Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:17 - ಕನ್ನಡ ಸತ್ಯವೇದವು J.V. (BSI)

17 ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘವಾಹನರಾಗಿ ಫಕ್ಕನೆ ಒಯ್ಯಲ್ಪಡುವೆವು; ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಮೇಲೆ, ಇನ್ನೂ ಬದುಕಿರುವ ನಾವು ಎದ್ದುಬಂದವರೊಡನೆ ಆಕಾಶಮಂಡಲದಲ್ಲಿ ಪ್ರಭುವನ್ನು ಎದುರುಗೊಳ್ಳಲು ಮೇಘಾರೂಢರಾಗಿ ಮೇಲಕ್ಕೆ ಒಯ್ಯಲ್ಪಡುತ್ತೇವೆ. ಹೀಗೆ ಸರ್ವದಾ ನಾವು ಪ್ರಭುವಿನೊಂದಿಗೆ ಇರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅನಂತರ, ಇನ್ನೂ ಜೀವದಿಂದುಳಿದಿರುವ ನಾವು ಸತ್ತವರೊಡನೆ ಒಂದುಗೂಡುವೆವು. ಪ್ರಭುವನ್ನು ಅಂತರಿಕ್ಷದಲ್ಲಿ ಎದುರುಗೊಳ್ಳಲು ನಾವು ಮೇಘಗಳ ನಡುವೆ ಎತ್ತಲ್ಪಡುವೆವು. ಹೀಗೆ ನಾವು ಯಾವಾಗಲೂ ಪ್ರಭುವಿನೊಂದಿಗೆ ಇರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಮೇಲೆ, ಜೀವದಿಂದ ಉಳಿದಿರುವ ನಾವು ಅವರೊಂದಿಗೆ ಅಂತರಿಕ್ಷದಲ್ಲಿ ಕರ್ತ ಯೇಸುವನ್ನು ಎದುರುಗೊಳ್ಳುವುದಕ್ಕಾಗಿ ಮೇಘಗಳಲ್ಲಿ ಒಯ್ಯಲಾಗುವೆವು. ಹೀಗೆ ನಾವು ಸದಾಕಾಲವೂ ಕರ್ತ ಯೇಸುವಿನ ಜೊತೆಯಲ್ಲಿಯೇ ಇರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾನಾ ತನ್ನಾ ಪತರ್ ಝಿತ್ತೆ ಹೊತ್ತ್ಯಾಕ್ನಿ ಅಮ್ಕಾ ತೆಂಚ್ಯಾ ವಾಂಗ್ಡಾ ಕ್ರಿಸ್ತಾಕ್ ಭೆಟುಕ್ ಅಂತ್ರಾಳಾರ್ ಮೊಡಾಂಚ್ಯಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊತಾ, ಹೆಚ್ಯಾ ಮಾನಾ ಅಮಿ ಸದ್ದಿಚ್ ಧನಿಯಾಚ್ಯಾ ವಾಂಗ್ಡಾ ರ್‍ಹಾತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:17
33 ತಿಳಿವುಗಳ ಹೋಲಿಕೆ  

ಆದರೆ ಕಡೇ ತುತೂರಿಯ ಧ್ವನಿಯಾಗುವಾಗ ನಾವೆಲ್ಲರು ಒಂದು ಕ್ಷಣದಲ್ಲೇ ರೆಪ್ಪೆ ಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.


ಆಮೇಲೆ ಅವರಿಗೆ - ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಆಕಾಶದ ಮಹಾವಾಣಿಯು ಹೇಳಿತು. ಅದನ್ನು ಅವರು ಕೇಳಿ ಮೇಘ ವಿಮಾನದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.


ನಾನು ಹೋಗಿ ನಿಮಗೆ ಸ್ಥಳವನ್ನು ಸಿದ್ಧಮಾಡಿದ ಮೇಲೆ ತಿರಿಗಿ ಬಂದು ನಿಮ್ಮನ್ನು ಕರಕೊಂಡು ಹೋಗಿ ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಯಾಕಂದರೆ ನಾನಿರುವ ಸ್ಥಳದಲ್ಲಿ ನೀವು ಸಹ ಇರಬೇಕು.


ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ ಕರ್ತನು ಪ್ರತ್ಯಕ್ಷನಾಗುವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದವರಿಗಿಂತ ಮುಂದಾಗುವದೇ ಇಲ್ಲ. ಕರ್ತನು ತಾನೇ ಆಜ್ಞಾಘೋಷದೊಡನೆಯೂ


ಇಗೋ ಮೇಘಗಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂವಿುಯಲ್ಲಿರುವ ಎಲ್ಲಾ ಕುಲದವರು ಆತನನ್ನು ನೋಡಿ ಎದೆಬಡುಕೊಳ್ಳುವರು. ಹೌದು, ಹಾಗೆಯೇ ಆಗುವದು. ಆಮೆನ್.


ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು, ಅವನನ್ನು ಆತನ ಸನ್ನಿಧಿಗೆ ತಂದರು.


ಈ ಮಾತುಗಳನ್ನು ಹೇಳಿದ ಬಳಿಕ ಅವರು ನೋಡುತ್ತಾ ಇದ್ದ ಹಾಗೆ ಆತನು ಏರಿಸಲ್ಪಟ್ಟನು; ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರ ಕಣ್ಣಿಗೆ ಮರೆಯಾದನು.


ತಂದೆಯೇ, ನೀನು ಯಾರನ್ನು ನನಗೆ ಕೊಟ್ಟಿಯೋ ಅವರು ನಾನಿರುವ ಸ್ಥಳದಲ್ಲಿ ನನ್ನ ಕೂಡ ಇದ್ದುಕೊಂಡು ಲೋಕವು ಹುಟ್ಟುವದಕ್ಕಿಂತ ಮುಂಚೆಯೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ನೋಡಬೇಕೆಂದು ಇಚ್ಫೈಸುತ್ತೇನೆ.


ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ಹಿಂದೆ ಬರಲಿ; ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನು ಸಹ ಇರುವನು. ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ತಂದೆಯು ಅವನಿಗೆ ಬಹುಮಾನ ಮಾಡುವನು.


ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡುಹೋಗಲಾಗಿ ಕಂಚುಕಿಯು ಸಂತೋಷವುಳ್ಳವನಾಗಿ ತನ್ನ ದಾರಿಯನ್ನು ಹಿಡಿದು ಅವನನ್ನು ಕಾಣಲೇ ಇಲ್ಲ.


ನೀನೇ ಹೇಳಿದ್ದೀ; ಇದಲ್ಲದೆ ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳ ಮೇಲೆ ಕುಳಿತು ಬರುವದನ್ನೂ ಕಾಣುವಿರಿ ಎಂದು ನಿಮಗೆ ಹೇಳುತ್ತೇನೆ ಅಂದನು.


ಆಕೆ ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ಫಕ್ಕನೆ ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.


ಇದನ್ನು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿರುವದೇ ಉತ್ತಮವೆಂದು ಎಣಿಸುತ್ತೇವೆ.


ಯೇಸು - ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳೊಂದಿಗೆ ಬರುವದನ್ನೂ ನೋಡುವಿರಿ ಅಂದನು.


ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತಭಾಗ್ಯವಿದೆ.


ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ಎಚ್ಚತ್ತಾಗ ನಿನ್ನ ಸ್ವರೂಪದರ್ಶನದಿಂದ ತೃಪ್ತನಾಗಿರುವೆನು.


ಅನಂತರ ಅವರು ಅವನಿಗೆ - ನಿನ್ನ ಸೇವಕರಾದ ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠ ಜನರಿದ್ದಾರೆ; ನಿನ್ನ ಯಜಮಾನನನ್ನು ಹುಡುಕಹೋಗುವದಕ್ಕೆ ಅವರಿಗೆ ಅಪ್ಪಣೆಯಾಗಲಿ. ಯೆಹೋವನ ಆತ್ಮವು ಅವನನ್ನು ಎತ್ತಿಕೊಂಡು ಹೋಗಿ ಒಂದು ಬೆಟ್ಟದ ಮೇಲಾಗಲಿ ತಗ್ಗಿನಲ್ಲಾಗಲಿ ಇಟ್ಟಿರಬಹುದು ಎಂದು ಹೇಳಿದರು; ಅವನು ಅವರಿಗೆ - ನೀವು ಕಳುಹಿಸಬೇಡಿರಿ ಅಂದನು.


ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವದು. ನಾನು ಹೋಗಿ ಅಹಾಬನಿಗೆ ಹೇಳುವಲ್ಲಿ ನೀನು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ;


ಅವರು ಮಾತಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಳಿಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಹೋದನು.


ಆದರೆ ನಾವು ದೇವರ ವಾಗ್ದಾನವನ್ನು ನಂಬಿ ನೂತನಾಕಾಶಮಂಡಲವನ್ನೂ ನೂತನಭೂಮಂಡಲವನ್ನೂ ಎದುರು ನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.


ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ ಸ್ವೀಕಾರ ಮಾಡುವನು. ಸೆಲಾ.


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ನಿನ್ನ ಚಿತ್ತವನ್ನು ತಿಳಿಯಪಡಿಸಿ ನನ್ನನ್ನು ನಡಿಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.


ನಮ್ಮ ಕರ್ತನಾದ ಯೇಸು ನಿಮ್ಮ ಹೃದಯಗಳನ್ನು ದೃಢಪಡಿಸಿ ತನ್ನ ಎಲ್ಲಾ ಪರಿಶುದ್ಧ ಪರಿವಾರ ಸಮೇತ ಪ್ರತ್ಯಕ್ಷನಾದಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.


ನಾವು ಎಚ್ಚರವಾಗಿದ್ದರೂ ಸರಿಯೇ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು