Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:23 - ಕನ್ನಡ ಸತ್ಯವೇದವು J.V. (BSI)

23 ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ - ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಿಮಗೆ ಮಾಡಿದ ಉಪದೇಶವನ್ನು ನಾನು ಪ್ರಭುವಿನಿಂದಲೇ ಪಡೆದೆನು. ಅದೇನೆಂದರೆ: ಪ್ರಭುಯೇಸು, ತಮ್ಮನ್ನು ಹಿಡಿದುಕೊಡಲಾದ ಆ ರಾತ್ರಿ, ರೊಟ್ಟಿಯನ್ನು ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾನು ಪ್ರಭುವಿನಿಂದ ಹೊಂದಿಕೊಂಡದ್ದನ್ನೇ ನಿಮಗೆ ಉಪದೇಶಿಸಿದೆನು. ಅದೇನೆಂದರೆ: ಯೇಸುವನ್ನು ಕೊಲ್ಲುವುದಕ್ಕಾಗಿ ಒಪ್ಪಿಸಿಕೊಟ್ಟ ರಾತ್ರಿಯಲ್ಲಿ, ಆತನು ರೊಟ್ಟಿಯನ್ನು ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಾನು ಕರ್ತ ದೇವರಿಂದಲೇ ಪಡೆದದ್ದನ್ನು ನಿಮಗೆ ಒಪ್ಪಿಸಿಕೊಟ್ಟಿದ್ದೇನೆ: ಕರ್ತ ಆಗಿರುವ ಯೇಸು ತಮ್ಮನ್ನು ಹಿಡಿದುಕೊಡಲಾದ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಜೆ ಕಾಯ್ ಧನಿಯಾಕ್ನಾ ಮಿಯಾ ಘೆಟ್ಲಾ ತೆ ಮಿಯಾ ತುಮ್ಕಾ ಸಾಂಗುನ್ ದಿಲಾ. ತೆ ಕಾಯ್ ಮಟ್ಲ್ಯಾರ್, ಧನಿಯಾ ಜೆಜುಕ್ ದುಸ್ರ್ಯಾಂಚ್ಯಾ ಹಾತಿತ್ ಧರುನ್ ದಿವ್ನ್ ಹೊಲೆ, ತ್ಯಾ ದಿಸ್ ರಾಚ್ಚೆ ಭಾಕ್ರಿ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:23
17 ತಿಳಿವುಗಳ ಹೋಲಿಕೆ  

ನಾನು ನಿಮಗೆ ತಿಳಿಸಿದ ಮೊದಲನೆಯ ಸಂಗತಿಗಳೊಳಗೆ ಒಂದು ಸಂಗತಿಯನ್ನು ನಿಮಗೆ ತಿಳಿಸಿಕೊಟ್ಟೆನು. ಅದು ನಾನು ಸಹ ಕಲಿತುಕೊಂಡದ್ದೇ. ಅದೇನಂದರೆ ಶಾಸ್ತ್ರದಲ್ಲಿ ಮುಂತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;


ನೀವು ಹೇಗೆ ನಡೆದು ದೇವರನ್ನು ಮೆಚ್ಚಿಸಬೇಕೋ ಅದನ್ನು ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದೀರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಬೇಡಿಕೊಂಡು ಯೇಸು ಕರ್ತನಲ್ಲಿ ಪ್ರಬೋಧಿಸುತ್ತೇವೆ.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನೂ


ವಾರದ ಮೊದಲನೆಯ ದಿವಸದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಕೂಡಿಬಂದಾಗ ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಸರಿಹೊತ್ತಿನವರೆಗೂ ಉಪನ್ಯಾಸವನ್ನು ನಡಿಸಿದನು.


ಯೇಸು - ನಿನಗೆ ಸತ್ಯವಾಗಿ ಹೇಳುತ್ತೇನೆ. ಇದೇ ರಾತ್ರಿಯಲ್ಲಿ ಕೋಳಿಕೂಗುವದಕ್ಕಿಂತ ಮುಂಚೆ ನೀನು ನನ್ನ ವಿಷಯದಲ್ಲಿ - ಅವನನ್ನು ಅರಿಯೆನೆಂಬದಾಗಿ ಮೂರು ಸಾರಿ ಹೇಳುವಿ ಅಂದನು.


ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು - ಪಸ್ಕದ ಊಟಮಾಡುವದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕೆನ್ನುತ್ತೀ ಎಂದು ಕೇಳಲು


ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ಬಲ್ಲಿರಿ; ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿಕೊಡೋಣವಾಗುವದು ಎಂದು ಹೇಳಿದನು.


ಆಮೇಲೆ ಆತನು [ದ್ರಾಕ್ಷಾರಸದ] ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ - ಇದನ್ನು ತಕ್ಕೊಂಡು ನಿಮ್ಮಲ್ಲಿ ಹಂಚಿಕೊಳ್ಳಿರಿ.


ನಾವು ದೇವಸ್ತೋತ್ರಮಾಡಿ ಪಾತ್ರೆಯಲ್ಲಿ ಪಾನಮಾಡುವದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬದನ್ನು ಸೂಚಿಸುತ್ತದಲ್ಲವೇ. ನಾವು ರೊಟ್ಟಿಯನ್ನು ಮುರಿದು ತಿನ್ನುವದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬದನ್ನು ಸೂಚಿಸುತ್ತದಲ್ಲವೇ.


ಕರ್ತನಿಂದ ಪರಲೋಕ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವೆವೆಂದು ತಿಳಿದಿದ್ದೀರಲ್ಲಾ. ನೀವು ಕರ್ತನಾದ ಕ್ರಿಸ್ತನಿಗೇ ದಾಸರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು