1 ಥೆಸಲೋನಿಕದವರಿಗೆ 4:6 - ಕನ್ನಡ ಸತ್ಯವೇದವು J.V. (BSI)6 ಧರ್ಮಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು. ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡುಮಾಡಬಾರದು. ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಈ ವಿಷಯದಲ್ಲಿ ನಿಮ್ಮಲ್ಲಿ ಯಾರೂ ಕ್ರಿಸ್ತನಲ್ಲಿ ಸಹೋದರನಾದವನನ್ನು ವಂಚಿಸಿ ಕೇಡುಮಾಡಬಾರದು. ನಾವು ಈಗಾಗಲೇ ನಿಮಗೆ ಹೇಳಿದಂತೆ ಮತ್ತು ಎಚ್ಚರಿಕೆ ನೀಡಿದಂತೆ ಇವೆಲ್ಲವುಗಳ ವಿಷಯದಲ್ಲಿ ದೇವರು ದಂಡಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತಮ್ಮ ಸಹೋದರ ಸಹೋದರಿಯನ್ನು ವಂಚಿಸದಿರಲಿ. ಏಕೆಂದರೆ ನಾವು ಮೊದಲು ತಿಳಿಸಿ ನಿಮಗೆ ಗಂಭೀರವಾಗಿ ಎಚ್ಚರಿಸಿದಂತೆ ಈ ಪಾಪಗಳ ವಿಷಯದಲ್ಲಿ ಕರ್ತ ಯೇಸುವು ಮುಯ್ಯಿಗೆ ಮುಯ್ಯಿ ತೀರಿಸುವವರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಅನಿ ಹೆಚ್ಯಾ ವಿಶಯಾತ್ ಕೊನ್ಬಿ ಅನಿಎಕ್ಲ್ಯಾ ಕ್ರಿಸ್ತಾತ್ ಭಾವ್ ಹೊಲ್ಲ್ಯಾ ಎಕ್ಲ್ಯಾಕ್ ಮೊಸ್ ಕರುನ್ ತೆಚೊ ಫಾಯ್ದೊ ಕಾಡುನ್ ಘೆವ್ಚೆ ನ್ಹಯ್. ಹೆಚ್ಯಾ ವಿಶಯಾತ್ ಅದ್ದಿಚ್ ಅಮಿ ತುಮ್ಕಾ ಸಾಂಗ್ಲಾಂವ್ ಅನಿ ಅಶೆ ಕರ್ತಲ್ಯಾಕ್ನಿ ಧನಿ ಮೊಟಿ ಶಿಕ್ಷಾ ದಿತಾ. ಅಧ್ಯಾಯವನ್ನು ನೋಡಿ |
ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮಗೆ ಎಂಥ ತಹತಹವನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸ್ಥಾಪಿಸುವದಕ್ಕೆ ಎಷ್ಟೋ ಪ್ರಯಾಸಪಟ್ಟಿರಿ, ಎಷ್ಟೋ ಮನೋವ್ಯಥೆಯನ್ನು ಅನುಭವಿಸಿದಿರಿ; ಎಂಥ ಭಯವನ್ನು ಎಂಥ ಹಂಬಲವನ್ನು ತೋರಿಸಿದಿರಿ; ಮಾನಹಾನಿಗಾಗಿ ಎಷ್ಟೋ ರೋಷಪಟ್ಟು ಶಿಕ್ಷೆಮಾಡಿದಿರಿ. ನೀವು ಆ ಕಾರ್ಯಕ್ಕೆ ಸೇರಿದವರಲ್ಲವೆಂಬದನ್ನು ಎಲ್ಲಾ ವಿಧದಲ್ಲಿಯೂ ತೋರಿಸಿದಿರಿ.