Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:9 - ಕನ್ನಡ ಸತ್ಯವೇದವು J.V. (BSI)

9 ಆದರೆ ಬರೆದಿರುವ ಪ್ರಕಾರ - ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪವಿತ್ರಗ್ರಂಥದಲ್ಲಿ ಹೇಳಿರುವಂತೆ : “ಕಣ್ಣಾವುದೂ ಕಂಡಿಲ್ಲ, ಕಿವಿಯಾವುದೂ ಕೇಳಿಲ್ಲ. ಮನುಜಕಲ್ಪನೆಗೂ ಎಟುಕಲಿಲ್ಲ. ಅಂಥ ಅತಿಶಯಗಳನ್ನು ಸಜ್ಜುಗೊಳಿಸಿರುವನು, ತನ್ನನೊಲಿದವರಿಗೆ ಪರಮದೇವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪವಿತ್ರಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: “ದೇವರು ತನ್ನನ್ನು ಪ್ರೀತಿಸುವ ಜನರಿಗೆ ಸಿದ್ಧಪಡಿಸಿರುವುದನ್ನು ಯಾವ ಕಣ್ಣೂ ಕಾಣಲಿಲ್ಲ. ಯಾವ ಕಿವಿಯೂ ಕೇಳಲಿಲ್ಲ. ಯಾವ ವ್ಯಕ್ತಿಯೂ ಊಹಿಸಿಕೊಳ್ಳಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ದೇವರು ತಮ್ಮನ್ನು ಪ್ರೀತಿಸುವವರಿಗಾಗಿ ಸಿದ್ಧ ಮಾಡಿರುವಂಥದ್ದನ್ನು ಯಾವ ಕಣ್ಣೂ ಕಾಣಲಿಲ್ಲ, ಯಾವ ಕಿವಿಯೂ ಕೇಳಲಿಲ್ಲ, ಅದು ಮನುಷ್ಯನ ಹೃದಯದಲ್ಲಿಯೂ ಹುಟ್ಟಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆಚೆಸಾಟ್ನಿ ಪವಿತ್ರ್ ಪುಸ್ತಕಾತ್ ಲಿವಲ್ಲ್ಯಾ ಸಾರ್ಕೆ, “ಡೊಳ್ಯಾನಿ ಬಗುಕ್‍ನ್ಯಾತ್, ಕಾನಾನಿ ಆಯ್ಕುಕನಾತ್, ಅನಿ ಮಾನ್ಸಾಚ್ಯಾ ಮನಾತ್ ಕಾಯ್ಬಿ ಗುಸುಕ್ ನಾ, ಸಗ್ಳೆ ದೆವಾನ್ ತಯಾರ್ ಕರುನ್ ಥವಲ್ಲೆ ಹಾಯ್ ಮನುನ್ ಅಪ್ನಾಚೊ ಪ್ರೆಮ್ ಕರ್‍ತಲ್ಯಾಂಚ್ಯಾಸಾಟಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:9
12 ತಿಳಿವುಗಳ ಹೋಲಿಕೆ  

ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.


ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ ಎಷ್ಟೋ ವಿಶೇಷವಾಗಿವೆ.


ಕಷ್ಟವನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಜೀವವೆಂಬ ಜಯಮಾಲೆಯನ್ನು ಹೊಂದುವನು; ಸ್ವಾವಿುಯು ತನ್ನನ್ನು ಪ್ರೀತಿಸುವವರಿಗೆ ಇದನ್ನು ವಾಗ್ದಾನಮಾಡಿದ್ದಾನೆ.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ.


ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?


ಇಗೋ, ನೂತನಾಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆಬಾರದು.


ಆದರೆ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವರು. ಆದದರಿಂದ ದೇವರು ಅವರ ದೇವರೆನಿಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ - ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ತೆಗೆದುಕೊಳ್ಳಿರಿ.


ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದ ನಾವು ಪ್ರೀತಿಸುತ್ತೇವೆ.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.


ಆಗ ಆತನು ಅವರಿಗೆ - ನನ್ನ ಪಾತ್ರೆಯಲ್ಲಿ ನೀವು ಕುಡಿಯುವಿರಿ ಸರಿ; ಆದರೆ ನನ್ನ ಎಡಬಲಗಡೆಗಳಲ್ಲಿ ಕೂತುಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು