Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:8 - ಕನ್ನಡ ಸತ್ಯವೇದವು J.V. (BSI)

8 ನಾನು ಹೇಳಿದ್ದು ಬರೀ ಲೋಕವಾಡಿಕೆಯ ಮಾತೋ? ಧರ್ಮಶಾಸ್ತ್ರವೂ ಇದನ್ನು ಹೇಳುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಹೇಳಿದ್ದು ಬರೀ ಲೋಕವಾಡಿಕೆಯ ಮಾತೋ? ಧರ್ಮಶಾಸ್ತ್ರವೂ ಇದನ್ನು ಹೇಳುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇವು ಕೇವಲ ಲೋಕರೂಢಿಯ ಮಾತುಗಳಲ್ಲ. ಧರ್ಮಶಾಸ್ತ್ರವೂ ಇದನ್ನು ಅನುಮೋದಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇವುಗಳು ಕೇವಲ ಮಾನುಷ ಉದಾಹರಣೆಗಳಲ್ಲ. ದೇವರ ಧರ್ಮಶಾಸ್ತ್ರವೂ ಈ ಸಂಗತಿಗಳನ್ನು ತಿಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಕೇವಲ ಮಾನವೀಯ ನೋಟದಲ್ಲಿ ಮಾತನಾಡುತ್ತಿದ್ದೇನೋ? ನಿಯಮವು ಸಹ ಇದನ್ನು ಹೇಳುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಿಯಾ ಹೆ ಮಾನ್ಸಾಚ್ಯಾ ಚಾಲಿ ಪರ್‍ಕಾರ್ ಬೊಲುಕ್ ಲಾಗ್ಲಾ ಕಾಯ್? ಮೊಯ್ಜೆಚೊ ಖಾಯ್ದೊಬಿ ಹೆಚ್ ಸಾಂಗ್ತಾ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:8
9 ತಿಳಿವುಗಳ ಹೋಲಿಕೆ  

ಹೀಗಿರಲು ಈ ಮಾತನ್ನು ತಾತ್ಸಾರ ಮಾಡುವವನು ಮನುಷ್ಯನನ್ನು ತಿರಸ್ಕರಿಸುವದು ಮಾತ್ರವಲ್ಲದೆ ಪವಿತ್ರಾತ್ಮವರವನ್ನು ನಿಮಗೆ ದಯಪಾಲಿಸುವ ದೇವರನ್ನೂ ತಿರಸ್ಕರಿಸುತ್ತಾನೆ.


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನವ್ಮಿುಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ನಿಜವಾಗಿ ದೇವರ ವಾಕ್ಯವೇ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.


ದೇವಜನರ ಎಲ್ಲಾ ಸಭೆಗಳ ಮರ್ಯಾದೆಯ ಪ್ರಕಾರ ಸ್ತ್ರೀಯರು ಸಭೆಯ ಕೂಟಗಳಲ್ಲಿ ಸುಮ್ಮಗಿರಬೇಕು; ಮಾತಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ಅಧೀನದಲ್ಲಿರಬೇಕು; ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿಯದೆಯಲ್ಲಾ.


ಆದರೆ ಈ ಕಾರ್ಯವು ಕರ್ತನ ಶಿಷ್ಯರಿಗೆ ತಕ್ಕಂತೆ ನಡೆಯಲಿ. ಆದರೂ ಮದುವೆ ಮಾಡಿಕೊಳ್ಳುವದಕ್ಕಿಂತಲೂ ಇದ್ದ ಹಾಗೆಯೇ ಇರುವದು ಆಕೆಗೆ ಸುಖವೆಂದು ನನ್ನ ಅಭಿಪ್ರಾಯ; ನನಗೂ ದೇವರ ಆತ್ಮವುಂಟೆಂದು ನೆನಸುತ್ತೇನೆ.


ನಿಮ್ಮ ನರಭಾವದ ಬಲಹೀನತೆಯ ದೆಸೆಯಿಂದ ಲೋಕರೀತಿಯಾಗಿ ಮಾತಾಡುತ್ತೇನೆ. ಅಧರ್ಮಮಾಡುವದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ ಅಧರ್ಮಕ್ಕೂ ದಾಸರನ್ನಾಗಿ ಒಪ್ಪಿಸಿಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.


ಹಾಗಾದರೆ ನಂಬಿಕೆಯಿಂದ ಧರ್ಮಪ್ರಮಾಣವನ್ನು ನಿರರ್ಥಕಮಾಡುತ್ತೇವೋ? ಎಂದಿಗೂ ಇಲ್ಲ. ಧರ್ಮಪ್ರಮಾಣವನ್ನು ಸ್ಥಿರಪಡಿಸುತ್ತೇವೆ.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ನಾವು ನೀತಿ ತಪ್ಪಿನಡೆಯುವದರಿಂದ ದೇವರಲ್ಲಿರುವ ನೀತಿ ಪ್ರಸಿದ್ಧಿಗೆ ಬರುವದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಸ್ಥನೇನು? (ಈ ಮಾತನ್ನು ಲೋಕರೀತಿಯಾಗಿ ಆಡಿದ್ದೇನೆ.) ಎಂದಿಗೂ ಅಲ್ಲ.


ಸಹೋದರರೇ, ನಾನು ಸಾರಿದ ಸುವಾರ್ತೆಯಂತೂ ಮನುಷ್ಯ ಕಲ್ಪನೆಯಲ್ಲವೆಂದು ನಿಮಗೆ ತಿಳಿಯಪಡಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು