Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 4:6 - ಕನ್ನಡ ಸತ್ಯವೇದವು J.V. (BSI)

6 ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೇ ಸೇವಕನಾಗಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈ ವಿಷಯಗಳನ್ನೆಲ್ಲಾ ಇತರ ಸಹೋದರರಿಗೆ ನೀನು ವಿವರಿಸುವವನಾದರೆ, ನೀನು ಕ್ರಿಸ್ತಯೇಸುವಿನ ಯೋಗ್ಯ ದಾಸನಾಗುವೆ, ನೀನು ಅನುಸರಿಸುತ್ತಾ ಬಂದಿರುವ ಸದ್ಬೋಧನೆಯಿಂದಲೂ ವಿಶ್ವಾಸದಿಂದಲೂ ಆಧ್ಯಾತ್ಮಿಕ ಪೋಷಣೆಯನ್ನು ಪಡೆಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಲ್ಲಿರುವ ಸಹೋದರ ಸಹೋದರಿಯರಿಗೆ ಈ ಸಂಗತಿಗಳನ್ನು ತಿಳಿಸಿದರೆ, ನೀನು ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ ಎಂಬುದನ್ನೂ ನಂಬಿಕೆಯ ನುಡಿಗಳಿಂದ ಮತ್ತು ಉತ್ತಮ ಉಪದೇಶಗಳನ್ನು ಅನುಸರಿಸಿದ್ದರಿಂದ ಬಲಗೊಂಡಿರುವೆ ಎಂಬುದನ್ನೂ ತೋರಿಸಿದಂತಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈ ವಿಷಯಗಳನ್ನು ಸಹೋದರರಿಗೆ ತಿಳಿಸುವವನಾದರೆ ನೀನು ಅನುಸರಿಸುತ್ತಿರುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ದೆವಾಚ್ಯಾ ಗೊಸ್ಟಿಯಾಂಚ್ಯಾ ವಿಶ್ವಾಸಾನ್ ಅನಿ ಖರ್ಯಾಪಾನಾಚ್ಯಾ ಸಿಕಾಪಾ ಸರ್ಕೆ ಚಲುನ್, ಕಶೆ ತಿಯಾ ದೆವಾಚ್ಯಾ ವಾಟೆರ್ ಚಲ್ತೆ ತಸೆ ದೆವಾ ವರ್‍ತಿ ವಿಶ್ವಾಸ್ ಥವಲ್ಲ್ಯಾ ಭಾವ್ ಭೆನಿಯಾಕ್ನಿ ಹ್ಯಾ ಮಿಯಾ ಸಾಂಗಲ್ಲ್ಯಾ ಗೊಸ್ಟಿಯಾ ಸಿಕ್ವುಲೆ ತರ್ ತಿಯಾ ಜೆಜು ಕ್ರಿಸ್ತಾಚೊ ಬರೊ ಸೆವಕ್ ಹೊತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 4:6
39 ತಿಳಿವುಗಳ ಹೋಲಿಕೆ  

ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಸಕಲಜ್ಞಾನದಿಂದ ಕೂಡಿದವರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿಕೊಳ್ಳಿರಿ, ಬುದ್ಧಿಹೇಳಿಕೊಳ್ಳಿರಿ; ಕರ್ತನ ಕೃಪೆಯನ್ನು ನೆನಸಿಕೊಳ್ಳುವವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಗಾನಮಾಡಿರಿ.


ನೀನಾದರೋ ಸ್ವಸ್ಥಬೋಧನೆಗೆ ಅನುಗುಣವಾಗಿ ಉಪದೇಶಮಾಡು.


ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸಂಗತಿಗಳನ್ನೆಲ್ಲಾ ನಿಮಗೆ ತಿಳಿಸುವನು.


ಆಗ ಆತನು ಅವರಿಗೆ - ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು ಮನೇಯಜಮಾನನಿಗೆ ಹೋಲಿಕೆಯಾಗಿದ್ದಾನೆ. ಅವನು ತನ್ನ ಬೊಕ್ಕಸದೊಳಗಿಂದ ಹೊಸ ವಸ್ತುಗಳನ್ನೂ ಹಳೇ ವಸ್ತುಗಳನ್ನೂ ಹೊರಗೆ ತರುತ್ತಿರುವನು ಎಂದು ಹೇಳಿದನು.


ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವವಂದರೆ - ಕರ್ತನು ತನ್ನ ಪ್ರಜೆಯನ್ನು ಐಗುಪ್ತ ದೇಶದೊಳಗಿಂದ ಬಿಡಿಸಿದ ತರುವಾಯ ಅವರೊಳಗೆ ನಂಬದೆಹೋದವರನ್ನು ನಾಶಮಾಡಿದನು.


ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರವಿುಸಿ ಮುಂದಕ್ಕೆ ಹೋಗುವವನಿಗೆ ದೇವರ ಅನ್ಯೋನ್ಯತೆಯಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಉಂಟು.


ಎಲ್ಲಾ ತರದ ನಿಂದೆಯನ್ನೂ ವಿಸರ್ಜಿಸಿ ಹಸುಮಕ್ಕಳಂತೆ ಪಾರಮಾರ್ಥಿಕವಾದ ಶುದ್ಧ ಹಾಲನ್ನು ಬಯಸಿರಿ; ಅದರಿಂದ ಬೆಳೆಯುತ್ತಾ ರಕ್ಷಣೆಯನ್ನು ಹೊಂದುವಿರಿ; ಕರ್ತನು ದಯಾಳುವೆಂದು ನೀವು ಅನುಭವದಿಂದ ತಿಳಿದುಕೊಂಡಿದ್ದೀರಲ್ಲವೋ?


ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಗಳುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲರಾದ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.


ನೀನಾದರೋ ನನ್ನನ್ನು ಅನುಸರಿಸುವವನಾಗಿದ್ದು ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘಶಾಂತಿ ಪ್ರೀತಿ ಸೈರಣೆ ಇವುಗಳನ್ನೂ


ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ ದೇವರ ಕೃಪಾವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕಕೊಡುತ್ತೇನೆ.


ಯಾವನಾದರೂ ಬೇರೆ ವಿಧವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಉಪದೇಶಕ್ಕೂ ಸಮ್ಮತಿಸದೆ ಹೋದರೆ


ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು; ಹೀಗಿರುವದರಿಂದ ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.


ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ಪ್ರಬೋಧಿಸುವದಕ್ಕೂ ನಮ್ಮ ಸಹೋದರನೂ ಕ್ರಿಸ್ತನ ಸುವಾರ್ತೆಯ ಉದ್ಯೋಗದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.


ತಮಗೆ ದರ್ಶನಗಳಾದವೆಂದು ಕೊಚ್ಚಿಕೊಳ್ಳುತ್ತಾರೆ, ಮತ್ತು ಪ್ರಾಪಂಚಿಕ ಬುದ್ಧಿಯಿಂದ ನಿರಾಧಾರವಾಗಿ ಉಬ್ಬಿಕೊಂಡಿದ್ದಾರೆ, ಆದರೆ ಕ್ರಿಸ್ತನೆಂಬ ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವರಾಗಿದ್ದಾರೆ. ಇಂಥವರು ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವದಕ್ಕೆ ಅವಕಾಶಕೊಡಬೇಡಿರಿ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಕೂಡಿಸಲ್ಪಟ್ಟು ದೇವರು ಕೊಡುವ ವೃದ್ಧಿಯಿಂದ ಅಭಿವೃದ್ಧಿಯಾಗುತ್ತಾ ಬರುತ್ತದೆ.


ಆದರೆ ನಾವು ಯಾವ ಸೂತ್ರವನ್ನನುಸರಿಸಿ ಇಲ್ಲಿಯವರೆಗೆ ಬಂದೆವೋ ಅದನ್ನೇ ಅನುಸರಿಸಿ ನಡೆಯೋಣ.


ನನ್ನ ಸಂಗತಿಗಳು ನಿಮಗೆ ಸಹ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು.


ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತ ರೂಪವಾದದ್ದಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತರೂಪವಾದ ಒಡಂಬಡಿಕೆಯು ಮರಣವನ್ನುಂಟುಮಾಡುತ್ತದೆ; ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.


ಈ ನಿವಿುತ್ತದಿಂದ ಕರ್ತನಲ್ಲಿ ನನ್ನ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ಅವನು ನನಗೆ ಪ್ರಿಯನೂ ನಂಬಿಗಸ್ತನೂ ಆಗಿದ್ದಾನೆ. ಅವನು ಕ್ರಿಸ್ತನ ಸೇವೆಯಲ್ಲಿರುವ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮವನ್ನು ನಿಮ್ಮ ನೆನಪಿಗೆ ತರುವನು.


ಆದರೂ ನಿಮಗೆ ಜ್ಞಾಪಕಕೊಡಬೇಕೆಂದು ಅಲ್ಲಲ್ಲಿ ಹೆಚ್ಚಾದ ಧೈರ್ಯದಿಂದ ಬರೆದಿದ್ದೇನೆ. ಯಾಕಂದರೆ ನಾನು ಅನ್ಯಜನರಿಗೋಸ್ಕರ ಯೇಸು ಕ್ರಿಸ್ತನ ಸೇವಕನಾಗುವದಕ್ಕೆ ನನಗೆ ದೇವರ ಅನುಗ್ರಹವಾಯಿತು. ನಾನು ದೇವರ ಸುವಾರ್ತೆಯ ಸೇವೆಯನ್ನು ಯಾಜಕಸೇವೆ ಎಂಬಂತೆ ನಡಿಸಿ ಅನ್ಯದೇಶಸ್ಥರೆಂಬ ಕಾಣಿಕೆಯು ಪವಿತ್ರಾತ್ಮನ ಮೂಲಕವಾಗಿ ಪವಿತ್ರವಾಗಿದ್ದು ದೇವರಿಗೆ ಸಮರ್ಪಕವಾಗುವಂತೆ ಯತ್ನೈಸುವವನಾಗಿದ್ದೇನೆ.


ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವೂ ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು - ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯವೆಂಬದಾಗಿ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು ಅಂದನು.


ಆದಕಾರಣ ನಾನು ಕಣ್ಣೀರುಸುರಿಸುತ್ತಾ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿಹೇಳಿದೆನೆಂದು ನೀವು ಜ್ಞಾಪಕಮಾಡಿಕೊಂಡು ಎಚ್ಚರವಾಗಿರಿ.


ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ ಹೃದಯಾನಂದವೂ ಆದವು; ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!


ನಾನು ನಿಮಗೆ ಸುಬೋಧೆಯನ್ನು ಮಾಡುವೆನು, ನನ್ನ ಉಪದೇಶವನ್ನು ಬಿಡಬೇಡಿರಿ.


ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆ ನಂಬಿಕೆಗೆ ಯೋಗ್ಯವಾದದ್ದು; ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.


ನಾನು ಬುಡದಿಂದ ಎಲ್ಲವನ್ನೂ ಚೆನ್ನಾಗಿ ವಿಚಾರಿಸಿದವನಾದಕಾರಣ ಅವುಗಳನ್ನು ನಿನಗೆ ಕ್ರಮವಾಗಿ ಬರೆಯುವದು ಒಳ್ಳೇದೆಂದು ನನಗೂ ತೋಚಿತು.


ಆ ದಿವಸಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ಸಹೋದರರು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗಂದನು -


ಅವರು ಕ್ರಿಸ್ತನ ಸೇವಕರೋ ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ಬುದ್ಧಿಸ್ವಾಧೀನವಿಲ್ಲದವನಾಗಿ ಮಾತಾಡುತ್ತೇನೆ. ಆತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಗಳೊಳಗೆ ಬಿದ್ದೆನು; ವಿುತಿಮೀರಿ ಪೆಟ್ಟುಗಳನ್ನು ತಿಂದೆನು, ಅನೇಕಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡೆನು.


ಅವನ ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ.


ತಿಮೊಥೆಯನ ಗುಣವನ್ನು ನೀವು ನೋಡಿ ತಿಳಿದುಕೊಂಡಿದ್ದೀರಿ; ಮಗನು ತಂದೆಗೆ ಹೇಗೋ ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಕಷ್ಟಪಟ್ಟು ಕೆಲಸನಡಿಸಿದನೆಂಬದು ನಿಮಗೆ ಗೊತ್ತುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು