Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 1:8 - ಕನ್ನಡ ಸತ್ಯವೇದವು J.V. (BSI)

8 ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪ್ರಭುವಿನ ಶುಭಸಂದೇಶ ನಿಮ್ಮಿಂದಲೇ ಘೋಷಿತವಾಯಿತು. ದೇವರಲ್ಲಿ ನೀವಿಟ್ಟಿರುವ ವಿಶ್ವಾಸ ಮಕೆದೋನಿಯ ಮತ್ತು ಅಖಾಯದಲ್ಲಿ ಮಾತ್ರವಲ್ಲದೆ ಎಲ್ಲೆಡೆಯಲ್ಲೂ ಪ್ರಸರಿಸಿತು. ಈ ನಿಮ್ಮ ವಿಶ್ವಾಸವನ್ನು ಕುರಿತು ನಾವು ಹೇಳಬೇಕಾದುದು ಏನೂ ಇಲ್ಲ; ಅಲ್ಲಿಯ ಜನರೇ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರಭುವಿನ ಉಪದೇಶವು ಮಕೆದೋನಿಯ ಮತ್ತು ಅಖಾಯದಲ್ಲಿ ನಿಮ್ಮಿಂದ ಪ್ರಚಾರವಾಯಿತು. ಇದಲ್ಲದೆ ದೇವರ ಮೇಲಿನ ನಿಮ್ಮ ನಂಬಿಕೆಯು ಎಲ್ಲಾ ಕಡೆಗಳಲ್ಲಿಯೂ ತಿಳಿದುಬಂದಿತು. ಆದುದರಿಂದ ನಿಮ್ಮ ನಂಬಿಕೆಯ ಬಗ್ಗೆ ಏನೂ ಹೇಳಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯ ಹಾಗೂ ಅಖಾಯದಲ್ಲಿ ಘೋಷಿತವಾದದ್ದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಹರಡಿತು. ಆದ್ದರಿಂದ ಇದನ್ನು ಕುರಿತು ನಾವು ಹೇಳಬೇಕಾದ ಅವಶ್ಯ ಏನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಧನಿಯಾಚ್ಯಾ ವಿಶಯಾತ್ಲಿ ಬರಿ ಖಬರ್ ತುಮ್ಚ್ಯಾ ವೈನಾ ಸಗ್ಳ್ಯಾ ಮೆಸಿದೊನಿಯಾತ್ ಅನಿ ಅಖಾಯಿಯಾತ್ ಪರ್ಗಟ್ ಹೊಲ್ಲೆ ತವ್ಡೆಚ್ ನ್ಹಯ್, ದೆವಾ ವರ್‍ತಿ ತುಮಿ ಥವಲ್ಲ್ಯಾ ವಿಶ್ವಾಸಾಚಿ ಖಬರ್ ಸೈತ್ ಸಗ್ಳ್ಯಾಕ್ಡೆ ಜಾವ್ನ್ ಪಾವ್ಲಾ, ಹೆಚ್ಯಾ ವಿಶಯಾತ್ ಅಮಿ ಅನಿ ಕಾಯ್ ಜಾಸ್ತಿಚೆ ಸಾಂಗುಚೆ ಮನುನ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 1:8
20 ತಿಳಿವುಗಳ ಹೋಲಿಕೆ  

ಮೊದಲನೇದು, ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.


ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಿಹೋಗುವದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ ಕುಲ ಪ್ರಜೆಗಳವರಿಗೂ ಸಕಲ ಭಾಷೆಗಳನ್ನಾಡುವವರಿಗೂ ಸಾರಿಹೇಳುವದಕ್ಕೆ ನಿತ್ಯವಾದ ಶುಭವರ್ತಮಾನವು ಅವನಲ್ಲಿತ್ತು.


ನಾವು ಸಹ ಅವನ ವಿಷಯದಲ್ಲಿ ಸಾಕ್ಷಿ ಹೇಳುವವರಾಗಿದ್ದೇವೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲೆ.


ಹೀಗಿರುವದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಸಂಕಟಗಳಲ್ಲಿಯೂ ತೋರಿ ಬಂದ ನಿಮ್ಮ ತಾಳ್ಮೆ ನಂಬಿಕೆಗಳನ್ನು ನೆನಸಿ ನಿಮ್ಮ ವಿಷಯವಾಗಿ ಹೆಚ್ಚಳಪಟ್ಟು ದೇವರ ಸಭೆಗಳೊಳಗೆ ನಾವೇ ಮಾತಾಡುತ್ತೇವೆ.


ಪರ್ವತಗಳ ಮೇಲೆ ತ್ವರೆಪಡುತ್ತಾ ಶುಭಸಮಾಚಾರವನ್ನು ತಂದು ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಒಳ್ಳೆಯ ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು ರಕ್ಷಣೆಯನ್ನು ಪ್ರಕಟಿಸುತ್ತಾ - ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.


ಕಡೇ ಮಾತೇನಂದರೆ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಪ್ರಖ್ಯಾತಿ ಹೊಂದುವ ಹಾಗೆಯೂ


ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ.


ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದರಿಂದ ಇದನ್ನು ಬರೆದಿದ್ದೇನೆ; ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.


ಹೊರಟುಬಂದ ಬಹು ಜನಾಂಗದವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ, ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ಯೆಹೋವನು ಐಗುಪ್ತ್ಯರ ಕೈಯಿಂದ ಇಸ್ರಾಯೇಲ್ಯರನ್ನು ಬಿಡಿಸಿ ಅವರಿಗೆ ಇಷ್ಟೆಲ್ಲಾ ಉಪಕಾರವನ್ನು ಮಾಡಿದ್ದಕ್ಕಾಗಿ ಇತ್ರೋವನು ಸಂತೋಷಿಸಿ -


ಇಂಥ ಭರವಸವು ಕ್ರಿಸ್ತನ ಮೂಲಕವೇ ದೇವರ ಮುಂದೆ ನಮಗುಂಟು.


ಏನು, ದೇವರ ವಾಕ್ಯವು ನಿವ್ಮಿುಂದಲೇ ಹೊರಟಿತೋ? ನಿಮಗೆ ಮಾತ್ರವೇ ಬಂತೋ?


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪ ನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


ಗಲ್ಲಿಯೋನನು ಅಖಾಯದ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಸ್ಥಾನದ ಮುಂದೆ ಹಿಡಿತಂದು -


ಯಾಕಂದರೆ ಯೆರೂಸಲೇವಿುನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬದಾಗಿ ಮಕೆದೋನ್ಯ ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.


ಕ್ರಿಸ್ತನ ಅನ್ಯೋನ್ಯತೆಯಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರವು.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಸಕಲಜ್ಞಾನದಿಂದ ಕೂಡಿದವರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿಕೊಳ್ಳಿರಿ, ಬುದ್ಧಿಹೇಳಿಕೊಳ್ಳಿರಿ; ಕರ್ತನ ಕೃಪೆಯನ್ನು ನೆನಸಿಕೊಳ್ಳುವವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಗಾನಮಾಡಿರಿ.


ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ ಭಕ್ತಿಪೂರ್ವಕವಾಗಿಯೇ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.


ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು