Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:8 - ಕನ್ನಡ ಸತ್ಯವೇದವು J.V. (BSI)

8 ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಆ ಆತ್ಮನಿಗೆ ಅನುಗುಣವಾಗಿ ವಿದ್ಯಾವಾಕ್ಯವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪವಿತ್ರಾತ್ಮ ಮುಖಾಂತರ ಒಬ್ಬನಿಗೆ ಜ್ಞಾನೋಕ್ತಿಗಳು, ಇನ್ನೊಬ್ಬನಿಗೆ ಅವರ ಮುಖಾಂತರವೇ ವಿದ್ಯೋಕ್ತಿಗಳು ಲಭಿಸುತ್ತವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆತನು ಒಬ್ಬನಿಗೆ ಜ್ಞಾನದಿಂದ ಮಾತಾಡುವ ವರವನ್ನೂ ಮತ್ತೊಬ್ಬನಿಗೆ ತಿಳುವಳಿಕೆಯಿಂದ ಮಾತಾಡುವ ವರವನ್ನೂ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೇಗೆಂದರೆ, ಪವಿತ್ರಾತ್ಮ ದೇವರ ಮೂಲಕ ಒಬ್ಬನಿಗೆ ಜ್ಞಾನ ವಾಕ್ಯವು, ಒಬ್ಬನಿಗೆ ಆ ಆತ್ಮರ ಅನುಸಾರವಾಗಿ ವಿದ್ಯಾವಾಕ್ಯವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಶೆ ಪವಿತ್ರ್ ಆತ್ಮೊ ಎಕ್ಲ್ಯಾಕ್ ಬುದ್ದಿಚೊ, ಅನಿಎಕ್ಲ್ಯಾಕ್ ಶಾನ್ಪಾನಾಚೊ ವರು ದಿತಾ. ಅನಿಎಕ್ಲ್ಯಾಕ್ ತೆಚೊ ಅರ್ಥ್ ಸೊಡ್ಸುನ್ ಸಾಂಗ್ತಲೆ ವರು ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:8
30 ತಿಳಿವುಗಳ ಹೋಲಿಕೆ  

ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.


ನೀವು ದೇವರ ಮೇಲಣ ನಂಬಿಕೆ ವಾಕ್ಚಾತುರ್ಯ ಜ್ಞಾನ ಸಕಲವಿಧವಾದ ಆಸಕ್ತಿ ನಮ್ಮ ಪ್ರೇರಣೆಯಿಂದ ನಿಮ್ಮಲ್ಲಿ ಹುಟ್ಟಿದ ಪ್ರೀತಿ ಇವೇ ಮೊದಲಾದ ಎಲ್ಲಾ ವಿಷಯಗಳಲ್ಲಿ ಹೇಗೆ ಸಮೃದ್ಧರಾಗಿದ್ದೀರೋ ಹಾಗೆಯೇ ಈ ಧರ್ಮಕಾರ್ಯದಲ್ಲಿಯೂ ಸಮೃದ್ಧರಾಗಿರಿ.


ಯಾಕಂದರೆ ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡ ಕಾರಣ ನೀವು ಎಲ್ಲಾ ನುಡಿಯಲ್ಲಿಯೂ ಎಲ್ಲಾ ತಿಳುವಳಿಕೆಯಲ್ಲಿಯೂ ಆತನಲ್ಲಿ ಸಮೃದ್ಧಿ ಹೊಂದಿದವರಾಗಿದ್ದೀರಿ.


ನಿನ್ನ ಚಿತ್ತದಂತೆ ನಡಕೊಳ್ಳುವದನ್ನು ನನಗೆ ಕಲಿಸು; ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಮಟ್ಟನೆಲದಲ್ಲಿ ನಡಿಸಲಿ.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಅವರಿಗೆ ಉಪದೇಶಿಸಲು ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ.


ಪ್ರೀತಿಯು ಎಂದಿಗೂ ಬಿದ್ದುಹೋಗುವದಿಲ್ಲ; ಪ್ರವಾದನೆಗಳಾದರೋ ಇಲ್ಲದಂತಾಗುವವು; ವಾಣಿಗಳೋ ನಿಂತುಹೋಗುವವು. ವಿದ್ಯೆಯೋ ಇಲ್ಲದಂತಾಗುವದು.


ಅದಕ್ಕಾತನು ಅವರಿಗೆ - ಪರಲೋಕರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ; ಅವರಿಗೆ ಕೊಟ್ಟಿಲ್ಲ.


ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; ನಿಮ್ಮಲ್ಲಿ ಆವೇಶಿಸಿರುವ ನನ್ನ ಆತ್ಮವೂ ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ ನಿಮ್ಮ ಬಾಯಿಂದಾಗಲಿ ನಿಮ್ಮ ಸಂತತಿಯ ಬಾಯಿಂದಾಗಲಿ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವದಿಲ್ಲ ಎಂದು ಯೆಹೋವನು ಅನ್ನುತ್ತಾನೆ.


ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ; ಬೆಳಬೆಳಗೂ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಜಾಗರಗೊಳಿಸುತ್ತಾನೆ.


ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು, ಸರ್ವಶಕ್ತನ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ.


ರತ್ನಗಳನ್ನು ಕೆತ್ತುವದಕ್ಕೂ ಮರದಲ್ಲಿ ವಿಚಿತ್ರವಾಗಿ ಕೆತ್ತನೇ ಕೆಲಸವನ್ನು ಮಾಡುವದಕ್ಕೂ


ನನಗೆ ಪ್ರವಾದನವರವಿದ್ದರೂ ಎಲ್ಲಾ ರಹಸ್ಯಗಳೂ ಸಕಲ ವಿಧವಾದ ವಿದ್ಯೆಯೂ ತಿಳಿದರೂ, ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿದ್ದೇನೆ.


ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ತಳ್ಳುತ್ತಾನೆ, ನಿಲ್ಲಿಸುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ;


ಆದದರಿಂದ ಸಹೋದರರೇ, ಸಂಭಾವಿತರೂ ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಆಗಿರುವ ಏಳುಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ; ಅವರನ್ನು ಈ ಕೆಲಸದ ಮೇಲೆ ನೇವಿುಸುವೆವು.


ನನ್ನ ಸಹೋದರರೇ, ನೀವಂತೂ ಒಳ್ಳೇತನದಿಂದ ಭರಿತರಾಗಿಯೂ ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ಗೊತ್ತಿದೆ.


ಮನುಷ್ಯನ ಒಳಗಿನ ಆಲೋಚನೆಗಳು ಅವನಲ್ಲಿರುವ ಜೀವಾತ್ಮಕ್ಕೆ ಹೊರತು ಮತ್ತಾರಿಗೆ ತಿಳಿಯುವದು? ಹಾಗೆಯೇ ದೇವರ ಆಲೋಚನೆಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ.


ಕರ್ತನ ಮನಸ್ಸನ್ನು ತಿಳುಕೊಂಡು ಆತನಿಗೆ ಉಪದೇಶಿಸುವವನಾರು ಎಂದು ಬರೆದದೆಯಲ್ಲಾ. ನಮಗಾದರೋ ಕ್ರಿಸ್ತನ ಮನಸ್ಸು ದೊರಕಿತು.


ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ ಜ್ಞಾನವಾಕ್ಯವನ್ನಾಡದೆ ಪ್ರವಾದನೆಯನ್ನು ಹೇಳದೆ ಉಪದೇಶಮಾಡದೆ ವಾಣಿಗಳನ್ನು ಮಾತ್ರ ಆಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು?


ಹಾಗಾದರೇನು, ಸಹೋದರರೇ? ನೀವು ಕೂಡಿ ಬಂದಿರುವಾಗ ಒಬ್ಬನು ಹಾಡುವದೂ, ಒಬ್ಬನು ಉಪದೇಶಮಾಡುವದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವದೂ, ಒಬ್ಬನು ವಾಣಿಯನ್ನಾಡುವದೂ, ಒಬ್ಬನು ಅದರ ಅರ್ಥವನ್ನು ಹೇಳುವದೂ ಉಂಟಷ್ಟೆ. ನೀವು ಏನೂ ನಡಿಸಿದರೂ ಭಕ್ತಿವೃದ್ಧಿಗಾಗಿಯೇ ನಡಿಸಿರಿ.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ಕ್ರಿಸ್ತನ ಅನ್ಯೋನ್ಯತೆಯಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರವು.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ಶುದ್ಧಮನಸ್ಸು ಜ್ಞಾನ ದೀರ್ಘಶಾಂತಿ ದಯೆ ಪವಿತ್ರಾತ್ಮ ಕಪಟವಿಲ್ಲದ ಪ್ರೀತಿ


ನಾನು ವಾಕ್ಚಾತುರ್ಯದಲ್ಲಿ ನಿಪುಣನಲ್ಲದಿದ್ದರೂ ಜ್ಞಾನದಲ್ಲಿ ನಿಪುಣನಾಗಿದ್ದೇನೆ; ಇದನ್ನು ಎಲ್ಲಾ ಕಾರ್ಯಗಳಲ್ಲಿ ಎಲ್ಲರ ಮುಂದೆ ನಿಮ್ಮ ಪ್ರಯೋಜನಕ್ಕಾಗಿ ತೋರ್ಪಡಿಸಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು