Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:1 - ಕನ್ನಡ ಸತ್ಯವೇದವು J.V. (BSI)

1 ಸಭಾಧ್ಯಕ್ಷನ ಉದ್ಯೋಗವನ್ನು ಪಡಕೊಳ್ಳಬೇಕೆಂದಿರುವವನು ಒಳ್ಳೇ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಭಾಧ್ಯಕ್ಷನ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯಾರಾದರೂ ಧರ್ಮಾಧ್ಯಕ್ಷನಾಗಲು ಅಪೇಕ್ಷಿಸಿದರೆ, ಅಂಥವನು ಉತ್ತಮ ಸೇವೆಯನ್ನೇ ಬಯಸುತ್ತಾನೆಂಬುದು ನಿಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಹೇಳುವ ಈ ಸಂಗತಿ ಸತ್ಯವಾದದ್ದು. ಅದೇನೆಂದರೆ, ಸಭಾಧ್ಯಕ್ಷನಾಗಲು ಬಹಳವಾಗಿ ಪ್ರಯತ್ನಿಸುವವನು ಒಳ್ಳೆಯ ಕೆಲಸವನ್ನೇ ಅಪೇಕ್ಷಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಭೆಯ ಮೇಲ್ವಿಚಾರಕನಾಗಲು ಬಯಸುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಿಯಾ ಸಾಂಗ್ತಲಿ ಹಿ ಸಂಗ್ತಿಯಾ ಖರ್ಯಾಚಿ ತಾಂಡ್ಯಾಚೊ ಮುಖಂಡ್ ಹೊವ್ಚೆ ಮನುನ್ ಯವಜ್ತಲೊ ಮಾನುಸ್ ಸಗ್ಳೆ ಕಾಮ್ ಎಗ್ದಮ್ ಬರೆ ಹೊವ್ಚೆ ಮನುನ್ ವಿಶ್ವಾಸ್ ಕರ್ತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:1
19 ತಿಳಿವುಗಳ ಹೋಲಿಕೆ  

ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾರಹಿತನಾಗಿರಬೇಕು; ಅವನು ಸ್ವೇಚ್ಫಾಪರನಾದರೂ ಮುಂಗೋಪಿಯಾದರೂ ಕುಡಿದು ಜಗಳಮಾಡುವವನಾದರೂ ಹೊಡೆದಾಡುವವನಾದರೂ ನೀಚಲಾಭವನ್ನು ಅಪೇಕ್ಷಿಸುವವನಾದರೂ ಆಗಿರದೆ


ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ ದೇವರ ಚಿತ್ತದ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚವಾದ ದ್ರವ್ಯಾಶೆಯಿಂದಲ್ಲ ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆಮಾಡಿರಿ.


ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.


ನೀವು ಕುರಿಗಳಂತೆ ದಾರಿತಪ್ಪಿ ತೊಳಲುವವರಾಗಿದ್ದಿರಿ, ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳನ್ನು ಕಾಯುವ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.


ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ


ಈ ಮಾತು ನಂಬತಕ್ಕದ್ದಾಗಿದೆ, ಏನಂದರೆ - ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ಜೀವಿಸುವೆವು;


ಈ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ.


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು ಫಿಲಿಪ್ಪಿಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಅವರಲ್ಲಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ ಬರೆಯುವದೇನಂದರೆ -


ಅದರಂತೆ ಒಬ್ಬ ಪಾಪಿಯು ದೇವರ ಕಡೆಗೆ ತಿರುಗಿಕೊಳ್ಳುವ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವದೆಂದು ನಿಮಗೆ ಹೇಳುತ್ತೇನೆ ಅಂದನು.


ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಉತ್ತಮವೂ ಮನುಷ್ಯರಿಗೆ ಪ್ರಯೋಜನಕರವೂ ಆಗಿವೆ.


ದೇವಜನರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸಭೆಯ ಸೇವೆಗೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೋಸ್ಕರವೂ ಆತನು ಇವರನ್ನು ಅನುಗ್ರಹಿಸಿದನು.


ಅವನ ವಿಷಯವಾಗಿ - ಅವನ ಮನೆ ಹಾಳುಬೀಳಲಿ, ಅದು ಜನಶೂನ್ಯವಾಗಲಿ ಎಂತಲೂ ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದದೆ.


ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು.


ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ಅನ್ಯಜನರಾಗಿರುವ ನಿಮ್ಮ ಸಂಗಡ ಮಾತಾಡುತ್ತೇನೆ. ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಉದ್ಯೋಗವನ್ನು ಗಣ್ಯತೆಗೆ ತರುತ್ತೇನೆ.


ಧರ್ಮಾತ್ಮನ ಫಲ ಜೀವವೃಕ್ಷ; ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು