Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:18 - ಕನ್ನಡ ಸತ್ಯವೇದವು J.V. (BSI)

18 ಯಾಕಂದರೆ ನಿಮ್ಮ ಬಳಿಗೆ ಬರುವದಕ್ಕೆ ನಮಗೆ ಮನಸ್ಸಿತ್ತು; ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವದಕ್ಕಿದ್ದೆನು; ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯಾಕೆಂದರೆ ನಿಮ್ಮ ಬಳಿಗೆ ಬರುವುದಕ್ಕೆ ನಮಗೆ ಮನಸ್ಸಿತ್ತು. ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವುದಕ್ಕೆ ಪ್ರಯತ್ನ ಮಾಡಿದ್ದೆನು. ಆದರೆ ಸೈತಾನನು ನನಗೆ ಅಡ್ಡಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಿಮ್ಮಲ್ಲಿಗೆ ಹಿಂದಿರುಗಲು ನಮಗೆ ಮನಸ್ಸಿತ್ತು. ಪೌಲನೆಂಬ ನಾನಂತೂ, ನಿಮ್ಮ ಬಳಿಗೆ ಬರಲು ಅನೇಕ ಸಾರಿ ಪ್ರಯಾಸಪಟ್ಟೆ. ಆದರೆ ಸೈತಾನನು ನಮಗೆ ಅಡ್ಡಿ ಆತಂಕವನ್ನೊಡ್ಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹೌದು, ನಾವು ನಿಮ್ಮಲ್ಲಿಗೆ ಬರಬೇಕೆಂದಿದ್ದೆವು. ಪೌಲನಾದ ನಾನು, ನಿಜವಾಗಿಯೂ ಅನೇಕ ಸಲ ಬರಲು ಪ್ರಯತ್ನಿಸಿದೆನು, ಆದರೆ ನಮ್ಮನ್ನು ಸೈತಾನನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದ್ದರಿಂದ ನಿಮ್ಮ ಬಳಿಗೆ ಬರುವುದಕ್ಕೆ ನಮಗೆ ಮನಸ್ಸಿತ್ತು. ಪೌಲನಾದ ನಾನಂತೂ ಮತ್ತೆ ಮತ್ತೆ ಬರಲು ಬಯಸಿದೆನು. ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಹೆಚ್ಯಾಸಾಟ್ನಿ ಮಿಯಾ ಪಾವ್ಲು ತುಮ್ಕಾ ಯೆವ್ನ್ ಭೆಟುಚೆಚ್ ಮನುನ್ ಲೈ ಖಟ್ಪಟ್ಲೊ, ಖರೆ ಸೈತಾನಾನ್ ಮಾಕಾ ಯೆವ್ಕುಚ್ ಸೊಡುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:18
13 ತಿಳಿವುಗಳ ಹೋಲಿಕೆ  

ಈ ಕಾರಣದಿಂದ ನಿಮ್ಮ ಬಳಿಗೆ ಬರುವದಕ್ಕೆ ನನಗೆ ಅನೇಕಾವರ್ತಿ ಅಭ್ಯಂತರವಾಯಿತು.


ಸಹೋದರರೇ, ನನ್ನ ಕೆಲಸವು ಇತರ ಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂದು ನನ್ನ ಅಪೇಕ್ಷೆ.


ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.


ದೇವರು ಮಾತಾಡುವ ರೀತಿ ಒಂದುಂಟು ಹೌದು, ಎರಡೂ ಉಂಟು, ಮನುಷ್ಯನಾದರೋ ಲಕ್ಷಿಸುವದಿಲ್ಲ.


ಯೇಸು ಅವನಿಗೆ - ಸೈತಾನನೇ, ನೀನು ತೊಲಗಿ ಹೋಗು. ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಹೇಳಿದನು.


ಇದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.


ಹಾಗೆ ಆಜ್ಞಾಪಿಸದೆ ಮುದುಕನೂ ಈಗ ಕ್ರಿಸ್ತ ಯೇಸುವಿನ ನಿವಿುತ್ತ ಸೆರೆಯವನೂ ಆಗಿರುವ ಈ ಪೌಲನೆಂಬ ನಾನು ಪ್ರೀತಿಯ ನಿವಿುತ್ತ ನಿನ್ನನ್ನು ಬೇಡಿಕೊಳ್ಳುತ್ತೇನೆ.


ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟುಕಳುಹಿಸಿದಿರಲ್ಲಾ.


ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ; ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ಗುರುತು; ಹೀಗೆಯೇ ನನ್ನ ಕೈಬರಹ.


ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು