Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:1 - ಕನ್ನಡ ಸತ್ಯವೇದವು J.V. (BSI)

1 ದಾಸರಾಗಿ ಮತ್ತೊಬ್ಬರ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಎಲ್ಲಾ ಮಾನಕ್ಕೂ ಯೋಗ್ಯರೆಂದೆಣಿಸಲಿ; ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದೆ ಉಂಟಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾಸತ್ವ ನೊಗದ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಪೂರ್ಣ ಗೌರವಕ್ಕೂ ಯೋಗ್ಯರೆಂದೆಣಿಸಲಿ, ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದನೆ ಉಂಟಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಾಸ್ಯದಲ್ಲಿರುವವರು ತಮ್ಮ ಯಜಮಾನರನ್ನು ಎಲ್ಲಾ ವಿಧದಲ್ಲೂ ಗೌರವಿಸಬೇಕು. ಇಲ್ಲದಿದ್ದರೆ, ದೇವರ ಹೆಸರಿಗೂ ನಮ್ಮ ಬೋಧನೆಗೂ ಕಳಂಕವುಂಟಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಗುಲಾಮರು ತಮ್ಮ ಯಜಮಾನರಿಗೆ ಸಂಪೂರ್ಣ ಗೌರವ ಕೊಡಬೇಕು. ಆಗ ದೇವರ ಹೆಸರಾಗಲಿ ನಮ್ಮ ಉಪದೇಶವಾಗಲಿ ಟೀಕೆಗೆ ಗುರಿಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರ ನಾಮವೂ ನಮ್ಮ ಬೋಧನೆಯೂ ದೂಷಣೆಗೆ ಗುರಿಯಾಗದಂತೆ ದಾಸತ್ವದ ನೊಗ ಹೊತ್ತಿರುವವರು ತಮ್ಮ ಸ್ವಂತ ಯಜಮಾನರನ್ನು ಪೂರ್ಣ ಗೌರವಕ್ಕೆ ಯೋಗ್ಯರೆಂದೆಣಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆ ಕೊನ್ ಆಳಾ ಹೊವ್ನ್ ಹಾತ್, ತೆನಿ ಅಪ್ನಾಚ್ಯಾ ಸಾವ್ಕಾರಾಕ್ ಸಗ್ಳ್ಯಾ ರಿತಿನ್ ಮಾನ್ ದಿಂವ್ದಿತ್, ಅಶೆ, ದೆವಾಚ್ಯಾ ಅನಿ ಅಮ್ಚ್ಯಾ ಶಿಕಾಪಾಚ್ಯಾ ವಿಶಯಾತ್ ಕೊನ್‍ಬಿ ವಾಯ್ಟ್ ಬೊಲಿನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:1
35 ತಿಳಿವುಗಳ ಹೋಲಿಕೆ  

ಮನೆಯಲ್ಲೇ ಕೆಲಸಮಾಡುವವರೂ ಸುಶೀಲೆಯರೂ ನಿಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ಬುದ್ಧಿ ಕಲಿಸುವ ಹಾಗೆ ಬೋಧಿಸು.


ನಿಮ್ಮ ದೆಸೆಯಿಂದ ಅನ್ಯಜನರಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತದೆಂದು ಬರೆದದೆಯಲ್ಲಾ.


ಒಳ್ಳೇ ಮನಸ್ಸಾಕ್ಷಿಯುಳ್ಳವರಾಗಿರಿ; ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯನ್ನು ಕುರಿತು ಬೈಯುವವರು ನಿಮ್ಮನ್ನು ನಿಂದಿಸುವದಕ್ಕೆ ನಾಚಿಕೆಪಡುವರು.


ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.


ಕ್ರಿಸ್ತನು ನಮ್ಮನ್ನು ಸ್ವತಂತ್ರದಲ್ಲಿರಿಸಬೇಕೆಂದು ನಮಗೆ ಬಿಡುಗಡೆಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.


ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೊರಲಾರದ ನೊಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?


ಅವರು - ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡುವವನೂ ಯೆಹೂದ್ಯ ಜನರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇಕಳುಹಿಸಿಕೊಂಡು ನಿನ್ನಿಂದ ಬೋಧನೆಯನ್ನು ಕೇಳಬೇಕೆಂದು ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದನು ಎಂದು ಹೇಳಿದರು.


ಕೊರ್ನೇಲ್ಯನು ತನ್ನ ಸಂಗಡ ಮಾತಾಡಿದ ದೇವದೂತನು ಹೊರಟುಹೋದ ಮೇಲೆ ತನ್ನ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸಿಪಾಯಿಗಳಲ್ಲಿ ಒಬ್ಬ ದೇವಭಕ್ತನನ್ನೂ ಕರೆದು


ಆತನು ತನ್ನ ಶಿಷ್ಯರಿಗೆ - ತೊಡಕುಗಳು ಬಾರದೆ ಇರಲಾರವು; ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?


ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು. ಯಾಕಂದರೆ ನನ್ನ ನೊಗವು ಮೃದುವಾದದ್ದು; ನನ್ನ ಹೊರೆಯು ಹೌರವಾದದ್ದು ಅಂದನು.


ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಮಾನಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿತೋರಿಸುತ್ತಾನಷ್ಟೆ; ನಾನು ತಂದೆಯಾಗಿರಲು ನನಗೆ ಸಲ್ಲುವ ಮಾನವೆಲ್ಲಿ; ಧಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ ಎಂದು ಸೇನಾಧೀಶ್ವರ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು - ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ ಅನ್ನುತ್ತೀರಿ.


ಆದದರಿಂದ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಯಜಮಾನಿಯರಾಗಿರುವದು ನನಗೆ ಒಳ್ಳೇದಾಗಿ ತೋಚುತ್ತದೆ; ಹಾಗೆ ಮಾಡುವದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.


ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವದಕ್ಕೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ ಎಂದು ನಿಮಗೆ ಹೇಳುತ್ತೇನೆ.


ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವುಗಳಿಗೆ ನಿಶ್ಚಿತವಾಗುವದು; ಇದು ಕರ್ತನಾದ ಯೆಹೋವನ ನುಡಿ.


ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ ಓಹೋ, ಇವರು ಯೆಹೋವನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ ಎಂದೆನ್ನಿಸಿಕೊಂಡು ನನ್ನ ಪರಿಶುದ್ಧನಾಮಕ್ಕೆ ಅಪಕೀರ್ತಿಯನ್ನು ತರಲು


ನೋಡಿರಿ, ಕೇಡಿನ ಬಂಧಗಳನ್ನು ಬಿಚ್ಚುವದು, ನೊಗದ ಕಣ್ಣಿಗಳನ್ನು ಕಳಚುವದು, ಜಜ್ಜಿಹೋದವರನ್ನು ಬಿಡುಗಡೆಮಾಡುವದು, ನೊಗಗಳನ್ನೆಲ್ಲಾ ಮುರಿಯುವದು,


ಈಗಲೂ ಅನ್ಯರು ನನ್ನ ಜನರನ್ನು ಹಕ್ಕಿಲ್ಲದೆ ಒಯ್ದಿರಲು ನಾನು ಇಲ್ಲಿ ಸುಮ್ಮನಿರುವದು ಹೇಗೆ? ನನ್ನ ಪ್ರಜೆಯನ್ನು ಆಳುವವರು [ರೌದ್ರದಿಂದ] ಕಿರಚುತ್ತಾರೆ; ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.


ನಾನು ನನ್ನ ಜನರ ಮೇಲೆ ರೋಷಗೊಂಡು ಅವರನ್ನು ನಿನ್ನ ಕೈವಶ ಮಾಡಿ ನನ್ನ ಸ್ವಾಸ್ತ್ಯವನ್ನು ಹೊಲೆಗೆಡಿಸಿದೆನು; ನೀನು ಅವರನ್ನು ಹೇಗೂ ಕರುಣಿಸದೆ ಮುದುಕರ ಮೇಲೆಯೂ ಬಹುಭಾರವಾದ ನೊಗವನ್ನು ಹೊರಿಸಿದಿ.


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು - ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವಾಗಲಿ ಅನ್ನಿರಿ ಎಂದು ಹೇಳಿ - ಯೆಹೋವನೇ, ಸರ್ವಸ್ತುತಿಕೀರ್ತನೆಗಳಿಗೆ ವಿುಗಿಲಾಗಿರುವ ನಿನ್ನ ಮಹಾನಾಮಕ್ಕೆ ಕೊಂಡಾಟವಾಗಲಿ,


ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ - ಅಪ್ಪನವರೇ, ಪ್ರವಾದಿಯು ಒಂದು ಕಠಿಣವಾದ ಕೆಲಸವನ್ನು ಹೇಳಿದ್ದರೆ ಅದನ್ನು ಮಾಡುತ್ತಿದ್ದಿರಲ್ಲಾ; ಹಾಗಾದರೆ ಸ್ನಾನಮಾಡಿ ಶುದ್ಧನಾಗು ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು ಅಂದರು.


ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವದಕ್ಕೆ ಆಸ್ಪದ ಕೊಟ್ಟದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವದು


ಆಗ ನೀವು ಹಸಿವು ಬಾಯಾರಿಕೆಗಳುಳ್ಳವರಾಗಿ ಬಟ್ಟೆಯೂ ಏನೂ ಇಲ್ಲದೆ ಆ ಶತ್ರುಗಳಿಗೇ ಸೇವಕರಾಗಬೇಕಾಗುವದು. ಆತನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.


ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೀಟಾದ ದಾರಿಯಿಂದಲೇ ಕರಕೊಂಡು ಬಂದಿದ್ದಾನೆ ಅಂದನು.


ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಅನುಕೂಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ಉಪಕಾರಮಾಡಬೇಕೆಂದು ಬೇಡುತ್ತೇನೆ.


ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರೀ ಸೇವಕನಿಗೆ -


ಅದಕ್ಕೆ ಯೆಹೋವನ ದೂತನು - ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ತಗ್ಗಿ ನಡೆದುಕೋ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು