Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:14 - ಕನ್ನಡ ಸತ್ಯವೇದವು J.V. (BSI)

14 ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾಗಿದ್ದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಹೋದರರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳನ್ನು ಅನುಸರಿಸಿದಿರಿ. ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಯೆಹೂದ್ಯರಿಂದ ಅನುಭವಿಸಿದಂಥ ಹಿಂಸೆಯನ್ನು, ನೀವೂ ಸ್ವಜನರಿಂದ ಅನುಭವಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸಹೋದರ ಸಹೋದರಿಯರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳಂತಿದ್ದೀರಿ. ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಇತರ ಯೆಹೂದ್ಯರಿಂದ ಹಿಂಸಿಸಲ್ಪಟ್ಟರು. ಅದೇ ರೀತಿಯಲ್ಲಿ ನೀವೂ ನಿಮ್ಮ ದೇಶದ ಇತರ ಜನರಿಂದ ಹಿಂಸಿಸಲ್ಪಟ್ಟವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪ್ರಿಯರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನೇ ನೀವೂ ಸಹ ನಿಮ್ಮ ಸ್ವದೇಶಿಯರಿಂದ ಅನುಭವಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮ್ಚ್ಯಾ ಭಾವಾನು ಅನಿ ಭೆನಿಯಾನು, ಕಶೆ ಜುದೆಯಾತ್ಲ್ಯಾ ಕ್ರಿಸ್ತಾ ಜೆಜು ವರ್ತಿ ವಿಶ್ವಾಸ್ ಕರಲ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಜುದೆವಾನಿ ತರಾಸ್ ದಿಲ್ಯಾನಿ ಅನಿ ತೆನಿ ಕಸ್ಟ್ ಸೊಸ್ಲ್ಯಾನಿ, ತಸೆ ತುಮಿಬಿ ತುಮ್ಚ್ಯಾಚ್ ಲೊಕಾನಿಕ್ನಾ ತರಾಸ್ ಸೊಸ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:14
26 ತಿಳಿವುಗಳ ಹೋಲಿಕೆ  

ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆ ಆಯಿತು, ನಿಮ್ಮ ಅನುಭವಕ್ಕೂ ಬಂತು.


ಹೀಗಿರುವದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಸಂಕಟಗಳಲ್ಲಿಯೂ ತೋರಿ ಬಂದ ನಿಮ್ಮ ತಾಳ್ಮೆ ನಂಬಿಕೆಗಳನ್ನು ನೆನಸಿ ನಿಮ್ಮ ವಿಷಯವಾಗಿ ಹೆಚ್ಚಳಪಟ್ಟು ದೇವರ ಸಭೆಗಳೊಳಗೆ ನಾವೇ ಮಾತಾಡುತ್ತೇವೆ.


ಆದರೆ ಕ್ರಿಸ್ತನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಗುರುತಿರಲಿಲ್ಲ.


ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನಾದ ಯೇಸುವನ್ನೂ ಅನುಸರಿಸುವವರಾದಿರಿ.


ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ -


ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ಆದರೂ ಕರ್ತನು ಪ್ರತಿಯೊಬ್ಬನಿಗೆ ಯಾವ ಯಾವ ಸ್ಥಿತಿಯನ್ನು ನೇವಿುಸಿದ್ದಾನೋ, ಅಂದರೆ ದೇವರು ಕರೆಯುವಾಗ ಪ್ರತಿಯೊಬ್ಬನು ಯಾವ ಯಾವ ಸ್ಥಿತಿಯಲ್ಲಿ ಇದ್ದಾನೋ ಆಯಾ ಸ್ಥಿತಿಗೆ ಸರಿಯಾಗಿ ನಡೆದುಕೊಳ್ಳಲಿ. ಹೀಗೆ ಎಲ್ಲಾ ಸಭೆಗಳಲ್ಲಿಯೂ ಆಜ್ಞಾಪಿಸುತ್ತೇನೆ.


ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಿಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿ ಕಲಕಿದರು.


ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗೇ ಹೊರತು ಮತ್ತಾರಿಗೂ ವಾಕ್ಯವನ್ನು ಹೇಳದೆ ಫೊಯಿನಿಕೆ ಕುಪ್ರ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.


ಹೀಗಿರಲಾಗಿ ಯೂದಾಯ ಗಲಿಲಾಯ ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಹೆಚ್ಚುತ್ತಾ ಬಂತು.


ಅದಕ್ಕೆ ಅನನೀಯನು - ಕರ್ತನೇ, ಆ ಮನುಷ್ಯನು ಯೆರೂಸಲೇವಿುನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ;


ಸೌಲನು ಇನ್ನು ಕರ್ತನ ಶಿಷ್ಯರ ಮೇಲೆ ರೌದ್ರನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಶೆಪಡುತ್ತಾ ಮಹಾಯಾಜಕನ ಬಳಿಗೆ ಹೋಗಿ -


ಇದನ್ನು ಹೇಳಿ ನಿದ್ರೆಹೋದನು. ಸೌಲನು ಅವನ ಕೊಲೆಗೆ ಸಮ್ಮತಿಸುವವನಾಗಿದ್ದನು. ಆ ದಿವಸದಲ್ಲಿ ಯೆರೂಸಲೇವಿುನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರು ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.


ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳು ಮಾಡುತ್ತಿದ್ದನು.


ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಕುಲೀನ ಸ್ತ್ರೀಯರನ್ನೂ ಊರಿನ ಪ್ರಮುಖರನ್ನೂ ಪ್ರೇರಿಸಿ ಪೌಲ ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ಅವರನ್ನು ತಮ್ಮ ಮೇರೆಯಿಂದ ಆಚೆಗೆ ಅಟ್ಟಿದರು.


ಆದರೆ ನಂಬದೆ ಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.


ಆಗ ಆ ಊರಿನ ಜನರಲ್ಲಿ ಭೇದವುಂಟಾಯಿತು; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.


ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ


ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯದಿಂದಲೂ ಯೆಹೂದ್ಯರು ಬಂದು ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವದಕ್ಕೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಎಳೆದುಬಿಟ್ಟರು.


ಗಲ್ಲಿಯೋನನು ಅಖಾಯದ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಸ್ಥಾನದ ಮುಂದೆ ಹಿಡಿತಂದು -


ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು