Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:16 - ಕನ್ನಡ ಸತ್ಯವೇದವು J.V. (BSI)

16 ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇಬೇಕೆಂಬ ನಿರ್ಬಂಧ ನನಗುಂಟು. ಸಾರದಿದ್ದರೆ ನನ್ನ ಗತಿಯನ್ನು ಏನು ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಶುಭಸಂದೇಶವನ್ನು ನಾನು ಸಾರುತ್ತಿದ್ದೇನೆಂದು ಕೊಚ್ಚಿಕೊಳ್ಳುವುದಕ್ಕೂ ನನಗೆ ಆಸ್ಪದವಿಲ್ಲ. ಏಕೆಂದರೆ, ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಬದ್ಧನಾಗಿದ್ದೇನೆ. ಸಾರದಿದ್ದರೆ ನನಗೆ ಧಿಕ್ಕಾರವಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸುವಾರ್ತೆಯನ್ನು ಬೋಧಿಸುತ್ತೇನೆಂಬುದು ಹೆಮ್ಮೆಪಡುವುದಕ್ಕೆ ನನಗಿರುವ ಕಾರಣವಲ್ಲ. ಸುವಾರ್ತೆಯನ್ನು ಬೋಧಿಸುವುದು ನನ್ನ ಕರ್ತವ್ಯವಾಗಿದೆ. ಅದನ್ನು ನಾನು ಮಾಡಲೇಬೇಕು. ನಾನು ಸುವಾರ್ತೆಯನ್ನು ಬೋಧಿಸದಿದ್ದರೆ, ನನ್ನ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಸಿಕೊಳ್ಳುವ ಯಾವ ಆಸೆಯೂ ನನಗೆ ಇಲ್ಲ. ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಸಾಲಗಾರನಾಗಿದ್ದೇನೆ. ಸುವಾರ್ತೆಯನ್ನು ಸಾರದಿದ್ದರೆ, ನನ್ನ ಗತಿ ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಿಯಾ ಬರಿ ಖಬರ್ ಪ್ರಚಾರ್ ಕರ್‍ತಾ ಹೊಯ್, ಖರೆ ಹೆಚ್ಯಾ ವಿಶಯಾತ್ ಮೊಟೆಪಾನ್ ಬೊಲುಕ್ ಮಾಕಾ ಕಸ್ಲೆಚ್ ನೆವಾನ್ ನಾ. ಹೆ ಕಾಮ್ ಕರ್‍ತಲೊ ಮಾಜೊ ಖಾಯ್ದೊ, ಬರಿ ಖಬರ್ ಪ್ರಚಾರ್ ಕರಿನಾ ಹೊಲ್ಯಾರ್ ಮಾಜಿ ಗತ್ ಕಾಯ್ ಸಾಂಗು!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:16
21 ತಿಳಿವುಗಳ ಹೋಲಿಕೆ  

ಗ್ರೀಕರಿಗೂ ಇತರ ಜನಗಳಿಗೂ ಜ್ಞಾನಿಗಳಿಗೂ ಮೂಢರಿಗೂ ತೀರಿಸಬೇಕಾದ ಒಂದು ಋಣ ನನ್ನ ಮೇಲೆ ಅದೆ.


ಅರ್ಖಿಪ್ಪನಿಗೆ - ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.


ನಾನು ಯೆಹೋವನ ವಿಷಯವನ್ನು ಪ್ರಕಟಿಸೆನು, ಆತನ ಹೆಸರಿನಲ್ಲಿ ಇನ್ನು ಮಾತಾಡೆನು ಎಂದುಕೊಂಡರೆ ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ; ತಡೆದು ತಡೆದು ಆಯಾಸಗೊಂಡಿದ್ದೇನೆ, ಸಹಿಸಲಾರೆ.


ಯೇಸು ಅವನಿಗೆ - ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನು ಹಾಕಿ ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲವೆಂದು ಹೇಳಿದನು.


ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು ಎಂದು ಉತ್ತರ ಕೊಟ್ಟರು.


ಸಿಂಹವು ಗರ್ಜಿಸಿದೆ, ಭಯಪಡದವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಸಾರದಿರುವವರು ಯಾರು?


ದೇವರ ಸೇವೆಯಲ್ಲಿ ಹೊಗಳಿಕೊಳ್ಳುವದಕ್ಕೆ ಕ್ರಿಸ್ತ ಯೇಸುವಿನಲ್ಲಿ ನನಗೆ ಕಾರಣವುಂಟು.


ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.


ಅಬ್ರಹಾಮನು ಪುಣ್ಯಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಆಸ್ಪದವಿರುವದು. ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.


ಯೆಹೋವನು ನನ್ನನ್ನು ಮಂದೆಕಾಯುವದರಿಂದ ತಪ್ಪಿಸಿ - ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದನೆಮಾಡು ಎಂದು ನನಗೆ ಅಪ್ಪಣೆಕೊಟ್ಟನು.


ಆಗ ನಾನು - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ನಾಶವಾದೆನಲ್ಲಾ; ನಾನು ಹೊಲಸು ತುಟಿಯವನು, ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು; ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡವು ಎಂದು ಕೂಗಿಕೊಳ್ಳಲು


ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ. ನಾನು ಮರುಳಾದೆನು; ನೀನು ನನಗಿಂತ ಬಲಿಷ್ಟನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.


ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಕಂಗೆಡಬೇಡ; ಕಂಗೆಟ್ಟರೆ ನಾನೂ ನಿನ್ನನ್ನು ಅವರ ಮುಂದೆ ಕಂಗೆಡಿಸುವೆನು.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವದನ್ನು ಬಿಡುವದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹುಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.


ಈ ಹಕ್ಕು ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಹಕ್ಕನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನೂ ಸಹಿಸಿಕೊಂಡೆವು.


ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡಬೇಕೆಂದು ನೇವಿುಸಿದನು.


ಕ್ರಿಸ್ತನ ಸುವಾರ್ತೆಯನ್ನು ಸಾರುವದಕ್ಕಾಗಿ ನಾನು ತ್ರೋವಕ್ಕೆ ಬರಲು ಕರ್ತನ ಕೃಪೆಯಿಂದ ನನಗೆ ಒಳ್ಳೇ ಸಂದರ್ಭ ಉಂಟಾಯಿತು.


ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು