Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:9 - ಕನ್ನಡ ಸತ್ಯವೇದವು J.V. (BSI)

9 ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ. ದೇವರ ಮಂದಿರವೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾವು ದೇವರ ಸಹಕಾರ್ಮಿಕರು. ನೀವು ದೇವರೆ ಸಾಗುವಳಿಮಾಡುವ ಹೊಲ; ಅವರೆ ನಿರ್ಮಿಸುತ್ತಿರುವ ಮಂದಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾವು ದೇವರ ಜೊತೆಕೆಲಸದವರಾಗಿದ್ದೇವೆ. ನೀವು ದೇವರ ಹೊಲವಾಗಿದ್ದೀರಿ. ಇದಲ್ಲದೆ ನೀವು ದೇವರ ಕಟ್ಟಡವಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಮಿ ದೆವಾಸಾಟಿ ಕಾಮ್ ಕರ್‍ತಲೆ ವಾಂಗ್ಡಿ, ತುಮಿ ದೆವಾಚೆ ಸೆತ್, ತುಮಿ ದೆವಾಚೆ ಘರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:9
41 ತಿಳಿವುಗಳ ಹೋಲಿಕೆ  

ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದು - ನೀವು ಹೊಂದಿದ ದೇವರ ಕೃಪೆಯನ್ನು ವ್ಯರ್ಥ ಮಾಡಿಕೊಳ್ಳಬೇಡಿರೆಂದು ಎಚ್ಚರಿಸುತ್ತೇವೆ.


ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?


ಇತ್ತಲಾಗಿ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಕೂಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸುತ್ತಾ ಇದ್ದನು.]


ಆಗ ತನ್ನ ಶಿಷ್ಯರಿಗೆ - ಬೆಳೆಯು ಬಹಳ, ಕೆಲಸದವರು ಸ್ವಲ್ಪ;


ಭೂವಿುಯು ತನ್ನೊಳಗಿಂದ ಮೊಳಿಕೆಯನ್ನು ಹೊರಡಿಸುವಂತೆಯೂ ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೂ ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಸ್ತೋತ್ರವನ್ನೂ ಮೊಳೆಯಿಸುವನು.


ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋಸನು ನೀರು ಹೊಯಿದನು, ಆದರೆ ಬೆಳೆಸುತ್ತಾ ಬಂದವನು ದೇವರು.


ಆತನಲ್ಲಿ ಬೇರೂರಿಕೊಂಡು ಭಕ್ತಿವೃದ್ಧಿಯನ್ನು ಹೊಂದಿ ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರಮಾಡುವವರಾಗಿರಿ.


ನಾವು ಆತನ ನಿರ್ಮಾಣ; ಸತ್ಕಾರ್ಯಗಳನ್ನು ಮಾಡುವದಕ್ಕಾಗಿಯೇ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟೆವು. ನಾವು ಸತ್ಕಾರ್ಯಗಳನ್ನು ನಡಿಸುವವರಾಗಿ ಬದುಕಬೇಕೆಂದು ದೇವರು ನಮ್ಮನ್ನು ಮೊದಲೇ ನೇವಿುಸಿದನು.


ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಗರ್ಭಗುಡಿಯಾಗಿದೆಂಬದು ನಿಮಗೆ ತಿಳಿಯದೋ?


ಮನೆ ಕಟ್ಟುವವರಾದ ನೀವು ಹೀನೈಸಿದ ಕಲ್ಲು ಆತನು; ಆತನೇ ಮುಖ್ಯವಾದ ಮೂಲೆಗಲ್ಲಾದನು.


ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ. ಸಭೆಗೆ ಕೆಲವು ಮಾತುಗಳನ್ನು ಬರೆದಿದ್ದೆನು;


ಆದರೆ ಒಂದು ವೇಳೆ ನಾನು ತಡಮಾಡಿದರೂ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.


ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೇಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷೇಬಳ್ಳಿಯ ಕೆಟ್ಟ ರೆಂಬೆಗಳಾದದ್ದೇನು?


ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು;


ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇ ತನಕ ದೃಢವಾಗಿ ಹಿಡಿದುಕೊಂಡವರಾದರೆ ನಾವೇ ದೇವರ ಮನೆಯವರು.


ಮತ್ತು ನಾನೂ ನಿನಗೆ ಒಂದು ಮಾತನ್ನು ಹೇಳುತ್ತೇನೆ, ಅದೇನಂದರೆ - ನೀನು ಪೇತ್ರನು, ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುವೆನು; ಪಾತಾಳಲೋಕದ ಬಲವು ಅದನ್ನು ಸೋಲಿಸಲಾರದು.


ಆಗ ವಿದೇಶೀಯರು ನಿಂತುಕೊಂಡು ನಿಮ್ಮ ಮಂದೆಗಳನ್ನು ಮೇಯಿಸುವರು, ಅನ್ಯರು ನಿಮಗೆ ಉಳುವವರೂ ತೋಟಗಾರರೂ ಆಗುವರು.


ನೀರಾವರಿಗಳಲ್ಲೆಲ್ಲಾ ಬೀಜಬಿತ್ತುತ್ತಲೂ ದನ ಕತ್ತೆಗಳನ್ನು [ಕಾವಲಿಗೆ] ಮೇಯಬಿಡುತ್ತಲೂ ಇರುವ ನೀವು ಧನ್ಯರೇ ಸರಿ!


ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ.


ಅದಕ್ಕೆ ಆತನು - ಪರಲೋಕದಲ್ಲಿರುವ ನನ್ನ ತಂದೆಯು ನೆಡದೆ ಇರುವ ಗಿಡಗಳೆಲ್ಲಾ ಬೇರಿನೊಂದಿಗೆ ಕಿತ್ತುಹಾಕಲ್ಪಡುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು