Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 4:3 - ಕನ್ನಡ ಸತ್ಯವೇದವು J.V. (BSI)

3 ಅವರನ್ನು ಮರುಳುಗೊಳಿಸಿ ಮದುವೆಯಾಗಬಾರದೆಂತಲೂ ಇಂಥಿಂಥ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು. ಆದರೆ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಸಕಲ ವಿಧವಾದ ಆಹಾರವನ್ನೂ ಉಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮದುವೆಯಾಗಬಾರದು, ಇಂತಿಂಥ ಆಹಾರವನ್ನು ಸೇವಿಸಬಾರದು ಎಂದು ಬೋಧಿಸುತ್ತಾರೆ. ಆದರೆ ಸತ್ಯವನ್ನು ಅರಿತು ಯಾರು ವಿಶ್ವಾಸಿಗಳಾಗಿದ್ದಾರೋ ಅಂಥವರು ಎಲ್ಲ ಆಹಾರಪದಾರ್ಥಗಳನ್ನು ಕೃತಜ್ಞತಾಸ್ತುತಿಯೊಡನೆ ಸೇವಿಸಲೆಂದೇ ದೇವರು ಅವುಗಳನ್ನು ಸೃಷ್ಟಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನರು ಮದುವೆಮಾಡಿಕೊಳ್ಳಬಾರದೆಂದೂ ಕೆಲವು ಆಹಾರಪದಾರ್ಥಗಳನ್ನು ತಿನ್ನಬಾರದೆಂದೂ ಅವರು ಹೇಳುತ್ತಾರೆ. ಆದರೆ ನಂಬಿಕೆಯುಳ್ಳವರು ಮತ್ತು ಸತ್ಯವನ್ನು ತಿಳಿದಿರುವವರು ಕೃತಜ್ಞತಾಸ್ತುತಿ ಮಾಡಿ ಆ ಆಹಾರಪದಾರ್ಥಗಳನ್ನು ತಿನ್ನಲಿ. ಏಕೆಂದರೆ ಅವುಗಳನ್ನು ನಿರ್ಮಿಸಿದಾತನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ತಿಳಿದುಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವುದಕ್ಕೋಸ್ಕರ ದೇವರು ಸೃಷ್ಟಿಸಿದ ಆಹಾರವನ್ನು ತಿನ್ನಬಾರದೆಂತಲೂ ಆಜ್ಞಾಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಹಿ ಲೊಕಾ ಲಗಿನ್ ಕರುನ್ ಘೆತಲೆ ಅನಿ ಉಲ್ಲಿ ಖಾತಲಿ ದಿನ್ಸಾ ಖಾವ್ಚೆ ನ್ಹಯ್ ಮನುನ್ ಶಿಕ್ವುತಾತ್, ಖರೆಪಾನ್ ಒಳ್ಕುನ್ ಘೆಟಲ್ಲ್ಯಾನಿ ಅನಿ ಅಪ್ನಾ ವರ್‍ತಿ ವಿಶ್ವಾಸ್ ಥವಲ್ಲ್ಯಾನಿ ಎಕ್ ಧನ್ಯವಾದಾಚಿ ಮಾಗ್ನಿ ಸಾಂಗುನ್ ಖಾವ್ಕ್ ಮನುನುಚ್ ದೆವಾನ್ ತಿ ಖಾತಲಿ ದಿನ್ಸಾ ಕರ್‍ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 4:3
30 ತಿಳಿವುಗಳ ಹೋಲಿಕೆ  

ಆತನು ಉಂಟುಮಾಡಿದ್ದೆಲ್ಲವೂ ಒಳ್ಳೇದೇ; ದೇವರ ಸ್ತೋತ್ರಮಾಡಿ ತೆಗೆದುಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿಷಿದ್ಧವೆಂದು ಹೇಳತಕ್ಕದ್ದಲ್ಲ;


ಗಂಡಹೆಂಡರ ಸಂಬಂಧವು ನಿಷ್ಕಳಂಕವಾಗಿರಬೇಕು. ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳುಕೊಳ್ಳಿರಿ.


ದಿನವನ್ನು ಗಣ್ಯಮಾಡುವವನು ಕರ್ತನಿಗಾಗಿ ಅದನ್ನು ಗಣ್ಯಮಾಡುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವಸ್ತೋತ್ರ ಮಾಡುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವಸ್ತೋತ್ರ ಮಾಡುತ್ತಾನೆ.


ಹೀಗಿರುವದರಿಂದ ತಿಂದು ಕುಡಿಯುವ ವಿಷಯದಲ್ಲಿಯೂ ಹಬ್ಬ ಅಮವಾಸ್ಯೆ ಸಬ್ಬತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ಎಣಿಸಬಾರದು.


ಆದರೆ ಆಹಾರವು ನಮ್ಮನ್ನು ದೇವರ ಸನ್ನಿಧಿಗೆ ಸೇರಿಸಲಾಗದು. ತಿನ್ನದಿದ್ದರೆ ನಮಗೆ ಕಡಿಮೆಯಿಲ್ಲ, ತಿಂದರೆ ನಮಗೆ ಹೆಚ್ಚಿಲ್ಲ.


ಭೂವಿುಯ ಮೇಲೆ ತಿರುಗುವ ಎಲ್ಲಾ ಜೀವಜಂತುಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಪೈರುಗಳನ್ನು ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.


ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ಒಂದು ವೇಳೆ ನೀನು ಮದುವೆಮಾಡಿಕೊಂಡರೂ ಪಾಪವಿಲ್ಲ. ಕನ್ನಿಕೆಯು ಮದುವೆಮಾಡಿಕೊಂಡರೂ ಪಾಪವಿಲ್ಲ. ಆದರೆ ಮದುವೆಮಾಡಿಕೊಂಡವರಿಗೆ ಶರೀರಸಂಬಂಧವಾಗಿ ಕಷ್ಟಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.


ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ.


ನಾನಾವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ದೇವರ ಕೃಪೆಯನ್ನು ಆತುಕೊಂಡು ಮನಸ್ಸನ್ನು ದೃಢಮಾಡಿಕೊಳ್ಳುವದು ಉತ್ತಮವೇ; ಭೋಜನಪದಾರ್ಥಗಳನ್ನು ವಿಶೇಷಿಸುವದರಿಂದ ಅದು ಆಗುವದಿಲ್ಲ. ಭೋಜನಪದಾರ್ಥಗಳನ್ನು ವಿಶೇಷಿಸಿ ನಡೆದವರು ಏನೂ ಪ್ರಯೋಜನ ಹೊಂದಲಿಲ್ಲ.


ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬದು ಆತನ ಚಿತ್ತವಾಗಿದೆ.


ಭೋಜನಪದಾರ್ಥಗಳು ಹೊಟ್ಟೆಗಾಗಿಯೂ ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ ಅವೆ; ದೇವರು ಇದನ್ನೂ ಅವುಗಳನ್ನೂ ಕೂಡ ತೆಗೆದುಹಾಕುವನು. ಆದರೂ ದೇಹವು ಹಾದರಕ್ಕೋಸ್ಕರ ಇರುವಂಥದಲ್ಲ, ಕರ್ತನಿಗೋಸ್ಕರವಾಗಿದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.


ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರ ಸ್ತೋತ್ರಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಡಲು ಶಿಷ್ಯರು ಗುಂಪಿನವರಿಗೆ ಹಂಚಿಕೊಟ್ಟರು.


ಇಗೋ ನಾನು ಕಂಡದ್ದು ಇದೇ; ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದು ಮೇಲಾಗಿಯೂ ಉಚಿತವಾಗಿಯೂ ಇದೆ; ಇದೇ ಅವನ ಪಾಲು.


ಮತ್ತು ಜನರಿಗೆ ಹುಲ್ಲಿನ ಮೇಲೆ ಕೂತುಕೊಳ್ಳುವದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತಕ್ಕೊಂಡು ಆಕಾಶದ ಕಡೆಗೆ ನೋಡಿ ದೇವರ ಸ್ತೋತ್ರಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರ ಕೈಗೆ ಕೊಟ್ಟನು; ಶಿಷ್ಯರು ಜನರ ಗುಂಪಿಗೆ ಕೊಟ್ಟರು.


ರೊಟ್ಟಿಯನ್ನು ತೆಗೆದುಕೊಂಡು ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವದಕ್ಕೆ ಪ್ರಾರಂಭಿಸಿದನು.


ಆದರೆ ಅಷ್ಟರೊಳಗೆ ಬೇರೆ ದೋಣಿಗಳು ತಿಬೇರಿಯದಿಂದ ಹೊರಟು ಸ್ವಾವಿುಯು ಸ್ತೋತ್ರಮಾಡಿ ಜನರಿಗೆ ರೊಟ್ಟೀ ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದಿದ್ದವು.


ಆತನು ಅವರ ಸಂಗಡ ಊಟಕ್ಕೆ ಕೂತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು ಅವರಿಗೆ ಕೊಡುತ್ತಿರಲಾಗಿ ಅವರ ಕಣ್ಣುಗಳು ತೆರೆದವು.


ಅವನು ತನ್ನ ಪಿತೃಗಳ ದೇವರುಗಳನ್ನಾಗಲಿ ಸ್ತ್ರೀಯರು ಮೋಹಿಸುವ ದೇವರನ್ನಾಗಲಿ ಯಾವ ದೇವರನ್ನಾಗಲಿ ಲಕ್ಷಿಸನು. ಎಲ್ಲಾ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು.


ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿ ಹೋಗುವವರೆಗೆ ಜನರು ಊಟಮಾಡುವದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ; ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ; ಅವನು ಸಿಕ್ಕುವ ಸಮಯ ಇದೇ ಅಂದರು.


ಬಾಯೊಳಕ್ಕೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಬಾಯೊಳಗಿಂದ ಹೊರಡುವಂಥದೇ ಮನುಷ್ಯನನ್ನು ಹೊಲೆಮಾಡುವದು ಎಂದು ಹೇಳಿದನು.


ಆದದರಿಂದ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಯಜಮಾನಿಯರಾಗಿರುವದು ನನಗೆ ಒಳ್ಳೇದಾಗಿ ತೋಚುತ್ತದೆ; ಹಾಗೆ ಮಾಡುವದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು