Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:10 - ಕನ್ನಡ ಸತ್ಯವೇದವು J.V. (BSI)

10 ಒಬ್ಬನಿಗೆ ಮಹತ್ತುಗಳನ್ನು ಮಾಡುವ ವರವು, ಒಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಸತ್ಯಾಸತ್ಯಾತ್ಮಗಳನ್ನು ವಿವೇಚಿಸುವ ವರವು, ಒಬ್ಬನಿಗೆ ವಿವಿಧ ವಾಣಿಗಳನ್ನಾಡುವ ವರವು, ಒಬ್ಬನಿಗೆ ವಾಣಿಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಒಬ್ಬನಿಗೆ ಪವಾಡಗಳನ್ನು ಎಸಗುವ ಪರಾಕ್ರಮವನ್ನು, ಇನ್ನೊಬ್ಬನಿಗೆ ಪ್ರವಾದನೆಮಾಡುವ ಪ್ರತಿಭೆಯನ್ನು, ಮತ್ತೊಬ್ಬನಿಗೆ ಸತ್ಯಾಸತ್ಯವನ್ನು ವಿವೇಚಿಸುವ ಜಾಣ್ಮೆಯನ್ನು, ಮಗದೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಸಾಮರ್ಥ್ಯವನ್ನು, ಮತ್ತೂ ಒಬ್ಬನಿಗೆ ಅವುಗಳನ್ನು ಅರ್ಥೈಸುವ ಅರಿವನ್ನು ಆ ಪವಿತ್ರಾತ್ಮರಿಂದಲೇ ಕೊಡಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮತ್ತೊಬ್ಬನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯನ್ನೂ ಇನ್ನೊಬ್ಬನಿಗೆ ಪ್ರವಾದಿಸುವ ಸಾಮರ್ಥ್ಯವನ್ನೂ ಇನ್ನೊಬ್ಬನಿಗೆ ಒಳ್ಳೆಯ ಮತ್ತು ಕೆಟ್ಟ ಆತ್ಮಗಳ ನಡುವೆ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವ ಸಾಮರ್ಥ್ಯವನ್ನೂ ಕೊಡುತ್ತಾನೆ; ಒಬ್ಬನಿಗೆ ಅನೇಕ ಭಾಷೆಗಳನ್ನು ಮಾತಾಡುವ ಸಾಮರ್ಥ್ಯವನ್ನೂ ಮತ್ತೊಬ್ಬನಿಗೆ ಆ ಭಾಷೆಗಳನ್ನು ಅನುವಾದಿಸುವ ಸಾಮರ್ಥ್ಯವನ್ನೂ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಒಬ್ಬನಿಗೆ ಅದ್ಭುತಕಾರ್ಯಗಳ ಶಕ್ತಿಯೂ ಒಬ್ಬನಿಗೆ ಪ್ರವಾದನೆಯೂ ಒಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವೂ ಒಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಶಕ್ತಿಯೂ ಮತ್ತೊಬ್ಬನಿಗೆ ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವೂ ಕೊಡಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಎಕ್ಲ್ಯಾಕ್ ವಿಚಿತ್ರ್ ಕಾಮಾ ಕರ್‍ತಲೆ ವರು ಗಾವ್ತಾ, ಅನಿಎಕ್ಲ್ಯಾಕ್ ಪ್ರವಾದ್ ಕರ್‍ತಲೆ, ತಿನ್ವೆಚ್ಯಾಕ್ ಪ್ರೆರಕ್ ಆತ್ಮೆ ಪರಿಕ್ಷಾ ಕರುನ್ ಬಗ್ತಲೆ ವರು ಗಾವ್ತಾ. ಎಕ್ಲ್ಯಾಕ್ ದುಸ್ರಿ ದುಸ್ರಿ ಬಾಶಾ ಬೊಲ್ತಲೆ ವರು ಗಾವ್ತಾ, ಅನಿಎಕ್ಲ್ಯಾಕ್ ಹ್ಯಾ ಬಾಶಾಂಚೊ ಅರ್ಥ್ ಸಾಂಗ್ತಲೆ ವರು ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:10
38 ತಿಳಿವುಗಳ ಹೋಲಿಕೆ  

ಆದಕಾರಣ ನನ್ನ ಸಹೋದರರೇ, ಪ್ರವಾದಿಸುವದಕ್ಕೆ ಆಸಕ್ತಿಯಿಂದ ಅಪೇಕ್ಷಿಸಿರಿ, ಮತ್ತು ವಾಣಿಯನ್ನಾಡುವದಕ್ಕೆ ಬೇಡವೆನ್ನಬಾರದು.


ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ನನ್ನ ಹೆಸರನ್ನು ಹೇಳಿ ದೆವ್ವಗಳನ್ನು ಬಿಡಿಸುವರು; ಹೊಸಭಾಷೆಗಳಿಂದ ಮಾತಾಡುವರು; ಹಾವುಗಳನ್ನು ಎತ್ತುವರು;


ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು, ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು;


ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು ಯಾತರಿಂದಾಯಿತು? ನೀವು ನೇಮನಿಷ್ಠೆಗಳನ್ನನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ? ನಂಬಿದ್ದರಿಂದಲೇ.


ಇತ್ತಲಾಗಿ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಕೂಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸುತ್ತಾ ಇದ್ದನು.]


ನಿನ್ನ ಕೃತ್ಯಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;


ಪ್ರೀತಿಯು ಎಂದಿಗೂ ಬಿದ್ದುಹೋಗುವದಿಲ್ಲ; ಪ್ರವಾದನೆಗಳಾದರೋ ಇಲ್ಲದಂತಾಗುವವು; ವಾಣಿಗಳೋ ನಿಂತುಹೋಗುವವು. ವಿದ್ಯೆಯೋ ಇಲ್ಲದಂತಾಗುವದು.


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಪರ್ಯಂತರಕ್ಕೂ ಸುತ್ತಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ನೆರವೇರಿಸಿದ್ದೇನೆ.


ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ಹೊಂದಿದ ವರವು ಪ್ರವಾದನೆಯ ರೂಪವಾಗಿದ್ದರೆ ನಮ್ಮ ವಿಶ್ವಾಸ ವರಕ್ಕೆ ತಕ್ಕ ಹಾಗೆ ಪ್ರವಾದನೆ ಹೇಳೋಣ.


ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮವರವು ಅವರ ಮೇಲೆ ಬಂತು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.


ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಪವಿತ್ರಾತ್ಮ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು;


ಆಗ ಪೇತ್ರನು - ಅನನೀಯಾ, ಸೈತಾನನು ನಿನ್ನ ಹೃದಯದಲ್ಲಿ ತುಂಬಿಕೊಂಡದ್ದೇನು? ನೀನು ಯಾಕೆ ಆ ಹೊಲದ ಕ್ರಯದಲ್ಲಿ ಕೆಲವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸಬೇಕೆಂದಿದ್ದೀ?


ಆದರೆ ಪವಿತ್ರಾತ್ಮ ನಿಮ್ಮ ಮೇಲೆ ಬರಲು ನೀವು ಬಲವನ್ನು ಹೊಂದಿ ಯೆರೂಸಲೇವಿುನಲ್ಲಿಯೂ ಎಲ್ಲಾ ಯೂದಾಯ ಸಮಾರ್ಯ ಸೀಮೆಗಳಲ್ಲಿಯೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರಬೇಕು ಅಂದನು.


ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ನಡಿಸಿಕೊಂಡು ಹೋಗಿ ಸಕಲ ವಿಷಯದಲ್ಲಿಯೂ ಸತ್ಯಕ್ಕೆ ಸೇರಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತಾಡದೆ ಕೇಳಿದ ಮಾತುಗಳನ್ನೇ ಆಡುವನು; ಮತ್ತು ಮುಂದಾಗುವ ಸಂಗತಿಗಳನ್ನು ನಿಮಗೆ ತಿಳಿಸುವನು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವನು ನಾನು ನಡಿಸುವ ಕ್ರಿಯೆಗಳನ್ನು ತಾನೂ ನಡಿಸುವನು; ಮತ್ತು ಅವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ನಡಿಸುವನು. ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.


ಇಗೋ ನನ್ನ ತಂದೆಯು ವಾಗ್ದಾನಮಾಡಿದ್ದನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಹೊದಿಸುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರ್ರಿ ಎಂದು ಹೇಳಿದನು.


ಮತ್ತು ದೇವರು ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನಾನಾ ವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ಪವಿತ್ರಾತ್ಮವರಗಳನ್ನು ತನ್ನ ಚಿತ್ತಾನುಸಾರವಾಗಿ ಅವರಿಗೆ ಅನುಗ್ರಹಿಸಿ ಅವರ ಮಾತಿಗೆ ಸಾಕ್ಷಿಕೊಡುತ್ತಿದ್ದನು.


ಆ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇವಿುನಿಂದ ಅಂತಿಯೋಕ್ಯಕ್ಕೆ ಬಂದರು.


ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.


ಆದದರಿಂದ ವಾಣಿಯನ್ನಾಡುವವನು ತನಗೆ ಅದರ ಅರ್ಥವನ್ನು ಹೇಳುವ ಶಕ್ತಿಯೂ ಉಂಟಾಗಬೇಕೆಂದು ದೇವರನ್ನು ಪ್ರಾರ್ಥಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು