Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 3:8 - ಕನ್ನಡ ಸತ್ಯವೇದವು J.V. (BSI)

8 ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಮಗೆ ಜೀವಕಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಮಗೆ ಜೀವಕಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀವು ಪ್ರಭುವಿನಲ್ಲಿ ಅಚಲರಾಗಿರುವುದನ್ನು ಕೇಳಿ ಪುನಶ್ಚೇತನಗೊಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಪ್ರಭುವಿನಲ್ಲಿ ಬಲವಾಗಿದ್ದರೆ, ನಮ್ಮಲ್ಲಿ ಜೀವ ತುಂಬಿದಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ನೀವು ಕರ್ತ ಯೇಸುವಿನಲ್ಲಿ ದೃಢವಾಗಿ ನಿಂತಿರುವುದರಿಂದಲೇ ಈಗ ನಾವು ನಿಜವಾಗಿಯೂ ಜೀವಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕಶ್ಯಾಕ್ ಮಟ್ಲ್ಯಾರ್, ಜರ್ ತರ್ ತುಮಿ ತುಮ್ಚ್ಯಾ ಜಿವನಾತ್ ಧನಿಯಾ ವೈಲ್ಯಾ ವಿಶ್ವಾಸಾತ್ ಎಕ್ ಹೊವ್ನ್ ಘಟ್ ಇಬೆ ರ್‍ಹಾತ್ಯಾಶಿ, ತರ್ ಅಮ್ಚ್ಯಾ ಭುತ್ತುರ್ ಖರೊಚ್ ಜಿವ್ ಭರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 3:8
24 ತಿಳಿವುಗಳ ಹೋಲಿಕೆ  

ನೀವು ಕೇಳಿದಂಥ ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರುವದಾದರೆ ಆ ಪದವಿ ನಿಮಗೆ ಪ್ರಾಪ್ತವಾಗುವದು.


ಎಚ್ಚರವಾಗಿರಿ, ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ.


ಬೇಗನೆ ಬರುತ್ತೇನೆ; ನಿನಗಿರುವದನ್ನು ಹಿಡಿದುಕೊಂಡಿರು; ನಿನ್ನ ಜಯಮಾಲೆಯನ್ನು ಯಾರೂ ಅಪಹರಿಸಬಾರದು.


ನಮ್ಮ ನಿರೀಕ್ಷೆಯನ್ನು ಕುರಿತು ನಾವು ಮಾಡಿದ ಪ್ರತಿಜ್ಞೆಯನ್ನು ನಿಶ್ಚಂಚಲವಾಗಿ ಪರಿಗ್ರಹಿಸೋಣ; ವಾಗ್ದಾನ ಮಾಡಿದಾತನು ನಂಬಿಗಸ್ತನು.


ಆಕಾಶಮಂಡಲಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಪ್ರತಿಜ್ಞೆಯನ್ನು ಬಿಡದೆ ಹಿಡಿಯೋಣ.


ನನಗಂತೂ ಬದುಕುವದಂದರೆ ಕ್ರಿಸ್ತನೇ, ಸಾಯುವದು ಲಾಭವೇ.


ಆದದರಿಂದ ನೀನು ಹೊಂದಿದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೊಂಡು ಅದನ್ನು ಕಾಪಾಡಿಕೋ ಮತ್ತು ದೇವರ ಕಡೆಗೆ ತಿರುಗಿಕೋ. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯುವದೇ ಇಲ್ಲ.


ಮೊದಲಿಂದಿರುವ ಭರವಸವನ್ನು ಅಂತ್ಯದವರೆಗೂ ದೃಢವಾಗಿ ಹಿಡಿದುಕೊಳ್ಳುವ ಪಕ್ಷಕ್ಕೆ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವಲ್ಲಾ!


ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವ ಹಾಗೆಯೂ ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ;


ಅವನು ಒಳ್ಳೆಯವನೂ ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು - ನೀವು ದೃಢಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರ್ರಿ ಎಂದು ಅವರೆಲ್ಲರಿಗೆ ಬುದ್ಧಿ ಹೇಳಿದನು.


ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವದು; ಸಂಜೆಗೆ ದುಃಖವೆಂಬದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ ಮುಂಜಾನೆ ಹರ್ಷಧ್ವನಿಯು ಕೇಳಿಸುವದು.


ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ಅಧರ್ಮಿಗಳ ಭ್ರಾಂತಿಯ ಸೆಳವಿಗೆ ಸಿಕ್ಕಿಕೊಂಡು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಟರಾಗದಂತೆ ಎಚ್ಚರಿಕೆಯಾಗಿರಿ.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ಹೀಗಿರಲಾಗಿ ಪ್ರಿಯರೂ ಇಷ್ಟರೂ ಆದ ನನ್ನ ಸಹೋದರರೇ, ನನಗೆ ಸಂತೋಷವೂ ಜಯಮಾಲೆಯೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ; ಪ್ರಿಯರೇ.


ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ.


ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ಏನು ಬೇಕಾದರೂ ಬೇಡಿಕೊಳ್ಳಿರಿ, ಅದು ನಿಮಗೆ ದೊರೆಯುವದು.


ನೀವು ನನ್ನಲ್ಲಿ ನೆಲೆಗೊಂಡಿರ್ರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲಕೊಡಲಾರದೋ ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.


ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ.


ಕ್ರಿಸ್ತನು ನಮ್ಮನ್ನು ಸ್ವತಂತ್ರದಲ್ಲಿರಿಸಬೇಕೆಂದು ನಮಗೆ ಬಿಡುಗಡೆಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.


ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ - ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡವರಾದರೆ ನಿಜವಾಗಿ ನನ್ನ ಶಿಷ್ಯರಾಗಿದ್ದು ಸತ್ಯವನ್ನು ತಿಳಿದುಕೊಳ್ಳುವಿರಿ;


ಸಹೋದರರೇ, ಇದನ್ನು ಕೇಳಿ ನಮ್ಮ ಎಲ್ಲಾ ಕೊರತೆಯಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು