Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 2:7 - ಕನ್ನಡ ಸತ್ಯವೇದವು J.V. (BSI)

7 ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇವಿುಸಲ್ಪಟ್ಟೆನು. ನಾನು ಇಂಥವನೆಂಬದು ಸುಳ್ಳಲ್ಲ, ಸತ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು. ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ ಕಾರಣವೇ ಸುವಾರ್ತೆಯನ್ನು ಸಾರುವುದಕ್ಕಾಗಿಯೂ ಅಪೊಸ್ತಲನಾಗುವುದಕ್ಕಾಗಿಯೂ ಯೆಹೂದ್ಯರಲ್ಲದ ಜನರಿಗೆ ಬೋಧಿಸುವುದಕ್ಕಾಗಿಯೂ ನನ್ನನ್ನು ಆರಿಸಿಕೊಳ್ಳಲಾಯಿತು. (ಇದು ಸತ್ಯ, ಖಂಡಿತವಾಗಿಯೂ ಸುಳ್ಳಲ್ಲ.) ಸತ್ಯವನ್ನು ತಿಳಿದುಕೊಳ್ಳಬೇಕೆಂತಲೂ ನಂಬಬೇಕೆಂತಲೂ ನಾನು ಅವರಿಗೆ ಬೋಧಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅನಿ ಹೆಚ್ಯಾಚ್ ಸಾಟ್ನಿ ವಿಶ್ವಾಸಾಚಿ ಬರಿ ಖಬರ್ ಅನಿ ಖರೆಪಾನಾಚ್ಯಾ ವಿಶಯಾತ್ ಸಾಂಗುಕ್ ಮನುನ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ತೆಂಕಾ ಸಿಕ್ವುತಲೊ ಅನಿ ಎಕ್ ಅಪೊಸ್ತಲ್ ಕರುನ್ ಮಾಕಾ ಧಾಡಲ್ಲೆ ಹಾಯ್. ಮಿಯಾ ಝುಟೆ ಸಾಂಗಿನಾ ಹೊಲಾ; ಜೆ ಕಾಯ್ ಖರೆ ಹಾಯ್ ತೆಚ್ ಮಿಯಾ ಸಾಂಗುಕ್ ಲಾಗ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 2:7
27 ತಿಳಿವುಗಳ ಹೋಲಿಕೆ  

ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಆ ಸುವಾರ್ತಾಭಿವೃದ್ಧಿಗೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಉಪದೇಶಕನಾಗಿಯೂ ನೇವಿುಸಲ್ಪಟ್ಟೆನು.


ನನಗೆ ಮಹಾದುಃಖವೂ ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.


ಸಭಾಸ್ತಂಭಗಳೆಂದು ಹೆಸರುಗೊಂಡಿರುವ ಯಾಕೋಬ ಕೇಫ ಯೋಹಾನರು ಕಂಡು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳುಕೊಂಡು ಐಕ್ಯವನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬನಿಗೂ ಬಲಗೈ ಕೊಟ್ಟು - ನೀವು ಅನ್ಯಜನರ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬದಕ್ಕೆ ಇಗೋ ದೇವರೇ ಸಾಕ್ಷಿ.


ತನ್ನ ಮಗನನ್ನು ನಾನು ಅನ್ಯಜನರಲ್ಲಿ ಪ್ರಸಿದ್ಧಿಪಡಿಸುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಫೈಸಿದಾಗಲೇ ನಾನು ಮನುಷ್ಯರ ಆಲೋಚನೆಯನ್ನು ವಿಚಾರಿಸದೆ


ಅನ್ಯಜನರಾಗಿರುವ ನಿಮ್ಮ ಸಂಗಡ ಮಾತಾಡುತ್ತೇನೆ. ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಉದ್ಯೋಗವನ್ನು ಗಣ್ಯತೆಗೆ ತರುತ್ತೇನೆ.


ಆತನು ಭಕ್ತಿಹೀನರಾದ ಪುರಾತನರ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಲಯವನ್ನು ಬರಮಾಡಿದನು; ಆದರೆ ಸುನೀತಿಯನ್ನು ಸಾರುವವನಾಗಿದ್ದ ನೋಹನನ್ನೂ ಅವನೊಂದಿಗೆ ಬೇರೆ ಏಳು ಮಂದಿಯನ್ನೂ ಉಳಿಸಿದನು.


ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಸೌಭಾಗ್ಯವನ್ನು ಹೊಂದುವರು.


ನಾನು ಸುಳ್ಳಾಡುವದಿಲ್ಲವೆಂದು ಕರ್ತನಾದ ಯೇಸುವಿನ ತಂದೆಯೂ ನಿರಂತರ ಸ್ತುತಿಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.


ಆದರೆ ತಾವು ಯಾವನನ್ನು ನಂಬಲಿಲ್ಲವೋ ಆತನ ನಾಮವನ್ನು ಹೇಳಿಕೊಳ್ಳುವದು ಹೇಗೆ? ಮತ್ತು ಆತನ ಸುದ್ದಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ? ಸಾರುವವರು ಕಳುಹಿಸಲ್ಪಡದೆ ಸಾರುವದೆಲ್ಲಿ?


ಮೊದಲು ದಮಸ್ಕದವರಿಗೆ, ಆಮೇಲೆ ಯೆರೂಸಲೇವಿುನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ - ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಆತನು - ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು ಹೇಳಿದನು.


ಅಲ್ಲಿ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆದದ್ದನ್ನೂ ವಿವರವಾಗಿ ಹೇಳಿದರು.


ಅದಕ್ಕೆ ಯೆಹೂದ್ಯರು - ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿರುತ್ತಾನೆ? ಗ್ರೀಕರೊಳಗೆ ಚದರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಉಪದೇಶ ಮಾಡಬೇಕೆಂದಿರುತ್ತಾನೋ?


ಪ್ರಸಂಗಿಯು ಹೀಗೆ ಹೇಳುತ್ತಾನೆ - ನೋಡು, ನಾನು ತೀರ್ಮಾನವನ್ನು ನಿಶ್ಚಯಿಸಬೇಕೆಂದು ಒಂದೊಂದು ವಿಚಾರಿಸಿ ಒಂದು ವಿಷಯವನ್ನು ಕಂಡೆನು. ಎಷ್ಟು ಹುಡುಕುತ್ತಿದ್ದರೂ ಇದುವರೆಗೆ ಅದು ದೊರೆತಿರಲಿಲ್ಲ.


ಪ್ರಸಂಗಿಯಾದ ನಾನು ಯೆರೂಸಲೇವಿುನಲ್ಲಿ ಇಸ್ರಾಯೇಲ್ಯರಿಗೆ ಅರಸನಾಗಿದ್ದೆನು.


ಆತನ ಕೈಕೆಲಸಗಳು ನೀತಿಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ.


ಆದರೂ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದರಿಂದ ನಾವು ಸಹ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿಸಲ್ಪಡುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು; ಯಾಕಂದರೆ ಯಾವನಾದರೂ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲ.


ನಾನು ಪ್ರಾರ್ಥನೆ ಮಾಡುವಾಗೆಲ್ಲಾ ತಪ್ಪದೆ ನಿಮಗೋಸ್ಕರ ವಿಜ್ಞಾಪನೆಮಾಡಿ ಇನ್ನು ಮೇಲೆಯಾದರೂ ನಿಮ್ಮ ಬಳಿಗೆ ಬರುವದಕ್ಕೆ ದೇವರ ಚಿತ್ತದಿಂದ ನನಗೆ ಹೇಗೂ ಅನುಕೂಲವಾಗಬೇಕೆಂದು ಬೇಡಿಕೊಳ್ಳುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ; ಆತನ ಮಗನ ಸುವಾರ್ತೆಯನ್ನು ಸಾರುತ್ತಾ ಆತನನ್ನೇ ನನ್ನ ಆತ್ಮದಲ್ಲಿ ಆರಾಧಿಸುವವನಾಗಿದ್ದೇನೆ.


ನಾನು ಸ್ವತಂತ್ರನಲ್ಲವೇ. ಅಪೊಸ್ತಲನಲ್ಲವೇ ನಮ್ಮ ಕರ್ತನಾದ ಯೇಸುವನ್ನು ಕಂಡವನಲ್ಲವೇ. ನಾನು ಕರ್ತನ ಸೇವೆಯಲ್ಲಿ ಮಾಡಿದ ಕೆಲಸದ ಫಲವು ನೀವೇ ಅಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು