Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:7 - ಕನ್ನಡ ಸತ್ಯವೇದವು J.V. (BSI)

7 ಅವರು ಧರ್ಮೋಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲಿ ತಾವು ದೃಢವಾಗಿ ಮಾತಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಧರ್ಮೋಪದೇಶಕರಾಗಬೇಕೆಂದು ಬಯಸುತ್ತಿದ್ದರೂ ತಾವು ಹೇಳುವುದಾಗಲಿ, ತಾವು ದೃಢವಾಗಿ ಮಾತನಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತಮ್ಮ ಮಾತಿನ ಅರ್ಥವಾಗಲಿ, ತಮ್ಮ ವಾದದ ತಿರುಳಾಗಲಿ ಅವರಿಗೆ ತಿಳಿಯದಿದ್ದರೂ ಅವರು ಧರ್ಮೋಪದೇಶಕರಾಗಲು ಹವಣಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ತಾವು ಧರ್ಮೋಪದೇಶಕರಾಗಬೇಕೆಂಬುದು ಅವರ ಅಪೇಕ್ಷೆ. ಆದರೆ ತಾವು ಏನು ಮಾತಾಡುತ್ತಿದ್ದೇವೆ ಎಂಬುದೇ ಅವರಿಗೆ ತಿಳಿದಿಲ್ಲ. ತಮಗೆ ಖಚಿತವಾಗಿ ತಿಳಿದಿದೆ ಎಂದು ತಾವು ಹೇಳುವ ಸಂಗತಿಗಳನ್ನೂ ಅವರು ಅರ್ಥಮಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ನಿಯಮದ ಬೋಧಕರಾಗಿರಲು ಬಯಸಿದರೂ ತಾವು ಹೇಳುವುದನ್ನಾಗಲಿ, ತಾವು ಸ್ಥಾಪಿಸುವುದನ್ನಾಗಲಿ ಏನೆಂದು ದೃಢನಿಶ್ಚಯವಿಲ್ಲದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಂಚ್ಯಾ ದೆವಾಚ್ಯಾ ನೆಮಾಂಚಿ ಮಾಸ್ತರಾ ಹೊತಲಿ ಆಶಾ ಹಾಯ್ ಅನಿ ತೆನಿ ಮಾಸ್ತರಾ ಹೊವ್ಕ್ ಬಿ ಬಗ್ತ್ಯಾತ್ , ಖರೆ ತೆನಿ ಅಪ್ನಿ ಗೊಸ್ಟಿಯಾ ಅಪ್ನಿಚ್ ಸಮ್ಜುನ್ ಘೆಯ್‌ನ್ಯಾತ್, ನಾ ತರ್ ಖಲ್ಯಾ ವಿಶಯಾಸಾಟ್ನಿ ತೆನಿ ಮೊಟ್ಯಾ ವಿಶ್ವಾಸಾನ್ ಸಾಂಗುನ್ ಘೆತಾತ್ ತೆ ಬಿ ತೆನಿ ಸಮ್ಜುನ್ ಘೆಯ್‌ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:7
20 ತಿಳಿವುಗಳ ಹೋಲಿಕೆ  

ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.


ಆದರೆ ಸ್ವಾಭಾವಿಕವಾಗಿ ಬೇಟೆಗೂ ಕೊಲೆಗೂ ಹುಟ್ಟಿರುವ ವಿವೇಕಶೂನ್ಯ ಪಶುಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಹೇಳುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಕೆಟ್ಟುಹೋಗಿ ತಮ್ಮ ದುಷ್ಪ್ರವರ್ತನೆಗೆ ಸರಿಯಾದ ದುಷ್ಫಲವನ್ನು ಹೊಂದುವರು.


ಅವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಮದದಿಂದ ಕಣ್ಣುಗಾಣದವನಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.


ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು ಯಾತರಿಂದಾಯಿತು? ನೀವು ನೇಮನಿಷ್ಠೆಗಳನ್ನನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ? ನಂಬಿದ್ದರಿಂದಲೇ.


ಆ ಸ್ತ್ರೀಯರು ಯಾವಾಗಲೂ ಉಪದೇಶ ಕೇಳುತ್ತಿದ್ದರೂ ಸತ್ಯದ ಪರಿಜ್ಞಾನವನ್ನು ಹೊಂದಲಾರದವರು.


ಒಂದು ಸಂಗತಿಯನ್ನು ಮಾತ್ರ ನಿವ್ಮಿುಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ?


ಧರ್ಮಶಾಸ್ತ್ರಾಧೀನರಾಗುವದಕ್ಕೆ ಮನಸ್ಸುಳ್ಳವರೇ, ಧರ್ಮಶಾಸ್ತ್ರಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.


ಅವರ ಮಾತನ್ನು ಬಿಡಿರಿ; ತಾವೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸುವದಕ್ಕೆ ಹೋಗುತ್ತಾರೆ; ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಕುಣಿಯಲ್ಲಿ ಬೀಳುವರು ಅಂದನು.


ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು - ನೀವು ಮೋಶೆಯ ಗ್ರಂಥದಲ್ಲಿ ಹೇಳಿರುವ ನೇಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.


ಕಡೆಗೆ ಅವರು - ನಾವರಿಯೆವು ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ - ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ.


ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು.


ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿನವಾದ ತೀರ್ಪು ಆಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು