Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:2 - ಕನ್ನಡ ಸತ್ಯವೇದವು J.V. (BSI)

2 ವಾಣಿಯನ್ನಾಡುವವನು ದೇವರ ಸಂಗಡ ಮಾತಾಡುತ್ತಾನೆ ಹೊರತು ಮನುಷ್ಯರ ಸಂಗಡ ಆಡುವದಿಲ್ಲ. ಅವನು ಆತ್ಮಪ್ರೇರಿತನಾಗಿ ರಹಸ್ಯಾರ್ಥಗಳನ್ನು ನುಡಿಯುತ್ತಿದ್ದರೂ ಯಾರೂ ತಿಳುಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅನ್ಯಭಾಷೆಗಳನ್ನಾಡುವವನು ದೇವರ ಸಂಗಡ ಮಾತನಾಡುತ್ತಾನೆಯೇ ಹೊರತು ಮನುಷ್ಯರ ಸಂಗಡ ಅಲ್ಲ. ಅವನು ಆತ್ಮ ಪ್ರೇರಿತನಾಗಿ ಗುಪ್ತ ವಿಷಯಗಳನ್ನಾಡುತ್ತಾನೆ. ಅವನು ಮಾತನಾಡುವ ಮಾತುಗಳನ್ನು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪರವಶಾಭಾಷೆಯನ್ನು ಆಡುವವನು ಮಾನವನೊಡನಲ್ಲ, ದೇವರೊಡನೆ ಮಾತನಾಡುತ್ತಾನೆ. ಪವಿತ್ರಾತ್ಮರ ಪ್ರೇರಣೆಯಿಂದ ನಿಗೂಢ ವಿಷಯಗಳ ಬಗ್ಗೆ ಮಾತನಾಡುವುದರಿಂದ ಯಾರೂ ಆತನ ಮಾತನ್ನು ಅರ್ಥಮಾಡಿಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅದಕ್ಕೆ ಕಾರಣವೇನೆಂದರೆ: ಪರಭಾಷೆಯಲ್ಲಿ ಮಾತಾಡುವ ವರವನ್ನು ಹೊಂದಿರುವವನು ಜನರೊಂದಿಗೆ ಮಾತಾಡುವುದಿಲ್ಲ. ಅವನು ದೇವರೊಂದಿಗೆ ಮಾತಾಡುತ್ತಾನೆ. ಯಾರೂ ಅವನನ್ನು ಅರ್ಥಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವನು ಪವಿತ್ರಾತ್ಮನ ಮೂಲಕವಾಗಿ ರಹಸ್ಯ ಸಂಗತಿಗಳನ್ನು ಮಾತಾಡುತ್ತಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅನ್ಯಭಾಷೆಗಳನ್ನು ಆಡುವವನು ಮನುಷ್ಯರ ಸಂಗಡವಲ್ಲ, ದೇವರೊಂದಿಗೆ ಮಾತನಾಡುತ್ತಾನೆ. ಅವನು ಮಾತನಾಡುವುದನ್ನು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವನು ಆತ್ಮದಲ್ಲಿ ರಹಸ್ಯಗಳನ್ನು ಮಾತನಾಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕಶ್ಯಾಕ್ ಮಟ್ಲ್ಯಾರ್ ದುಸ್ರ್ಯಾ, ದುಸ್ರ್ಯಾ ಬಾಶಾನಿ ಬೊಲ್ತಾ ತೊ ದೆವಾಕ್ಡೆ ಬೊಲ್ತಾ ಸಿವಾಯ್ ಮಾನ್ಸಾಕ್ಡೆ ಬೊಲಿನಾ; ಆತ್ಮ್ಯಾಚ್ಯಾ ವೈನಾ ಪ್ರೆರಿತ್ ಹೊವ್ನ್ ಘುಟಾನ್ ಹೊತ್ತಿ ಸಂಗ್ತಿಯಾ ತೊ ಬೊಲ್ತಾ, ಜಾಲ್ಯಾರ್ಬಿ ತೊ ಬೊಲ್ತಾ ತೆ ಕೊನಾಕ್ಬಿ ಕಳಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:2
33 ತಿಳಿವುಗಳ ಹೋಲಿಕೆ  

ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ನನ್ನ ಹೆಸರನ್ನು ಹೇಳಿ ದೆವ್ವಗಳನ್ನು ಬಿಡಿಸುವರು; ಹೊಸಭಾಷೆಗಳಿಂದ ಮಾತಾಡುವರು; ಹಾವುಗಳನ್ನು ಎತ್ತುವರು;


ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮವರವು ಅವರ ಮೇಲೆ ಬಂತು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.


ನನಗೆ ಪ್ರವಾದನವರವಿದ್ದರೂ ಎಲ್ಲಾ ರಹಸ್ಯಗಳೂ ಸಕಲ ವಿಧವಾದ ವಿದ್ಯೆಯೂ ತಿಳಿದರೂ, ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿದ್ದೇನೆ.


ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.


ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು - ಇನ್ನು ಸಾವಕಾಶವಿರುವದಿಲ್ಲ; ಏಳನೆಯ ದೇವದೂತನು ಶಬ್ದ ಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ಸಂಕಲ್ಪವನ್ನು ತನ್ನ ದಾಸರಾದ ಪ್ರವಾದಿಗಳಿಗೆ ಶುಭವರ್ತಮಾನವಾಗಿ ತಿಳಿಸಿದ್ದ ಪ್ರಕಾರ ನೆರವೇರಿಸುವನು ಎಂದು ಹೇಳಿದನು.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ಮದ್ಯನಿರತರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ ನಂಬಿದವರಿಗೆ ಪ್ರಕಟವಾಗಿರುವ ಸತ್ಯಾರ್ಥವನ್ನು ಶುದ್ಧಮನಸ್ಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು.


ಹೇಗಂದರೆ ನೀವೆಲ್ಲರು ಪ್ರೀತಿಯಿಂದ ಹೊಂದಿಕೆಯಾಗಿದ್ದು ಬುದ್ಧಿಪೂರ್ವಕ ನಿಶ್ಚಯವೆಂಬ ಭಾಗ್ಯವನ್ನು ಪಡೆದು ದೇವರು ತಿಳಿಸಿರುವ ಮರ್ಮವನ್ನು ಅಂದರೆ ತನ್ನಲ್ಲೇ ಜ್ಞಾನವಿದ್ಯಾಸಂಬಂಧವಾದ ನಿಕ್ಷೇಪಗಳನ್ನೆಲ್ಲಾ ಅಡಗಿಸಿಕೊಂಡಿರುವ ಕ್ರಿಸ್ತನನ್ನು ತಿಳುಕೊಂಡವರಾಗಿ ಹೃದಯದಲ್ಲಿ ದೃಢವಾಗಿರಬೇಕೆಂಬ ಕುತೂಹಲವು ನನಗುಂಟು.


ನನಗೋಸ್ಕರ ಸಹ ಪ್ರಾರ್ಥನೆಮಾಡಿರಿ. ನಾನು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಾರ್ಥವನ್ನು ಭಯವಿಲ್ಲದೆ ತಿಳಿಸುವದಕ್ಕೆ ಬೇಕಾದ ಮಾತನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.


ಕೇಳಿರಿ, ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಿಮಗೆ ತಿಳಿಸುತ್ತೇನೆ - ನಾವೆಲ್ಲರೂ ನಿದ್ರೆ ಹೋಗುವದಿಲ್ಲ;


ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವದಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇವಿುಸಿ ಇದುವರೆಗೆ ಮರೆಮಾಡಿದ ಜ್ಞಾನವೇ.


ಅನಾದಿಯಾಗಿ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪ್ರಕಾಶಕ್ಕೆ ಬಂದಿರುವ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿಸುವದಕ್ಕೆ ಶಕ್ತನಾಗಿರುವ


ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರೇ ಹೊರತು ನನ್ನ ಸಂಗಡ ಮಾತಾಡಿದವನ ಶಬ್ದವನ್ನು ಕೇಳಲಿಲ್ಲ.


ಆತನು ಅವರಿಗೆ - ದೇವರ ರಾಜ್ಯದ ಗುಟ್ಟು ನಿಮಗೇ ಕೊಟ್ಟಿದೆ; ಹೊರಗಿನವರಿಗೆ ಎಲ್ಲವೂ ಸಾಮ್ಯದ ಮರೆಯಲ್ಲಿವೆ.


ಅದಕ್ಕಾತನು ಅವರಿಗೆ - ಪರಲೋಕರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ; ಅವರಿಗೆ ಕೊಟ್ಟಿಲ್ಲ.


ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು. ಪೂರ್ವಕಾಲದ ಗೂಢಾರ್ಥಗಳನ್ನು ಹೊರಪಡಿಸುವೆನು.


ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ರಣಹದ್ದು ಹೇಗೆ ದೂರದಿಂದ ಹಾರಿಬರುವದೋ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.


ಯೋಸೇಫನು ದ್ವಿಭಾಷಿಯ ಮುಖಾಂತರ ಅವರ ಸಂಗಡ ಮಾತಾಡಿದದರಿಂದ, ಅವರು ತಮ್ಮ ಮಾತು ಅವನಿಗೆ ಗೊತ್ತಾಗುವದೆಂದು ನೆನಸಲೇ ಇಲ್ಲ.


ನಾವು ಇಳಿದು ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ತಾರುಮಾರುಮಾಡೋಣ ಬನ್ನಿ ಅಂದನು.


ನೀನು ಆತ್ಮದಿಂದ ಮಾತ್ರ ದೇವರ ಸ್ತೋತ್ರಮಾಡಿದರೆ ಆ ವರವನ್ನು ಹೊಂದದಿರುವ ಸಭೆಯವನಿಗೆ ನೀನು ಹೇಳಿದ್ದು ತಿಳಿಯದೆ ಇರುವದರಿಂದ ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು ಆಮೆನ್ ಎಂದು ಹೇಗೆ ಹೇಳಾನು?


ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ - ನೀನು ಮಾತಾಡುವದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತಾಡಬೇಡ ಎಂದು ಹೇಳಿದರು.


ಒಬ್ಬನಿಗೆ ಮಹತ್ತುಗಳನ್ನು ಮಾಡುವ ವರವು, ಒಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಸತ್ಯಾಸತ್ಯಾತ್ಮಗಳನ್ನು ವಿವೇಚಿಸುವ ವರವು, ಒಬ್ಬನಿಗೆ ವಿವಿಧ ವಾಣಿಗಳನ್ನಾಡುವ ವರವು, ಒಬ್ಬನಿಗೆ ವಾಣಿಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತವೆ.


ದೇವರು ತನ್ನ ಸಭೆಯಲ್ಲಿ ಮೊದಲನೇದಾಗಿ ಅಪೊಸ್ತಲರನ್ನು, ಎರಡನೇದಾಗಿ ಪ್ರವಾದಿಗಳನ್ನು, ಮೂರನೇದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹಾತ್ಕಾರ್ಯ ಮಾಡುವ ಶಕ್ತಿಯನ್ನೂ ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ ಪರಸಹಾಯ ಮಾಡುವ ಗುಣವನ್ನೂ ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನೂ ವಿವಿಧ ವಾಣಿಗಳನ್ನಾಡುವ ವರವನ್ನೂ ಅವರವರಿಗೆ ಕೊಟ್ಟಿದ್ದಾನೆ.


ನಾನು ಮನುಷ್ಯರ ಭಾಷೆಗಳನ್ನೂ ದೇವದೂತರ ಭಾಷೆಗಳನ್ನೂ ಆಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿಸುವ ತಾಳವೂ ಆಗಿದ್ದೇನೆ.


ಹಾಗಾದರೇನು, ಸಹೋದರರೇ? ನೀವು ಕೂಡಿ ಬಂದಿರುವಾಗ ಒಬ್ಬನು ಹಾಡುವದೂ, ಒಬ್ಬನು ಉಪದೇಶಮಾಡುವದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವದೂ, ಒಬ್ಬನು ವಾಣಿಯನ್ನಾಡುವದೂ, ಒಬ್ಬನು ಅದರ ಅರ್ಥವನ್ನು ಹೇಳುವದೂ ಉಂಟಷ್ಟೆ. ನೀವು ಏನೂ ನಡಿಸಿದರೂ ಭಕ್ತಿವೃದ್ಧಿಗಾಗಿಯೇ ನಡಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು