1 ತಿಮೊಥೆಯನಿಗೆ 6:9 - ಕನ್ನಡ ಸತ್ಯವೇದವು J.V. (BSI)9 ಐಶ್ವರ್ಯವಂತರಾಗಬೇಕೆಂದು ಮನಸ್ಸು ಮಾಡುವವರು ದುಷ್ಪ್ರೇರಣೆಯೆಂಬ ಉರ್ಲಿನಲ್ಲಿ ಸಿಕ್ಕಿಕೊಂಡು ಬುದ್ಧಿವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರನಾಶನಗಳಲ್ಲಿ ಮುಳುಗಿಸುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಐಶ್ವರ್ಯವಂತರಾಗಬೇಕೆಂದು ಆಶಿಸುವವರು ಅನೇಕ ಪ್ರಲೋಭನೆಗಳಿಗೆ ಒಳಗಾಗುತ್ತಾರೆ. ನಿರರ್ಥಕವೂ ಹಾನಿಕರವೂ ಆದ ಆಶಾಪಾಶಗಳಲ್ಲಿ ಸಿಕ್ಕಿಬೀಳುತ್ತಾರೆ. ಇಂಥ ದುರಾಶೆಗಳು ಮನುಷ್ಯರನ್ನು ಕೇಡಿಗೂ ವಿನಾಶಕ್ಕೂ ಒಯ್ಯುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಶ್ರೀಮಂತರಾಗಬೇಕೆನ್ನುವವರು ತಮ್ಮನ್ನು ತಾವೇ ಶೋಧನೆಗೆ ಗುರಿಪಡಿಸಿಕೊಳ್ಳುವರು. ಅವರು ಉರ್ಲಿನಲ್ಲಿ ಸಿಕ್ಕಿಹಾಕಿಕೊಂಡವರಾಗಿದ್ದಾರೆ. ಅವರು ಹಾನಿಕರವಾದ ಅನೇಕ ಮೂರ್ಖ ಆಸೆಗಳಲ್ಲಿ ಸಿಕ್ಕಿಬೀಳುವರು. ಅವು ಜನರನ್ನು ಹಾಳುಮಾಡಿ, ನಾಶಗೊಳಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ಐಶ್ವರ್ಯವಂತರಾಗಬೇಕೆಂದು ಬಯಸುವವರು ಶೋಧನೆಯಲ್ಲಿಯೂ ಉರುಲಿನಲ್ಲಿಯೂ ಬಿದ್ದು ಅನೇಕ ಬುದ್ಧಿಹೀನವಾದ ಹಾಗೂ ಹಾನಿಕರವಾದ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ವಿನಾಶನಗಳಲ್ಲಿ ಮುಳುಗಿಸುತ್ತವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಖರೆ ಜೆ ಕೊನ್ ಅಪ್ನಿ ಸಾವ್ಕಾರ್ ಹೊವ್ಚೆ ಮನುನ್ ಚಿಂತಾ, ತೊ ಪರಿಕ್ಷಾತ್ ಪಡ್ತಾ, ಹಾಳ್ ಕರ್ತಲೆ ಆಶಾತ್ನಿ ಸಿರ್ಕುನ್ ಪಡ್ತಾತ್, ತೆ ತೆಂಕಾ ನಾಸ್ ಕರ್ತಲ್ಯಾತ್ ಅನಿ ಹಾಳ್ ಕರ್ತಲ್ಯಾತ್ ಡಕ್ಲುನ್ ಟಾಕ್ತಾ. ಅಧ್ಯಾಯವನ್ನು ನೋಡಿ |
ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು; ಅಂದರೆ ಅದು ಅಧರ್ಮಿಗಳು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ದೇವಭಕ್ತಿಯಿಲ್ಲದವರು, ಪ್ರಾಪಂಚಿಕರು, ತಂದೆತಾಯಿಗಳನ್ನು ಹೊಡೆಯುವವರು, ನರಹತ್ಯಮಾಡುವವರು, ಜಾರರು, ಪುರುಷಗಾವಿುಗಳು, ನರಚೋರರು, ಸುಳ್ಳುಗಾರರು, ಅಬದ್ಧಪ್ರಮಾಣಿಕರು, ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆಯೇ ಹೊರತು ನೀತಿವಂತರಿಗೆ ನೇಮಕವಾಗಿಲ್ಲವೆಂದು ತಿಳಿದು ಉಪಯೋಗಿಸಬೇಕು.