Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:7 - ಕನ್ನಡ ಸತ್ಯವೇದವು J.V. (BSI)

7 ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು; ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು, ಕುಣಿದಾಡುವದಕ್ಕೆ ಎದ್ದರು ಎಂದು ಬರೆದದೆಯಲ್ಲಾ; ನೀವು ವಿಗ್ರಹಾರಾಧಕರಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು, “ಜನರು ತಿನ್ನುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು. ಕಾಮಾಭಿಲಾಷೆಯಿಂದ ಕುಣಿದಾಡುವುದಕ್ಕೆ ಎದ್ದರು” ಎಂದು ಬರೆದಿದೆಯಲ್ಲಾ. ನೀವು ಅವರ ಹಾಗೆ ವಿಗ್ರಹಾರಾಧಕರಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರಲ್ಲಿ ಕೆಲವರು ವಿಗ್ರಹಾರಾಧಕರಾದಂತೆ ನಾವು ಆಗಬಾರದು. ಇವರನ್ನು ಕುರಿತೇ : “ತಿನ್ನಲೆಂದು ಕುಡಿಯಲೆಂದು ಕುಳಿತರು ಕುಣಿಯಲೆಂದು ಕಾಮವೆದ್ದು ನಿಂತರು ಈ ಜನರು” - ಎಂದು ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರಲ್ಲಿ ಕೆಲವರು ಮಾಡಿದಂತೆ ನೀವು ವಿಗ್ರಹಗಳನ್ನು ಪೂಜಿಸಬೇಡಿ. “ಜನರು ತಿನ್ನಲು, ಕುಡಿಯಲು ಕುಳಿತುಕೊಂಡರು; ನೃತ್ಯ ಮಾಡಲು ಎದ್ದುನಿಂತರು” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿ ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು, ಕುಣಿದಾಡುವುದಕ್ಕೆ ಎದ್ದರು,” ಎಂದು ಬರೆದಿರುವಂತೆ ನೀವೂ ವಿಗ್ರಹಾರಾಧಕರಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಂಚ್ಯಾತ್ಲ್ಯಾ ಉಲ್ಲ್ಯಾನಿ ಮುರ್ತಿಚಿ ಫುಜ್ಯಾ ಕರ್‍ಲ್ಯಾನಿ, ತಸೆ ತುಮಿ ಕರುಚೆ ನ್ಹಯ್. ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್, “ತೆನಿಚ್ ಖಾವ್ಕ್ ಅನಿ ಫಿವ್ಕ್ ಬಸ್ಲೆ ಅನಿ ಬುರ್ಶಿ ಆಂಗಾಚೆ ಸಮಂದ್ ವಿಶಯಾತ್ ನಾಚುಕ್ ಅನಿ ಖೆಳ್ ಕರುಕ್ ಲಾಗ್ಲ್ಯಾನಿ”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:7
14 ತಿಳಿವುಗಳ ಹೋಲಿಕೆ  

ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ, ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾವಿುಗಳು


ಆದದರಿಂದ ಪ್ರಿಯ ಸಹೋದರರೇ, ವಿಗ್ರಹಾರಾಧನೆಯ ಗೊಡವೆಯನ್ನು ಸಂಪೂರ್ಣವಾಗಿ ತೊರೆದುಬಿಡಿರಿ.


ನೀನು ಐಗುಪ್ತದೇಶದಿಂದ ಕರಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು; ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಲೋಹವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ ಎಂದು ಹೇಳಿದನು.


ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನಾದರೂ ಲೋಭಿಯಾದರೂ ವಿಗ್ರಹಾರಾಧಕನಾದರೂ ಬೈಯುವವನಾದರೂ ಕುಡಿಕನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟಮಾಡಲೂಬಾರದು ಎಂದು ಬರೆದಿದ್ದೆನು.


ಪ್ರಿಯರಾದ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.


ಅವನು ಪಾಳೆಯದ ಹತ್ತಿರಕ್ಕೆ ಬಂದು ಆ ಬಸವನನ್ನೂ ಜನರು ಕುಣಿದಾಡುವದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡದಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.


ಇಸ್ರಾಯೇಲ್ಯರು ಉತ್ಸಾಹದಿಂದ ಕೂಗಾಡುತ್ತಾ ಇರಲಾಗಿ ಯೆಹೋಶುವನು ಆ ಶಬ್ದವನ್ನು ಕೇಳಿ - ಪಾಳೆಯದ ಕಡೆಯಿಂದ ಯುದ್ಧಧ್ವನಿ ಕೇಳಿಸುತ್ತದೆ ಎಂದು ಮೋಶೆಗೆ ಹೇಳಿದನು.


ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಬಸವನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಲಾಗಿ ಅವರು - ಇಸ್ರಾಯೇಲ್ಯರೇ, ನೋಡಿರಿ; ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರಕೊಂಡುಬಂದ ದೇವರು ಎಂದು ಹೇಳಿದರು.


ಆದರೆ ಈ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈ ವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಕ್ಕೆ ನೈವೇದ್ಯ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿದ್ದು ಕಲೆಯನ್ನು ಹೊಂದುತ್ತದೆ.


ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ಹಾದರವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ರಕ್ತವನ್ನೂ ವಿಸರ್ಜಿಸಬೇಕೆಂದು ನಾವು ಅವರಿಗೆ ಕಾಗದವನ್ನು ಬರೆದು ಅಪ್ಪಣೆಕೊಡೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು