Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:3 - ಕನ್ನಡ ಸತ್ಯವೇದವು J.V. (BSI)

3 ಅವನು ಕುಡಿದು ಜಗಳವಾಡುವವನೂ ಹೊಡೆದಾಡುವವನೂ ಆಗಿರಬಾರದು; ಸಾತ್ವಿಕನೂ ಕುತರ್ಕ ಮಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನು ಕುಡುಕನು, ಕಲಹಪ್ರಿಯನು ಮತ್ತು ಹೊಡೆದಾಡುವವನು ಆಗಿರಬಾರದು. ಶಾಂತನೂ ದಯಾವಂತನೂ ಹಣದ ವ್ಯಾಮೋಹ ಇಲ್ಲದವನೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮದ್ಯಪಾನದಲ್ಲಿ ಆಸ್ತಕನಾಗಿರಬಾರದು ಮತ್ತು ಹಿಂಸಾತ್ಮಕನಾಗಿರಬಾರದು. ಅವನು ಸಾತ್ವಿಕನೂ ಶಾಂತನೂ ಆಗಿರಬೇಕು; ಹಣದಾಸೆ ಉಳ್ಳವನಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಮದ್ಯಪಾನ ಮಾಡುವವನಾಗಿರಬಾರದು, ಹೊಡೆದಾಡುವವನಾಗಿರಬಾರದು. ಆದರೆ ಸಾತ್ವಿಕನೂ ಕುತರ್ಕ ಮಾಡದವನೂ ಹಣದಾಶೆಯಿಲ್ಲದವನೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಫಿದೊಡೊ ನಾಹೊಲ್ಯಾರ್ ಝಗ್ಡೆ-ಬಿಗ್ಡೆ ಉಟ್ವುತಲೊ ಮಾನುಸ್ ರ್‍ಹಾವ್ಚೆ ನ್ಹಯ್, ಥಂಡ್‍ ಮನಾಚೊ ಅನಿ ಸಮಾದಾನ್‍ ಮಾನುಸ್ ರ್‍ಹಾವ್ಚೊ; ತೆನಿ ಪೈಸ್ಯಾಂಚಿ ಆಶಾ ಕರುಚೆ ನ್ಹಯ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:3
45 ತಿಳಿವುಗಳ ಹೋಲಿಕೆ  

ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾರಹಿತನಾಗಿರಬೇಕು; ಅವನು ಸ್ವೇಚ್ಫಾಪರನಾದರೂ ಮುಂಗೋಪಿಯಾದರೂ ಕುಡಿದು ಜಗಳಮಾಡುವವನಾದರೂ ಹೊಡೆದಾಡುವವನಾದರೂ ನೀಚಲಾಭವನ್ನು ಅಪೇಕ್ಷಿಸುವವನಾದರೂ ಆಗಿರದೆ


ಯಾರನ್ನೂ ದೂಷಿಸದೆ ಕುತರ್ಕಮಾಡದೆ ಎಲ್ಲಾ ಮನುಷ್ಯರಿಗೆ ಪೂರ್ಣ ಸಾಧುಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ ಅವರಿಗೆ ಜ್ಞಾಪಕಕೊಡು.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ; ಅದರಿಂದ ಪಟಿಂಗತನವು ಹುಟ್ಟುತ್ತದೆ.


ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ


ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಹುಟ್ಟುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ಭೋಗಾಶೆಗಳಿಂದಲೇ ಅಲ್ಲವೇ.


ಈ [ನನ್ನ] ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ; ದೈವದರ್ಶನವಾಗುತ್ತಿರುವಾಗಲೂ ಓಲಾಡುತ್ತಾರೆ, ನ್ಯಾಯತೀರಿಸುತ್ತಿರುವಾಗಲೂ ಅತ್ತಿತ್ತ ತೂಗಾಡುತ್ತಾರೆ.


ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ ದೇವರ ಚಿತ್ತದ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚವಾದ ದ್ರವ್ಯಾಶೆಯಿಂದಲ್ಲ ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆಮಾಡಿರಿ.


ದ್ರವ್ಯಾಶೆಯಿಲ್ಲದವರಾಗಿರಿ; ನಿಮಗಿರುವವುಗಳಲ್ಲಿ ತೃಪ್ತರಾಗಿರಿ; ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ, ಎಂದಿಗೂ ತೊರೆಯುವದಿಲ್ಲವೆಂದು ದೇವರು ತಾನೇ ಹೇಳಿದ್ದಾನೆ.


ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ ಸದ್ಬೋಧನೆ ಹೇಳುವವರೂ ಆಗಿರಬೇಕೆಂದು ಬೋಧಿಸು.


ನಿಮ್ಮ ಸಹೋದರನೂ ಯೇಸುವಿನ ನಿವಿುತ್ತ ಹಿಂಸೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ದ್ವೀಪದಲ್ಲಿದ್ದೆನು.


ಅವರ ಗತಿಯನ್ನು ಏನು ಹೇಳಲಿ; ಇವರು ಕಾಯಿನನ ಮಾರ್ಗವನ್ನು ಹಿಡಿದವರೂ ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಣುಗಿದವರೂ ಕೋರಹನಂತೆ ಎದುರುಮಾತುಗಳನ್ನಾಡಿ ನಾಶವಾಗಿಹೋಗತಕ್ಕವರೂ ಆಗಿದ್ದಾರೆ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.


ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ನಾನು ಯಾರ ಬೆಳ್ಳಿಬಂಗಾರವನ್ನಾಗಲಿ ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.


ಅವರಿಗೆ - ನನ್ನ ಆಲಯವು ಪ್ರಾರ್ಥನಾಲಯವೆನಿಸಿಕೊಳ್ಳುವದು ಎಂದು ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡುತ್ತೀರಿ ಎಂದು ಹೇಳಿದನು.


ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು [ದೇವಾಲಯದ] ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೇದು! ನಾನು ನಿಮಗೆ ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.


ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ ಹಲ್ಲುಗಳಿಗೆ ಕುರುಕುವದೇನಾದರೂ ಸಿಕ್ಕಿರುವ ತನಕ ಶುಭವನ್ನು ಪ್ರಕಟಿಸುವವರೂ ತಮ್ಮ ಬಾಯಿಗೆ ಕವಳಕೊಡದವನ ಮೇಲೆ ಯುದ್ಧನಿರ್ಧರಿಸುವವರೂ ಆಗಿರುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ -


ಗಾಳಿಯನ್ನೂ ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು - ನಾನು ದ್ರಾಕ್ಷಾರಸಮದ್ಯಗಳ ವಿಷಯವಾಗಿ ನಿನಗೆ ಪ್ರವಾದನೆಮಾಡುವೆನು ಎಂದು ಹೇಳಿದರೆ ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.


ಒಳಗಣ ಪ್ರಾಕಾರವನ್ನು ಪ್ರವೇಶಿಸುವಾಗ ಯಾವ ಯಾಜಕನೂ ದ್ರಾಕ್ಷಾರಸವನ್ನು ಕುಡಿದಿರಬಾರದು.


ಅವರ ಜ್ಞಾನವು ಎಷ್ಟರದು? ಆದದರಿಂದ ನಾನು ಇವರ ಹೆಂಡರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರವಿುಸುವವರಿಗೂ ಕೊಟ್ಟುಬಿಡುವೆನು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರು ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.


ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತುಹೋದವರ ಫಲವತ್ತಾದ ತಗ್ಗಿಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವಿನ ಪಾಡೇ!


ಆದಿಗಿಂತ ಅಂತ್ಯವು ಲೇಸು; ಹಮ್ಮುಗಾರನಿಗಿಂತ ತಾಳ್ಮೆಯುಳ್ಳವನು ಉತ್ತಮ.


ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.


ಸೂರೆಮಾಡುವವರೆಲ್ಲರ ದಾರಿಯೂ ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವದು.


ಇವರ ನ್ಯಾಯಾಸನವು ಬೇರ್ಷೆಬದಲ್ಲಿತ್ತು. ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು ನ್ಯಾಯವಿರುದ್ಧವಾದ ತೀರ್ಪುಮಾಡುತ್ತಿದ್ದದರಿಂದ


ಮನುಷ್ಯರು ಸ್ವಾರ್ಥಚಿಂತಕರೂ ಹಣದಾಸೆಯವರೂ ಬಡಾಯಿಕೊಚ್ಚುವವರೂ ಅಹಂಕಾರಿಗಳೂ ದೂಷಕರೂ ತಂದೆತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು