Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:23 - ಕನ್ನಡ ಸತ್ಯವೇದವು J.V. (BSI)

23 ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಕೂಡಿಬಂದಾಗ ಎಲ್ಲರೂ ವಾಣಿಗಳನ್ನಾಡಿದರೆ ಈ ವರವನ್ನು ಹೊಂದದಿರುವ ಸಭೆಯವರು ಅಥವಾ ಕ್ರಿಸ್ತನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ - ನಿಮಗೆ ಹುಚ್ಚು ಹಿಡಿದದೆ ಎಂದು ಹೇಳುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಸೇರಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ ಈ ಭಾಷೆಯನ್ನು ತಿಳಿಯದ ಬೇರೆಯವರು ಅಥವಾ ಕ್ರಿಸ್ತ ನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ, ನಿಮಗೆ ಹುಚ್ಚು ಹಿಡಿದಿದೆ ಎಂದು ಹೇಳುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಒಂದು ಕಡೆ ಎಲ್ಲರೂ ಸಭೆ ಸೇರಿದಾಗ ಪ್ರತಿಯೊಬ್ಬನೂ ಪರವಶಾಭಾಷೆಗಳನ್ನು ಆಡಲು ಆರಂಭಿಸಿದರೆ ಅಲ್ಲಿಗೆ ಬರುವ ಅಪರಿಚಿತರು, ಅವಿಶ್ವಾಸಿಗಳು ನಿಮ್ಮನ್ನು ಹುಚ್ಚರೆಂದು ಕರೆಯಲಾರರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಒಂದುವೇಳೆ ಇಡೀ ಸಭೆಯು ಕೂಡಿಬಂದಾಗ ನೀವೆಲ್ಲರೂ ವಿವಿಧ ಭಾಷೆಗಳನ್ನು ಮಾತಾಡತೊಡಗಿದರೆ, ಅಲ್ಲಿಗೆ ಬರುವ ತಿಳುವಳಿಕೆಯಿಲ್ಲದ ಅಥವಾ ನಂಬದ ಕೆಲವು ಜನರು ನಿಮ್ಮನ್ನು ಹುಚ್ಚರೆಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದಕಾರಣ ಸಭೆಯೆಲ್ಲವೂ ಕೂಡಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ, ಅಜ್ಞಾನಿಗಳು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು, ನೀವು ಹುಚ್ಚರೆಂದು ಹೇಳುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಅಶೆ ರ್‍ಹಾತಾನಾ ಸಗ್ಳೊ ದೆವಾಚ್ಯಾ ಲೊಕಾಂಚೊ ತಾಂಡೊ ಗೊಳಾ ಹೊಲ್ಲ್ಯಾಕ್ಡೆ ಸಗ್ಳೆಬಿ ವಿಚಿತ್ರ್ ಬಾಶಾನಿ ಬೊಲುನ್ ಹಾತ್ ಮನುನ್ ಚಿಂತುವಾ, ಹ್ಯಾ ಎಳಾರ್ ಕೊನ್‍ಬಿ ಎಕ್ಲೊ ಸಾದೊ ಮಾನುಸ್ ನಾ ಹೊಲ್ಯಾರ್ ವಿಶ್ವಾಸಾತ್ ನಸಲ್ಲೊ ಮಾನುಸ್ ಥೈ ಯೆಲ್ಯಾರ್ ತೊ ತುಮ್ಕಾ ಪಿಶೆ ಲಾಗ್ಲಾ ಮನಿನಸ್ತಾನಾ ರ್‍ಹಾಯ್ಲ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:23
6 ತಿಳಿವುಗಳ ಹೋಲಿಕೆ  

ಕೆಲವರು - ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯಮಾಡಿದರು.


ಹೇಗಂದರೆ ಮೊದಲನೇದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಮತ್ತು ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.


ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ - ಪೌಲನೇ, ನೀನು ಮರುಳಾಗಿದ್ದೀ; ನೀನು ಬಹಳವಾಗಿ ಮಾಡುವ ಶಾಸ್ತ್ರವಿಚಾರವು ನಿನ್ನನ್ನು ಮರುಳುಗೊಳಿಸುತ್ತದೆ ಎಂದು ಹೇಳಿದನು.


ಅವರಲ್ಲಿ ಅನೇಕರು - ಅವನಿಗೆ ದೆವ್ವಹಿಡಿದದೆ, ಹುಚ್ಚುಹಿಡಿದದೆ, ಯಾಕೆ ಅವನ ಮಾತು ಕೇಳುತ್ತೀರಿ? ಅಂದರು.


ದಂಡನೆಯ ದಿನಗಳು ಹತ್ತರಿಸಿವೆ, ಮುಯ್ಯಿತೀರಿಸುವ ದಿವಸಗಳು ಸಮೀಪಿಸಿವೆ; ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; [ಇಸ್ರಾಯೇಲೇ,] ನಿನ್ನ ಅಧರ್ಮವು ಬಹಳವಾಗಿರುವದರಿಂದಲೂ ವಿರೋಧವು ಹೆಚ್ಚಾಗಿರುವದರಿಂದಲೂ ಪ್ರವಾದಿಯು ಮೂರ್ಖನು, ದೇವರಾತ್ಮಾವಿಷ್ಟನು ಹುಚ್ಚನು [ಅಂದುಕೊಳ್ಳುತ್ತಿ].


ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿನವಾಗಿ ಹೊಡಿಸಿ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇವಿುಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು