Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:10 - ಕನ್ನಡ ಸತ್ಯವೇದವು J.V. (BSI)

10 ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಹಣದಾಸೆಯು ಎಲ್ಲಾ ವಿಧವಾದ ಕೆಟ್ಟತನಕ್ಕೆ ಮೂಲವಾಗುತ್ತದೆ. ಕೆಲವು ಜನರು ಹೆಚ್ಚುಹೆಚ್ಚು ಹಣವನ್ನು ಗಳಿಸಿಕೊಳ್ಳುವುದಕ್ಕಾಗಿ ಸತ್ಯೋಪದೇಶವನ್ನು ತೊರೆದುಬಿಟ್ಟಿದ್ದಾರೆ. ಆದರೆ ಅವರು ತಮ್ಮನ್ನು ತಾವೇ ಹೆಚ್ಚು ವೇದನೆಗೆ ಗುರಿಪಡಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಬೇರಾಗಿದೆ. ಕೆಲವರು ಹಣಕ್ಕಾಗಿ ಆತುರಪಟ್ಟು ನಂಬಿಕೆಯಿಂದ ದೂರಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಪೈಸ್ಯಾಂಚೊ ಪ್ರೆಮ್ ಸಗ್ಳ್ಯಾ ಬುರ್ಶ್ಯಾಪಾನಾಚೆ ಮುಳ್. ಹೆ ಜೊಡುನ್ ಘೆತಲ್ಯಾ ಆಶೆಚ್ಯಾ ಕಾರನಾಚ್ಯಾ ವೈನಾ ವಿಶ್ವಾಸಾಚ್ಯಾ ವಾಟೆ ವೈನಾ ಧುರ್ ಗೆಲ್ಯಾತ್ ಅನಿ ಲೈ ಕಸ್ಟಾನಿ ಅಪ್ನಾಚಿ ಮನಾ ಫೊಡುನ್ ಘೆಟ್ಲ್ಯಾನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:10
49 ತಿಳಿವುಗಳ ಹೋಲಿಕೆ  

ಸೂರೆಮಾಡುವವರೆಲ್ಲರ ದಾರಿಯೂ ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವದು.


ಐಶ್ವರ್ಯವಂತರಾಗಬೇಕೆಂದು ಮನಸ್ಸು ಮಾಡುವವರು ದುಷ್ಪ್ರೇರಣೆಯೆಂಬ ಉರ್ಲಿನಲ್ಲಿ ಸಿಕ್ಕಿಕೊಂಡು ಬುದ್ಧಿವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರನಾಶನಗಳಲ್ಲಿ ಮುಳುಗಿಸುತ್ತವೆ.


ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವದು.


ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.


ಆದದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವದು.


ಅವರ ಗತಿಯನ್ನು ಏನು ಹೇಳಲಿ; ಇವರು ಕಾಯಿನನ ಮಾರ್ಗವನ್ನು ಹಿಡಿದವರೂ ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಣುಗಿದವರೂ ಕೋರಹನಂತೆ ಎದುರುಮಾತುಗಳನ್ನಾಡಿ ನಾಶವಾಗಿಹೋಗತಕ್ಕವರೂ ಆಗಿದ್ದಾರೆ.


ಮತ್ತು ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾವನೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.


ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು; ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ.


ಅವನು ಕುಡಿದು ಜಗಳವಾಡುವವನೂ ಹೊಡೆದಾಡುವವನೂ ಆಗಿರಬಾರದು; ಸಾತ್ವಿಕನೂ ಕುತರ್ಕ ಮಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.


ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು [ದೇವಾಲಯದ] ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೇದು! ನಾನು ನಿಮಗೆ ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ನೀವು ನ್ಯಾಯವನ್ನು ಬಿಟ್ಟು ತೀರ್ಮಾನಮಾಡಬಾರದು; ಪಕ್ಷಪಾತಮಾಡಬಾರದು; ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ನನ್ನ ಸಹೋದರರೇ, ನಿಮ್ಮಲ್ಲಿ ಒಬ್ಬನು ಸತ್ಯಮಾರ್ಗವನ್ನು ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ -


ಕೆಲವರು ಆ ಸುಳ್ಳಾದ ಜ್ಞಾನವನ್ನು ಅವಲಂಬಿಸಿ ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾದರು. ಕೃಪೆಯು ನಿಮ್ಮೊಂದಿಗೆ ಇರಲಿ.


ನಿನ್ನವರು ರಕ್ತಸುರಿಸುವದಕ್ಕೆ ಲಂಚತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ ದೋಚಿಕೊಂಡು ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಕರ್ತನಾದ ಯೆಹೋವನ ನುಡಿ.


ಎಲ್ಲಾ ಕಡೆ ಸೂಳೆಯರಿಗೆ ಹಣಕೊಡುವದುಂಟು; ನೀನಾದರೂ ನಿನ್ನ ಎಲ್ಲಾ ವಿುಂಡರಿಗೆ ನೀನೇ ಕೊಡುತ್ತೀ; ಅವರು ಎಲ್ಲಾ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಇನಾಮು ಕೊಡುತ್ತಿ.


ನೀವು ಜವೆಗೋದಿಯ ಹಿಡಿಗಳನ್ನೂ ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವದರಿಂದ ಸಾಯದಿರತಕ್ಕವರನ್ನು ಸಾಯಿಸಿ ಸಾಯತಕ್ಕವರನ್ನು ಉಳಿಸಿ ನನ್ನ ಜನರ ನಡುವೆ ನನ್ನ ಘನತೆಗೆ ಕುಂದು ತಂದಿದ್ದೀರಿ.


ನಿನ್ನ ಅಧಿಕಾರಿಗಳು ದ್ರೋಹಿಗಳೂ ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಆಶಿಸಿ ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸರು; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ಸೂಳೆತನದಿಂದಾಗಲಿ ಗುದಮೈಥುನದಿಂದಾಗಲಿ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಮಂದಿರದೊಳಗೆ ತರಲೇಬಾರದು; ಈ ಎರಡೂ ಆತನಿಗೆ ಅಸಹ್ಯ.


ಲಾಬಾನನಿಗೆ - ಇದೇನು ನೀನು ನನಗೆ ಮಾಡಿದ್ದು? ರಾಹೇಲಳಿಗೋಸ್ಕರ ನಿನಗೆ ಸೇವೆಮಾಡಿದೆನಲ್ಲಾ; ಯಾಕೆ ನನಗೆ ಮೋಸಮಾಡಿದಿ ಎಂದು ಕೇಳಿದ್ದಕ್ಕೆ ಲಾಬಾನನು - ಹಿರೀಮಗಳಿಗಿಂತ ಮೊದಲು ಕಿರೀ ಮಗಳನ್ನು ಮದುವೆಮಾಡಿಸಿಕೊಡುವದು ನಮ್ಮ ದೇಶದ ಪದ್ಧತಿಯಲ್ಲ.


ಲವಂಗಚೆಕ್ಕೆ, ರಕ್ತಬೋಳ, ಧೂಪ, ಸುಗಂಧತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮ, ಮಾನುಷಪ್ರಾಣ ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಹೇಳಿಕೊಳ್ಳುತ್ತಾ ದುಃಖಿಸುವರು.


ನಾಮಾನನ ಕುಷ್ಠವು ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವದು ಅಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಅವನು ಹಿಮದಂತೆ ಬಿಳುಪಾಗಿ ಅವನ ಸನ್ನಿಧಿಯಿಂದ ಹೊರಟುಹೋದನು.


ನಾನು ನಿನ್ನ ಸಂಗಮ ಮಾಡುವದಕ್ಕೆ ಒಪ್ಪುತ್ತೀಯಾ ಅನ್ನಲು ಆಕೆ - ನನ್ನಲ್ಲಿ ಬರಬೇಕಾದರೆ ನೀನು ಏನು ಕೊಡುತ್ತೀ ಎಂದು ಕೇಳಿದಳು.


ಲಾಬಾನನು ಅವನಿಗೆ - ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದೀ ಎಂದು ಹೇಳಿದನು. ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು.


ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಸೊಕ್ಕಿರಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.


ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.


ಅವನು ಜ್ಞಾನಿಯೋ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವದರಲ್ಲಿ ಜ್ಞಾನವನ್ನೂ ಪ್ರಯಾಸವನ್ನೂ ವ್ರಯಮಾಡಿದ್ದೇನೋ ಅದರ ಮೇಲೆ ದೊರೆತನ ಮಾಡುವನು. ಇದೂ ವ್ಯರ್ಥ.


ಭೂಲೋಕದಲ್ಲಿ ಗಂಟುಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅಂತೂ ಅದು ನುಸಿಹಿಡಿದು ಕಿಲುಬುಹತ್ತಿ ಕೆಟ್ಟುಹೋಗುವದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.


ಒಬ್ಬನು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ ಐಶ್ವರ್ಯದಿಂದುಂಟಾಗುವ ಮೋಸವೂ ಆ ವಾಕ್ಯವನ್ನು ಅಡಗಿಸಿಬಿಡುವದರಿಂದ, ಫಲವನ್ನು ಕೊಡದೆ ಇರುತ್ತಾನೆ; ಇವನೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವನು.


ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಸಾಯಿಸಿರಿ. ಜಾರತ್ವ ಬಂಡುತನ ಕಾಮಾಭಿಲಾಷೆ ದುರಾಶೆ ವಿಗ್ರಹಾರಾಧನೆಗೆ ಸಮವಾಗಿರುವ ಲೋಭ ಇವುಗಳನ್ನು ವಿಸರ್ಜಿಸಿಬಿಡಿರಿ;


ಮನುಷ್ಯರು ಸ್ವಾರ್ಥಚಿಂತಕರೂ ಹಣದಾಸೆಯವರೂ ಬಡಾಯಿಕೊಚ್ಚುವವರೂ ಅಹಂಕಾರಿಗಳೂ ದೂಷಕರೂ ತಂದೆತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ


ಅವರು ಹತವಾದನಂತರ ಯಾಕೋಬನ ಮಕ್ಕಳು ಬಂದು - ಇವರು ನಮ್ಮ ತಂಗಿಯನ್ನು ಅವಮಾನಪಡಿಸಿದರಲ್ಲಾ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.


ದಾಸರು ಗತ್ ಊರಿನಲ್ಲಿರುವದು ಶಿಮ್ಮಿಗೆ ಗೊತ್ತಾದಾಗ ಅವನು ಕತ್ತೆಗೆ ತಡಿಹಾಕಿಸಿ ತನ್ನ ದಾಸರನ್ನು ಹುಡುಕುವದಕ್ಕೋಸ್ಕರ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಹೊರಟುಹೋಗಿ ಅವರನ್ನು ಗತ್ ಊರಿನಿಂದ ಹಿಡಿದುಕೊಂಡು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು