Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 4:8 - ಕನ್ನಡ ಸತ್ಯವೇದವು J.V. (BSI)

8 ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು; ಅದಕ್ಕೆ ಇಹಪರಗಳಲ್ಲಿಯೂ ಜೀವವಾಗ್ದಾನ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ದೇಹವನ್ನು ಪಳಗಿಸಿಕೊಂಡರೆ ನಿನಗೆ ಕೆಲವು ರೀತಿಯಲ್ಲಿ ಸಹಾಯಕವಾಗುವುದು. ಆದರೆ ದೇವರ ಸೇವೆಯು ನಿನಗೆ ಎಲ್ಲಾ ರೀತಿಯಲ್ಲಿಯೂ ಸಹಾಯಕವಾಗುವುದು. ದೇವರ ಸೇವೆಯು ಇಹಪರಗಳೆರಡರಲ್ಲೂ ನಿನಗೆ ಆಶೀರ್ವಾದವನ್ನು ಉಂಟು ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಂಗಾಚಿ ಕಸರತ್ ಉಲ್ಲಿ ಫಾಯ್ದ್ಯಾಕ್ ಪಡ್ತಾ, ತೆ ಖರೆ ಹಾಯ್, ಖರೆ ಆತ್ಮಿಕ್ ರಿತಿಚಿ ಕಸ್‍ರತ್ ಸಗ್ಳ್ಯಾ ರಿತಿನ್ ಲೈ ಕಿಮ್ತಿಚಿ, ತಿ ಅತ್ತಾಚ್ಯಾ ಅನಿ ಫಿಡ್ಲ್ಯಾ ದೊನಿಬಿ ಜಿವನಾಚ್ಯಾ ಗೊಸ್ಟಿಯಾ ಮಿಳ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 4:8
52 ತಿಳಿವುಗಳ ಹೋಲಿಕೆ  

ಹೀಗಿರುವದರಿಂದ, ನೀವು ಮೊದಲು ದೇವರ ರಾಜ್ಯಕ್ಕಾಗಿಯೂ ನೀತಿಗಾಗಿಯೂ ತವಕಪಡಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.


ಧನ ಮಾನ ಜೀವಗಳು ದೀನಭಾವಕ್ಕೂ ಯೆಹೋವನ ಭಯಕ್ಕೂ ಫಲ.


ಯೆಹೋವನ ಭಯವು ಜೀವದಾಯಕವು; [ಭಯಭಕ್ತಿಯುಳ್ಳವನು] ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸದು.


ಕ್ರಿಸ್ತನು ತಾನು ಕೊಡುತ್ತೇನೆಂದು ನಮಗೆ ವಾಗ್ದಾನ ಮಾಡಿದ್ದು ನಿತ್ಯಜೀವವು.


ಅವನಿಗೆ ಈಗಿನ ಕಾಲದಲ್ಲಿ ಮನೆ ಅಣ್ಣ ತಮ್ಮ ಅಕ್ಕ ತಂಗಿ ತಾಯಿ ಮಕ್ಕಳು ಭೂವಿು ಇವೆಲ್ಲವೂ ಹಿಂಸೆಗಳು ಸಹಿತವಾಗಿ ನೂರರಷ್ಟು ಸಿಕ್ಕೇ ಸಿಕ್ಕುತ್ತವೆ; ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವದು.


ನೀತಿವಂತರೋ ದೇಶವನ್ನು ಅನುಭವಿಸುವವರಾಗಿ ಅದರಲ್ಲಿ ಶಾಶ್ವತವಾಗಿ ವಾಸಿಸುವರು.


ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು.


ನಾನಾವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ದೇವರ ಕೃಪೆಯನ್ನು ಆತುಕೊಂಡು ಮನಸ್ಸನ್ನು ದೃಢಮಾಡಿಕೊಳ್ಳುವದು ಉತ್ತಮವೇ; ಭೋಜನಪದಾರ್ಥಗಳನ್ನು ವಿಶೇಷಿಸುವದರಿಂದ ಅದು ಆಗುವದಿಲ್ಲ. ಭೋಜನಪದಾರ್ಥಗಳನ್ನು ವಿಶೇಷಿಸಿ ನಡೆದವರು ಏನೂ ಪ್ರಯೋಜನ ಹೊಂದಲಿಲ್ಲ.


ಶಿಷ್ಟರಿಗೆ ಶುಭವೇ ಎಂದು ಹೇಳಿರಿ, ಅವರು ತಮ್ಮ ಸುಕೃತಫಲವನ್ನು ಅನುಭವಿಸುವರಷ್ಟೆ.


ಪಾಪಿಯು ನೂರು ಸಲ ಅಧರ್ಮಮಾಡಿ ಬಹುಕಾಲ ಬದುಕಿದರೂ ದೇವರ ಮುಂದೆ ಹೆದರಿ ಆತನಲ್ಲಿ ಭಯಭಕ್ತಿಯುಳ್ಳವರಿಗೆ ಮೇಲೇ ಆಗುವದೆಂದು ಬಲ್ಲೆನು.


ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ; ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.


ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಉತ್ತಮವೂ ಮನುಷ್ಯರಿಗೆ ಪ್ರಯೋಜನಕರವೂ ಆಗಿವೆ.


ಮನುಷ್ಯಮಾತ್ರದವನಿಂದ ದೇವರಿಗೆ ಏನು ಪ್ರಯೋಜನವಾದೀತು? ಒಬ್ಬನು ವಿವೇಕಿಯಾಗಿ ನಡೆದುಕೊಂಡರೆ ಅವನಿಗೇ ಪ್ರಯೋಜನವಷ್ಟೆ.


ಅದಕ್ಕೆ ಸಮುವೇಲನು - ಯೆಹೋವನು ವಿಧೇಯತ್ವಕ್ಕೆ ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವದಕ್ಕಿಂತ ಮಾತು ಕೇಳುವದು ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತ್ವವು ವಿಶೇಷವಾಗಿದೆ.


ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.


ಆದರೆ ಆಹಾರವು ನಮ್ಮನ್ನು ದೇವರ ಸನ್ನಿಧಿಗೆ ಸೇರಿಸಲಾಗದು. ತಿನ್ನದಿದ್ದರೆ ನಮಗೆ ಕಡಿಮೆಯಿಲ್ಲ, ತಿಂದರೆ ನಮಗೆ ಹೆಚ್ಚಿಲ್ಲ.


ನೀವು ಶೆಬದ ಧೂಪವನ್ನೂ ದೂರದೇಶದ ಒಳ್ಳೆ ಬಜೆಯನ್ನೂ ನನಗೆ ಅರ್ಪಿಸುವದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಲ್ಲ.


ಇವನಿಗೆ ಆಶ್ರಯವು ಗಿರಿದುರ್ಗ, ಅನ್ನವು ಉಚಿತವಾಗಿ ಒದಗುವದು, ನೀರೂ ನಿಸ್ಸಂದೇಹ.


ಕೆಡುಕರು ತೆಗೆದುಹಾಕಲ್ಪಡುವರು; ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ.


ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ, ಲೋಕವಾಗಲಿ ಜೀವವಾಗಲಿ ಮರಣವಾಗಲಿ, ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ;


ಮತ್ತು ನನ್ನ ಹೆಸರಿನ ನಿವಿುತ್ತ ಮನೆಗಳನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ಅಕ್ಕತಂಗಿಯರನ್ನಾಗಲಿ ತಂದೆಯನ್ನಾಗಲಿ ತಾಯಿಯನ್ನಾಗಲಿ ಮಕ್ಕಳನ್ನಾಗಲಿ ಭೂವಿುಯನ್ನಾಗಲಿ ಬಿಟ್ಟುಬಿಟ್ಟಿರುವವರೆಲ್ಲರಿಗೆ ಅನೇಕ ಪಾಲು ಹೆಚ್ಚಾಗಿ ಸಿಕ್ಕುವದು; ಮತ್ತು ಅವರು ನಿತ್ಯಜೀವಕ್ಕೆ ಬಾಧ್ಯರಾಗುವರು.


ಅವರು ಅದನ್ನು ಕೇಳಿ ಆತನನ್ನು ಸೇವಿಸಿದರೆ ತಮ್ಮ ದಿನಗಳನ್ನು ಸುಖದಲ್ಲಿಯೂ ವರುಷಗಳನ್ನು ಸಂತೋಷದಲ್ಲಿಯೂ ಕಳೆಯುವರು.


ಯಾವನಾದರೂ ಮನುಷ್ಯಕುಮಾರನಿಗೆ ವಿರೋಧವಾಗಿ ಮಾತಾಡಿದರೆ ಅದು ಅವನಿಗೆ ಕ್ಷವಿುಸಲ್ಪಡುವದು; ಪವಿತ್ರಾತ್ಮನಿಗೆ ವಿರೋಧವಾಗಿ ಮಾತಾಡಿದರೆ ಅವನಿಗೆ ಇಹದಲ್ಲಾಗಲಿ ಪರದಲ್ಲಾಗಲಿ ಕ್ಷವಿುಸಲ್ಪಡುವದಿಲ್ಲ.


ಅಜ್ಜೀಕಥೆಗಳಂತಿರುವ ಕೇವಲ ಪ್ರಾಪಂಚಿಕವಾದ ಕಥೆಗಳನ್ನು ತಳ್ಳಿಬಿಟ್ಟು ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ.


ಯಾವನಾದರೂ ಬೇರೆ ವಿಧವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಉಪದೇಶಕ್ಕೂ ಸಮ್ಮತಿಸದೆ ಹೋದರೆ


ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವ ಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.


ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು; ಇಂಥವರ ಸಹವಾಸವನ್ನೂ ಮಾಡದಿರು.


ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು