Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:17 - ಕನ್ನಡ ಸತ್ಯವೇದವು J.V. (BSI)

17 ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಈ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಜೆ ಕೊನ್ ಹ್ಯಾ ಜಗಾಚ್ಯಾ ಸಂಗ್ತಿಯಾತ್ನಿ ಸಾವ್ಕಾರ್ ಹಾತ್, ತೆಂಕಾ ಹಂಕಾರಾನ್ ಭರುನಕಾಶಿ, ಸಾವ್ಕಾರ್ಕಿ ಸರ್ಕ್ಯಾ ಉಪ್‍ಯೊಗ್ ನಸಲ್ಲ್ಯಾ ಸಂಗ್ತಿಯಾಂಚ್ಯಾ ವರ್‍ತಿ ತುಮ್ಚೊ ಬರೊಸೊ ಥವ್‍ನಕಾಸಿ, ಅಮ್ಕಾ ಅಮ್ಚ್ಯಾಸಾಟ್ನಿ ಮನುನ್ ಸಗ್ಳೆ ದಿತಲ್ಯಾ ದೆವಾ ವರ್‍ತಿ ಬರೊಸೊ ಥವಾ ಮನುನ್ ಖಡಕ್ ಸಾಂಗ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:17
62 ತಿಳಿವುಗಳ ಹೋಲಿಕೆ  

ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ನಿಮಗೆ ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲಗಳನ್ನೂ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ ಉಪಕಾರ ಮಾಡುತ್ತಾ ಬಂದವನು ಆತನೇ ಎಂದು ಹೇಳಿದರು.


ಧನವನ್ನೇ ನಂಬಿದವನು ಬಿದ್ದು ಹೋಗುವನು; ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.


ಇದಕ್ಕಾಗಿ ನಾವು ಕಷ್ಟಪಡುತ್ತೇವೆ, ಹೋರಾಡುತ್ತೇವೆ, ಯಾಕಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡಿದ್ದೇವೆ.


ಆಗ ಯೇಸು ತನ್ನ ಶಿಷ್ಯರನ್ನು ನೋಡಿ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಐಶ್ವರ್ಯವಂತನು ಪರಲೋಕರಾಜ್ಯದಲ್ಲಿ ಸೇರುವದು ಕಷ್ಟ.


ಸಂಪತ್ತು ಶಾಶ್ವತವಾಗಿರುವದಿಲ್ಲವಷ್ಟೆ; ಕಿರೀಟವು ತಲತಲಾಂತರಗಳವರೆಗೆ ನಿಂತೀತೋ?


ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ವಿಸರ್ಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು ಅಂದರೆ ಮಹಾದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂದು ಅದು ನಮಗೆ ಬೋಧಿಸುತ್ತದೆ.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಸಕಲಜ್ಞಾನದಿಂದ ಕೂಡಿದವರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿಕೊಳ್ಳಿರಿ, ಬುದ್ಧಿಹೇಳಿಕೊಳ್ಳಿರಿ; ಕರ್ತನ ಕೃಪೆಯನ್ನು ನೆನಸಿಕೊಳ್ಳುವವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಗಾನಮಾಡಿರಿ.


ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಸುಂಕದ ಗುತ್ತಿಗೆದಾರನು ಮತ್ತು ಐಶ್ವರ್ಯವಂತನು.


ಹಾಗಾಗದೆ ಹೊಟ್ಟೆತುಂಬಿದವನಾದರೆ ಯೆಹೋವನು ಯಾರೋ ಎಂದು ನಿನ್ನನ್ನು ತಿರಸ್ಕರಿಸೇನು; ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೇನು.


ಈ ಭಾಗ್ಯವು ನಮ್ಮ ಸಾಮರ್ಥ್ಯ ಸಾಹಸಗಳಿಂದಲೇ ನಮಗುಂಟಾಯಿತು ಅಂದುಕೊಂಡೀರಿ.


ನೀನು ಹೇಳುವದು ನಿಜ; ಅವರು ನಂಬದೆಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ.


ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.


ನೀವು ಎಂಥಾ ದುರ್ವಂಶ! ಯೆಹೋವನ ಮಾತನ್ನು ನೋಡಿರಿ, ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ ಗಾಢಾಂಧಕಾರದ ಪ್ರದೇಶವಾಗಿಯೂ ಪರಿಣವಿುಸಿದ್ದೆನೋ? ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು ಎಂದು ನನ್ನ ಜನರು ಹೇಳುವದು ಹೇಗೆ.


ನಿನ್ನ ದೃಷ್ಟಿಯು ಧನದ ಮೇಲೆ ಎರಗುತ್ತದೋ? ಧನವು ಅಷ್ಟರೊಳಗೆ ಮಾಯವಾಗುವದು; ಆಕಾಶದ ಕಡೆಗೆ ಹಾರುವ ಹದ್ದಿನಂತೆ ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.


ನೀನು ಕೊಡಲು ಅವು ತೆಗೆದುಕೊಳ್ಳುತ್ತವೆ; ನೀನು ಕೈತೆರೆಯಲು ಅವು ಒಳ್ಳೇದನ್ನು ಹೊಂದಿ ತೃಪ್ತಿಗೊಳ್ಳುತ್ತವೆ.


ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಸೊಕ್ಕಿರಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.


ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ ಎಂದು ಹೇಳುವರು.


ಆದರೆ ಅವನು ಬಲಿಷ್ಠನಾದ ಮೇಲೆ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಕ್ಕೆ ಹೋದನು.


ಅನಾದಿಯಾದ ಪರ್ವತಗಳ ಉತ್ಪನ್ನ, ಶಾಶ್ವತವಾದ ಬೆಟ್ಟಗಳಿಂದುಂಟಾಗುವ ಮೇಲು,


ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳ್ಳಿಬಂಗಾರವೂ ಇದ್ದವು.


ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು; ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ.


ಸರ್ವಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ ಪೊಂತ್ಯ ಪಿಲಾತನ ಕಾಲದಲ್ಲಿ ಶ್ರೇಷ್ಠಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ -


ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ - ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ


ನಾವು ನಿಮ್ಮಲ್ಲಿಗೆ ಬಂದಾಗ ನೀವು ಎಂಥ ಮನಸ್ಸಿನಿಂದ ನಮ್ಮ ಬೋಧನೆಯನ್ನು ಕೇಳಿದಿರೋ ಅದನ್ನು ಕುರಿತು ಅಲ್ಲಿಯ ಜನರು ತಾವೇ ಹೇಳುತ್ತಾರೆ. ಅದು ಮಾತ್ರವಲ್ಲದೆ ನೀವು ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂತಲೂ


ಇವುಗಳನ್ನು ಬಿಟ್ಟು ದೇವರಿಗೆ ಉಪಕಾರಸ್ತುತಿ ಮಾಡುವದು ಉತ್ತಮ. ಜಾರರು ದುರಾಚಾರಿಗಳು ವಿಗ್ರಹಾರಾಧಕರಂತಿರುವ ಲೋಭಿಗಳು ಇವರಲ್ಲಿ ಒಬ್ಬರಿಗಾದರೂ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೇ ಇಲ್ಲವೆಂದು ನೀವು ಚೆನ್ನಾಗಿ ಬಲ್ಲಿರಲ್ಲವೇ.


ತಾನೇ ಎಲ್ಲರಿಗೂ ಜೀವಶ್ವಾಸ ಮುಂತಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.


ಅಲ್ಲಿ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆದದ್ದನ್ನೂ ವಿವರವಾಗಿ ಹೇಳಿದರು.


ಶಿಷ್ಯರು ಆತನ ಮಾತುಗಳನ್ನು ಕೇಳಿ ಬೆರಗಾದರು. ಯೇಸು ತಿರಿಗಿ ಅವರಿಗೆ - ಮಕ್ಕಳಿರಾ, ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.


ಸಂಜೆಯಾದಾಗ ಅರಿಮಥಾಯದ ಯೋಸೇಫನೆಂಬ ಒಬ್ಬ ಧನವಂತನು ಬಂದನು; ಇವನು ಸಹ ಯೇಸುವಿನ ಶಿಷ್ಯನಾಗಿದ್ದನು.


ಇವೆಲ್ಲವುಗಳಿಗಾಗಿ ಅಜ್ಞಾನಿಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಬೇಕಾಗಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದದೆಯಷ್ಟೆ.


ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು.


ಅರಾವಿುನ ಕುಮಾರ್ತೆಯರು, ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲಿಯೂ ಹೀನೈಸುತ್ತಿರುವ ಫಿಲಿಷ್ಟಿಯದ ಕುಮಾರ್ತೆಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವದಕ್ಕೆ ಮುಂಚೆ,


ಜನರೇ, ಯಾವಾಗಲೂ ಆತನನ್ನೇ ನಂಬಿ ನಿಮ್ಮ ಹೃದಯವನ್ನು ಆತನ ಮುಂದೆ ಬಿಚ್ಚಿರಿ; ದೇವರು ನಮ್ಮ ಆಶ್ರಯವು. ಸೆಲಾ.


ನಾವು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಯನ್ನು ಪಡೆದು ಅದಕ್ಕೆ ಬಾಧ್ಯರಾಗುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಸಮೃದ್ಧಿಯಾಗಿ ಸುರಿಸಿದನು. ಇದು ನಂಬತಕ್ಕ ಮಾತಾಗಿದೆ;


ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.


ಆದರೆ ಒಂದು ವೇಳೆ ನಾನು ತಡಮಾಡಿದರೂ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.


ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬದನ್ನೂ ಕಂಡುಕೊಂಡೆನು.


ನನ್ನ ಮೇಲೆ ಯಾರು ತಾನೆ ಬಿದ್ದಾರು ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸವಿಟ್ಟಿರುವ ಭ್ರಷ್ಟದೇಶವೇ, ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು ಏಕೆ ಕೊಚ್ಚಿಕೊಳ್ಳುತ್ತೀ?


ಯಾವನಾದರೂ ಮನುಷ್ಯಕುಮಾರನಿಗೆ ವಿರೋಧವಾಗಿ ಮಾತಾಡಿದರೆ ಅದು ಅವನಿಗೆ ಕ್ಷವಿುಸಲ್ಪಡುವದು; ಪವಿತ್ರಾತ್ಮನಿಗೆ ವಿರೋಧವಾಗಿ ಮಾತಾಡಿದರೆ ಅವನಿಗೆ ಇಹದಲ್ಲಾಗಲಿ ಪರದಲ್ಲಾಗಲಿ ಕ್ಷವಿುಸಲ್ಪಡುವದಿಲ್ಲ.


ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ ಎಂದು ಅವರಿಗೆ ಹೇಳಿದನು.


ಐಶ್ವರ್ಯವಂತರಾಗಬೇಕೆಂದು ಮನಸ್ಸು ಮಾಡುವವರು ದುಷ್ಪ್ರೇರಣೆಯೆಂಬ ಉರ್ಲಿನಲ್ಲಿ ಸಿಕ್ಕಿಕೊಂಡು ಬುದ್ಧಿವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರನಾಶನಗಳಲ್ಲಿ ಮುಳುಗಿಸುತ್ತವೆ.


ಮತ್ತು ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವನು.


ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು