲಿ ನನ್ನ ಉದ್ದೇಶವೇನಂದರೆ - ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ನೇಮನಿಷ್ಠೆಗಳ ಫಲವಾಗಿರುವ ಸ್ವನೀತಿಯನ್ನಾಶ್ರಯಿಸದೆ ಕ್ರಿಸ್ತನನ್ನು ನಂಬುವದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿ ಕಾಣಿಸಿಕೊಳ್ಳಬೇಕೆಂಬದೇ.


ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ.


ಸೊಸ್ಥೆನನೂ ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತೇಸುವಿನಲ್ಲಿ ಪ್ರತಿಷ್ಠಿತರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ನಮಗೂ ಸಮಸ್ತ ದೇವಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರು ಎಲ್ಲಿದ್ದರೂ


ನಾವು ಆತನ ನಿರ್ಮಾಣ; ಸತ್ಕಾರ್ಯಗಳನ್ನು ಮಾಡುವದಕ್ಕಾಗಿಯೇ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟೆವು. ನಾವು ಸತ್ಕಾರ್ಯಗಳನ್ನು ನಡಿಸುವವರಾಗಿ ಬದುಕಬೇಕೆಂದು ದೇವರು ನಮ್ಮನ್ನು ಮೊದಲೇ ನೇವಿುಸಿದನು.


ಆ ಕುಮಾರನಲ್ಲಿ ನಮ್ಮ ಪಾಪಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಲ್ಲಿಯೂ ತೊಳೆದುಕೊಂಡಿರಿ, ದೇವಜನರಾದಿರಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇವಿುನವರು ನೆಮ್ಮದಿಯಾಗಿ ವಾಸಿಸುವರು; ಯೆಹೋವ ಚಿದ್ಕೇನು [ಅಂದರೆ ಯೆಹೋವನೇ ನಮ್ಮ ಸದ್ಧರ್ಮ] ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವದು.


ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.


ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ


ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ದುಷ್ಟಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕೆ ಅನುಸಾರವಾಗಿ ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿದನು.


ಆದರೆ ದೇವರಿಂದ ಕರಿಸಿಕೊಂಡವರು ಯೆಹೂದ್ಯರಾಗಲಿ ಗ್ರೀಕರಾಗಲಿ ಅವರಿಗೆ ಇಂಥವನು ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿರುವ ಕ್ರಿಸ್ತನೇ.


ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ; ಇವರು ಕನ್ಯೆಯರಂತೆ ನಿಷ್ಕಳಂಕರು. ಯಜ್ಞದ ಕುರಿಯಾದಾತನು ಎಲ್ಲಿ ಹೋದರೂ ಇವರು ಆತನ ಹಿಂದೆ ಹೋಗುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ -


ಆತನು ಅದನ್ನು ಪ್ರತಿಷ್ಠೆಪಡಿಸುವದಕ್ಕಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಆ ಆತ್ಮನಿಗೆ ಅನುಗುಣವಾಗಿ ವಿದ್ಯಾವಾಕ್ಯವು,


ಹೇಗಂದರೆ ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ; ಇವರು ಆ ಮಾತುಗಳನ್ನು ಕೈಕೊಂಡು ನನ್ನನ್ನು ನಿನ್ನ ಬಳಿಯಿಂದ ಹೊರಟುಬಂದವನೆಂದು ನಿಜವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ನಂಬಿದ್ದಾರೆ.


ಹೋತಗಳ ಮತ್ತು ಹೋರಿಕರಗಳ ರಕ್ತವನ್ನು ತೆಗೆದುಕೊಳ್ಳದೆ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ದೇವರ ಸನ್ನಿಧಾನಕ್ಕೆ ಪ್ರವೇಶಿಸಿದನು.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ದೇವರು ಸಂಪಾದಿಸಿಕೊಂಡ ಜನರಿಗೆ ವಿಮೋಚನೆಯಾಗುವದೆಂಬದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಆ ವಿಮೋಚನೆಯು ದೇವರ ಮಹಿಮೆಗೆ ಎಷ್ಟೋ ಪ್ರಖ್ಯಾತಿಯನ್ನು ಉಂಟುಮಾಡುವದು.


ನೀವು ಕ್ರಿಸ್ತನ ದೇಹವು, ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ.


ಇದು ಮಾತ್ರವಲ್ಲದೆ ಪ್ರಥಮ ಫಲವಾಗಿರುವ ಪವಿತ್ರಾತ್ಮವರವನ್ನು ಹೊಂದಿದ ನಾವಾದರೂ ದೇವಪುತ್ರರ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತೇವೆ.


ನೀವಾದರೋ, ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವದಾದರೆ ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾವನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವನಲ್ಲ.


ಹೀಗೆ ಪಾಪವು ಮರಣವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯನ್ನು ಕೊಟ್ಟು ನಿತ್ಯಜೀವವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸುವದು.


ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು.


ದೇವರು ಆತನನ್ನು ನಮ್ಮ ಅಪರಾಧಗಳ ನಿವಿುತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ನಿವಿುತ್ತ ಜೀವದಿಂದ ಎಬ್ಬಿಸಿದನು.


ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗಂದರೆ -


ಯೇಸು ತಿರಿಗಿ ಅವರ ಸಂಗಡ ಮಾತಾಡಲಾರಂಭಿಸಿ - ನಾನೇ ಲೋಕಕ್ಕೆ ಬೆಳಕು; ನನ್ನನ್ನು ಅನುಸರಿಸುವವನು ಕತ್ತಲೆಯಲ್ಲಿ ನಡೆಯದೆ ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು ಎಂದು ಹೇಳಿದನು.


ದೇವರನ್ನು ಯಾರೂ ಎಂದೂ ಕಂಡಿಲ್ಲ; ಯಾವನು ಏಕಪುತ್ರನೂ ಸ್ವತಃ ದೇವರೂ ಆಗಿದ್ದು ತಂದೆಯ ಎದೆಯಲ್ಲಿದ್ದಾನೋ ಆತನೇ ತಿಳಿಯಪಡಿಸಿದನು.


ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಆಕೆಯು ಒಬ್ಬ ಮಗನನ್ನು ಹಡೆಯುವಳು; ನೀನು ಆತನಿಗೆ ಯೇಸು ಎಂದು ಹೆಸರಿಡಬೇಕು; ಯಾಕಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ಕಾಯುವನು ಅಂದನು.


ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳೆಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ದೇವರ ನಾಮಕ್ಕೆ ಯುಗಯುಗಾಂತರಗಳಲ್ಲಿಯೂ ಕೊಂಡಾಟವಾಗಲಿ! ಜ್ಞಾನತ್ರಾಣಗಳು ಆತನವುಗಳೇ.


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ಈತನು, ಅಂದರೆ ಯೇಸು ಕ್ರಿಸ್ತನು, ನೀರಿನಿಂದಲೂ ರಕ್ತದಿಂದಲೂ ಸಾಕ್ಷಿಹೊಂದಿದವನು. ನೀರಿನಿಂದ ಮಾತ್ರವಲ್ಲ, ನೀರಿನಿಂದಲೂ ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಸಕಲಜ್ಞಾನದಿಂದ ಕೂಡಿದವರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿಕೊಳ್ಳಿರಿ, ಬುದ್ಧಿಹೇಳಿಕೊಳ್ಳಿರಿ; ಕರ್ತನ ಕೃಪೆಯನ್ನು ನೆನಸಿಕೊಳ್ಳುವವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಗಾನಮಾಡಿರಿ.


ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನಗೆ ಸರಿಯಾಗಿ ತೋಚಿದ ಪ್ರಕಾರ ದೇಹದೊಳಗೆ ಇಟ್ಟಿದ್ದಾನೆ.


ನನ್ನ ಸ್ವಜನದವನಾದ ಹೆರೊಡಿಯೋನನಿಗೆ ವಂದನೆ. ನಾರ್ಕಿಸ್ಸನ ಮನೆಯವರೊಳಗೆ ಕ್ರಿಸ್ತನನ್ನು ನಂಬಿದವರಿಗೆ ವಂದನೆಗಳು.


ನನ್ನ ಸ್ವಜನರೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರೆ, ಮತ್ತು ನನಗಿಂತ ಮುಂಚೆ ಕ್ರಿಸ್ತನನ್ನು ನಂಬುವವರಾದರು.


ಹಾಗೆಯೇ ನಾವೆಲ್ಲರು ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ಪರಸ್ಪರ ಅಂಗಗಳಾಗಿದ್ದೇವೆ.


ಸಮಸ್ತವು ಆತನಿಂದ ಉತ್ಪತ್ತಿಯಾಗಿ ಆತನಿಂದ ನಡೆಯುತ್ತಾ ಆತನಿಗಾಗಿ ಇರುತ್ತದೆ; ಆತನಿಗೇ ಸದಾಕಾಲವೂ ಸ್ತೋತ್ರ. ಆಮೆನ್.


ಹೇಗಂದರೆ ದೇವರಿಂದ ದೊರಕುವ ನೀತಿಯು ಅದರಲ್ಲಿ ತೋರಿಬರುತ್ತದೆ. ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುವಂಥದಾಗಿದೆ.


ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.


ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ, ಇನ್ನೂ ತಿಳಿಸುವೆನು. ನೀನು ನನ್ನ ಮೇಲೆ ಇಟ್ಟಂಥ ಪ್ರೀತಿಯು ಅವರಲ್ಲಿ ಇರಬೇಕೆಂದೂ ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ ಅಂದನು.


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ ಎಂದು ಯೆಹೋವನು ಅನ್ನುತ್ತಾನೆ.


ಇಸ್ರಾಯೇಲಿಗೋ ಯೆಹೋವನಿಂದ ಶಾಶ್ವತರಕ್ಷಣೆ ದೊರೆಯುವದು; ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವದಿಲ್ಲ, ಮಾನಭಂಗಪಡುವದಿಲ್ಲ.


ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿರಿ.


ಜ್ಞಾನವೆಂಬಾಕೆಯು ಬೀದಿಗಳಲ್ಲಿ ಕೂಗುತ್ತಾಳೆ, ಚೌಕಗಳಲ್ಲಿ ದನಿಗೈಯುತ್ತಾಳೆ.


ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೆಯ ಆಕಾಶದ ಪರಿಯಂತರಕ್ಕೂ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆ, ದೇವರೇ ಬಲ್ಲನು.


ಆ ಅಂಕುರದ ಮೇಲೆ ಜ್ಞಾನವಿವೇಕದಾಯಕ ಆತ್ಮ, ಆಲೋಚನಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆಯನ್ನೂ ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವದು;


ಆದದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ - ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲ್ಲುವರು; ಕೆಲವರನ್ನು ಹಿಂಸೆಪಡಿಸುವರು.


ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹುಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರಮಾಡಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮಪ್ರಾಣಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಕಾಣಿಸುವಂತೆ ಕಾಪಾಡಲ್ಪಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು