Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:32 - ಕನ್ನಡ ಸತ್ಯವೇದವು J.V. (BSI)

32 ಆದರೆ ನಾವು ಕರ್ತನ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು - ಇವರಿಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ಶಿಕ್ಷಿಸುತ್ತಾನೆ. ಆದಕಾರಣ ನನ್ನ ಸಹೋದರರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಹಾಗೇನಾದರೂ ಪ್ರಭುವಿನ ವಿಚಾರಣೆಗೆ ನಾವು ಒಳಪಟ್ಟರೆ ಅವರು ನಮ್ಮನ್ನು ದಂಡಿಸಿ ತಿದ್ದುತ್ತಾರೆ. ಪ್ರಪಂಚದೊಂದಿಗೆ ನಾವು ತಪ್ಪಿತಸ್ಥರಾಗದಂತೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ಪ್ರಭುವು ನಮಗೆ ತೀರ್ಪು ಮಾಡುವಾಗ, ನಮಗೆ ಸರಿಯಾದ ಮಾರ್ಗವನ್ನು ತೋರಿಸುವುದಕ್ಕಾಗಿಯೂ ಈ ಲೋಕದ ಇತರ ಜನರೊಂದಿಗೆ ನಮಗೆ ಅಪರಾಧಿಗಳೆಂಬ ತೀರ್ಪಾಗದಂತೆಯೂ ಆತನು ನಮ್ಮನ್ನು ಶಿಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನಾವು ಲೋಕದವರ ಸಂಗಡ ದಂಡನೆಗೆ ಗುರಿಯಾಗಬಾರದೆಂದು, ದೇವರು ನಮ್ಮನ್ನು ಈಗ ಈ ರೀತಿಯಾಗಿ ಶಿಸ್ತಿನ ನ್ಯಾಯವಿಚಾರಣೆಗೆ ಒಳಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಖರೆ ಜಾಗಾಚ್ಯಾ ವಾಂಗ್ಡಾ ಅಮ್ಕಾ ಝಡ್ತಿ ಹೊತಲೆ ನಕ್ಕೊ ಮನುನ್ ಧನಿಯಾನುಚ್ ಅಮ್ಕಾ ಝಡ್ತಿ ಕರುನ್ ಶಿಕ್ಷಾ ಲಾವುನ್ ಹೊಲ್ಲಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:32
22 ತಿಳಿವುಗಳ ಹೋಲಿಕೆ  

ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ಯಾಹು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಮರಣಕ್ಕೆ ಒಪ್ಪಿಸಲಿಲ್ಲ.


ತಂದೆ ಮಗನನ್ನು ಹೇಗೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನೆಂಬದನ್ನು ನೀವು ಆಲೋಚಿಸಿಕೊಂಡು


ಈ ಕಾರಣದಿಂದಲೇ ನಿಮ್ಮಲ್ಲಿ ಬಹುಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ ಮತ್ತು ಅನೇಕರು ಸಾಯುತ್ತಾರೆ.


ಆದಕಾರಣ ನೀನು ಅವರಿಗೆ - ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ ಶಿಕ್ಷಿತರಾಗದೆ ಇರುವ ಜನವು ಇದೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ ಎಂದು ಹೇಳು.


ನಾವು ದೇವರಿಂದ ಹುಟ್ಟಿದವರೆಂದೂ ಲೋಕವೆಲ್ಲವು ಕೆಡುಕನ ವಶದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ಅದು ದೈವೋಕ್ತಿಗೆ ಕಿವಿಗೊಡಲಿಲ್ಲ, ಶಿಕ್ಷಣೆಗೆ ಒಳಪಡಲಿಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.


ಏಕೆ ದ್ರೋಹವನ್ನು ಹೆಚ್ಚಿಸಿ ಹೆಚ್ಚಿಸಿ ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.


ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು; ಅವನು ತಪ್ಪುಮಾಡಿದರೆ ಅವನಿಗೆ ಮನುಷ್ಯಶಿಕ್ಷೆಯನ್ನು ಕೊಡುವೆನು, ನರಪುತ್ರರಂತೆ ಅವನನ್ನು ದಂಡಿಸುವೆನು.


ಇದಲ್ಲದೆ ಪಾಪಮಾಡಿದ ಒಬ್ಬನಿಂದಲೇ ದುಷ್ಫಲ ಬಂದಂತೆ ಈ ವರವು ಬರಲಿಲ್ಲ; ಹೇಗಂದರೆ ಒಬ್ಬನೇ ಮನುಷ್ಯನ ಪಾಪದ ದೆಸೆಯಿಂದ ಸಾಯಬೇಕೆಂಬ ನಿರ್ಣಯವು ಉಂಟಾಯಿತು, ಆದರೆ ದೇವರ ಕೃಪಾದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ಅವರನ್ನು ನೀತಿವಂತರೆಂದು ನಿರ್ಣಯಿಸುವಂಥದಾಗಿದೆ.


ಜ್ಞಾನಿಯು ಎಲ್ಲಿ? ಶಾಸ್ತ್ರಿಯೆಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕಜ್ಞಾನವನ್ನು ಹುಚ್ಚುತನವಾಗ ಮಾಡಿದ್ದಾನಲ್ಲವೇ.


ಹೇಗಂದರೆ ಲೋಕವು ಜ್ಞಾನವೆನಿಸುವ ಮಾರ್ಗದಿಂದ ದೇವರನ್ನು ತಿಳುಕೊಳ್ಳದೆ ಹೋದದ್ದು ದೇವರ ಜ್ಞಾನದ ಸಂಕಲ್ಪವೆ; ಹೀಗಾದ ಮೇಲೆ ಹುಚ್ಚು ಮಾತು ಎಣಿಸಿಕೊಂಡಿರುವ ನಮ್ಮ ಪ್ರಸಂಗದಿಂದಲೇ ನಂಬುವವರನ್ನು ರಕ್ಷಿಸುವದು ದೇವರಿಗೆ ಒಳ್ಳೇದೆಂದು ತೋಚಿತು.


ನಮ್ಮನ್ನು ನಾವೇ ವಿಚಾರಿಸಿಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ.


ಈ ಭೋಜನವನ್ನು ಮಾಡುವದಕ್ಕೆ ಕೂಡಿಬರುವಾಗ ಒಬ್ಬರನ್ನೊಬ್ಬರು ಕಾದುಕೊಳ್ಳಿರಿ.


ಇವರು ದೇವದೂಷಣೆ ಮಾಡಬಾರದೆಂಬದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು