Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:12 - ಕನ್ನಡ ಸತ್ಯವೇದವು J.V. (BSI)

12 ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಹೋದರರೇ, ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು, ಪ್ರಯಾಸಪಡುತ್ತಾ ನಿಮಗೆ ಬುದ್ಧಿ ಹೇಳುತ್ತರೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸಹೋದರರೇ, ನಿಮ್ಮೊಡನೆ ದುಡಿಯುತ್ತಾ ಪ್ರಭುವಿನ ಹೆಸರಿನಲ್ಲಿ ನಿಮಗೆ ಅಧಿಕಾರಿಗಳೂ ಮಾರ್ಗದರ್ಶಕರೂ ಆಗಿರುವವರಿಗೆ ತಕ್ಕ ಸನ್ಮಾನವನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸಹೋದರ ಸಹೋದರಿಯರೇ, ಈಗ ನಿಮ್ಮಲ್ಲಿ ಪ್ರಯಾಸದಿಂದ ಕೆಲಸ ಮಾಡುತ್ತಾ ನಿಮ್ಮನ್ನು ಪ್ರಭುವಿನ ಮಾರ್ಗದಲ್ಲಿ ನಡೆಸುವವರನ್ನು ಮತ್ತು ಉಪದೇಶಿಸುವವರನ್ನು ಗೌರವಿಸಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪ್ರಿಯರೇ, ಯಾರು ನಿಮ್ಮ ನಡುವೆ ಪ್ರಯಾಸಪಟ್ಟು ಕರ್ತ ಯೇಸುವಿನಲ್ಲಿ ನಿಮ್ಮನ್ನು ಪರಾಮರಿಸುವವರಾಗಿದ್ದು ನಿಮಗೆ ಬುದ್ಧಿ ಹೇಳುತ್ತಾರೋ ಅವರನ್ನು ಗೌರವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಮ್ಚ್ಯಾ ಭಾವಾನು ಅನಿ ಭೆನಿಯಾನು, ಕ್ರಿಸ್ತಾಂವ್ ಜಿವನಾಸಾಟ್ನಿ ತುಮ್ಚ್ಯಾ ಮದ್ದಿ ಜೆ ಕೊನ್ ಕಾಮ್ ಕರ್‍ತಾ, ತುಮ್ಕಾ ಶಿಕ್ವುತಾ ಅನಿ ತುಮ್ಕಾ ಚಾಲ್ವುನ್ ನ್ಹೆತಾ, ತೆಂಕಾ ಬರೆ ಕರುನ್ ಮಾನ್ ದಿವಾ ಮನುನ್ ಅಮಿ ತುಮ್ಚ್ಯಾಕ್ಡೆ ಹಾತ್ ಜೊಡುನ್ ಮಾಗ್ತಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:12
42 ತಿಳಿವುಗಳ ಹೋಲಿಕೆ  

ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವಂತೆ ನೋಡಿರಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.


ಅವರು ಯಾವ ರೀತಿಯಿಂದ ನಡೆದುಕೊಂಡು ಪ್ರಾಣಬಿಟ್ಟರೆಂಬದನ್ನು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.


ಅವರು ನನ್ನ ಆತ್ಮವನ್ನೂ ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ಇಂಥವರನ್ನು ಸನ್ಮಾನಿಸಿರಿ.


ಸಹೋದರರೇ, ನೀವು ಇಂಥವರಿಗೂ ಕೆಲಸದಲ್ಲಿ ಸಹಾಯಮಾಡುತ್ತಾ ಪ್ರಯಾಸಪಡುತ್ತಾ ಇರುವವರೆಲ್ಲರಿಗೂ ಒಳಗಾಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ. ನನಗುಂಟಾದ ಆತನ ಕೃಪೆಯು ನಿಷ್ಫಲವಾಗಲಿಲ್ಲ; ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ದೇವರು ತನ್ನ ಸಭೆಯಲ್ಲಿ ಮೊದಲನೇದಾಗಿ ಅಪೊಸ್ತಲರನ್ನು, ಎರಡನೇದಾಗಿ ಪ್ರವಾದಿಗಳನ್ನು, ಮೂರನೇದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹಾತ್ಕಾರ್ಯ ಮಾಡುವ ಶಕ್ತಿಯನ್ನೂ ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ ಪರಸಹಾಯ ಮಾಡುವ ಗುಣವನ್ನೂ ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನೂ ವಿವಿಧ ವಾಣಿಗಳನ್ನಾಡುವ ವರವನ್ನೂ ಅವರವರಿಗೆ ಕೊಟ್ಟಿದ್ದಾನೆ.


ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.


ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವೂ ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು - ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯವೆಂಬದಾಗಿ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು ಅಂದನು.


ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳುಕೊಳ್ಳಬೇಡಿರಿ.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ - ಆ ಏಳು ನಕ್ಷತ್ರಗಳು ಅಂದರೆ ಆ ಏಳು ಸಭೆಗಳ ದೂತರು; ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.


ನೀನು ಕ್ರೇತದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ ಪಟ್ಟಣಪಟ್ಟಣಗಳಲ್ಲೂ ಸಭೆಯ ಹಿರಿಯರನ್ನು ನೇವಿುಸಬೇಕೆಂದು ನಾನು ನಿನಗೆ ಅಪ್ಪಣೆ ಕೊಟ್ಟು ನಿನ್ನನ್ನು ಅಲ್ಲೇ ಬಿಟ್ಟು ಬಂದೆನಲ್ಲಾ.


ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಮಾಡಿದವನಿಗೆ ದೊರೆಯುತ್ತದೆ.


ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲವನ್ನು ಪ್ರಯೋಗಮಾಡಿ ಇದಕ್ಕೋಸ್ಕರವೇ ಹೋರಾಡುತ್ತೇನೆ, ಪ್ರಯಾಸಪಡುತ್ತೇನೆ.


ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು ಲೋಕದೊಳಗೆ ಹೊಳೆಯುವ ಜೋತಿರ್ಮಂಡಲಗಳಂತೆ ಕಾಣಿಸುವವರಾಗಿದ್ದೀರಲ್ಲಾ. ನೀವು ಹೀಗೆ ನಡೆದರೆ ನಾನು ಕೆಲಸ ಸಾಧಿಸಿದ್ದೂ ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಉತ್ಸಾಹವು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವದು.


ನಾನು ನಿಮಗೋಸ್ಕರ ಪ್ರಯಾಸಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ಭಯಪಡುತ್ತೇನೆ.


ಅವರು ಕ್ರಿಸ್ತನ ಸೇವಕರೋ ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ಬುದ್ಧಿಸ್ವಾಧೀನವಿಲ್ಲದವನಾಗಿ ಮಾತಾಡುತ್ತೇನೆ. ಆತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಗಳೊಳಗೆ ಬಿದ್ದೆನು; ವಿುತಿಮೀರಿ ಪೆಟ್ಟುಗಳನ್ನು ತಿಂದೆನು, ಅನೇಕಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡೆನು.


ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದು - ನೀವು ಹೊಂದಿದ ದೇವರ ಕೃಪೆಯನ್ನು ವ್ಯರ್ಥ ಮಾಡಿಕೊಳ್ಳಬೇಡಿರೆಂದು ಎಚ್ಚರಿಸುತ್ತೇವೆ.


ಆದದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ, ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನಿಗೆ ಮೆಚ್ಚುವವರಾಗಿರಬೇಕೆಂಬದೇ ನಮ್ಮ ಗುರಿಯಾಗಿದೆ.


ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ - ಆಮೆನ್ ಎಂಬಾತನು ಅಂದರೆ ನಂಬತಕ್ಕ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲನೂ ಆಗಿರುವಾತನು ಹೇಳುವದೇನಂದರೆ -


ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ - ದೇವರ ಏಳು ಆತ್ಮಗಳೂ ಏಳು ನಕ್ಷತ್ರಗಳೂ ಉಳ್ಳಾತನು ಹೇಳುವದೇನಂದರೆ - ನಿನ್ನ ಕೃತ್ಯಗಳನ್ನು ಬಲ್ಲೆನು; ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂಬದನ್ನು ಬಲ್ಲೆನು.


ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ -


ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ -


ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ -


ನೀನು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿವಿುತ್ತ ಬಾಧೆಯನ್ನು ಸೈರಿಸಿಕೊಂಡು ಬೇಸರಗೊಳ್ಳಲಿಲ್ಲ; ಇದನ್ನೆಲ್ಲಾ ಬಲ್ಲೆನು.


ಸಹೋದರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿರುವದಷ್ಟೆ.


ನೀವು ಕಷ್ಟಮಾಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು; ಬೇರೊಬ್ಬರು ಕಷ್ಟಮಾಡಿದ್ದಾರೆ; ನೀವು ನಡುವೆ ಅವರ ಕಷ್ಟದಲ್ಲಿ ಸೇರಿದ್ದೀರಿ ಎಂದು ಹೇಳಿದನು.


ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.


ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು; ಇವರಿಂದ ವಿುಕ್ಕಾದವರಿಗೂ ಭಯವುಂಟಾಗುವದು.


ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ


ಆದರೆ ಕರ್ತನಾದ ಯೇಸುವಿನ ಚಿತ್ತವಾದರೆ ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಧೈರ್ಯತಂದುಕೊಂಡೇನು.


ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.


ಕರ್ತನ ಸೇವೆಯಲ್ಲಿ ಪ್ರಯಾಸಪಟ್ಟವರಾದ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನ ಸೇವೆಯಲ್ಲಿ ಬಹಳವಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀಸಳಿಗೆ ವಂದನೆ.


ಕಡೇ ಮಾತೇನಂದರೆ, ಸಹೋದರರೇ, ನಾವು ಕರ್ತನಾದ ಯೇಸುವಿನ ಅಧಿಕಾರದಿಂದ ನಿಮಗೆ ಕೊಟ್ಟ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು