Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:14 - ಕನ್ನಡ ಸತ್ಯವೇದವು J.V. (BSI)

14 ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸಹೋದರ ಸಹೋದರಿಯರೇ, ಕೆಲಸ ಮಾಡದೆ ಇರುವ ಜನರಿಗೆ ಎಚ್ಚರಿಕೆ ನೀಡಬೇಕೆಂದು ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ಹೆದರಿಕೊಂಡಿರುವವರನ್ನು ಪ್ರೋತ್ಸಾಹಿಸಿರಿ; ಬಲಹೀನರಿಗೆ ಸಹಾಯ ಮಾಡಿ; ಎಲ್ಲರ ಜೊತೆಯಲ್ಲಿ ತಾಳ್ಮೆಯಿಂದಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪ್ರಿಯರೇ, ಶಿಸ್ತು ಇಲ್ಲದವರನ್ನು ಎಚ್ಚರಿಸಿರಿ. ಮನಗುಂದಿದವರನ್ನು ಆದರಿಸಿರಿ. ಬಲಹೀನರಿಗೆ ಆಧಾರವಾಗಿರಿ. ಎಲ್ಲರೊಂದಿಗೂ ತಾಳ್ಮೆಯುಳ್ಳವರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮ್ಚ್ಯಾ ಭಾವಾ-ಭೆನಿಯಾನು, ಅಮಿ ತುಮ್ಚ್ಯಾಕ್ಡೆ ಲೈ ಮಾಗ್ತಾಂವ್, ಕಾಮ್ ಕರಿನಸ್ತಾನಾ ರ್‍ಹಾತಲ್ಯಾಕ್ನಿ ಉಶಾರ್ಕಿ ಸಾಂಗಾ, ಭಿಂವ್ಕುರ್ಯ್ಯಾಕ್ನಿ ಧೈರೊ ದಿವಾ, ಬಳನಸಲ್ಯಾಕ್ನಿ ಮಜತ್ ಕರಾ, ಸಗ್ಳ್ಯಾಂಚ್ಯಾ ವಾಂಗ್ಡಾ ಸಮಾದಾನಾನ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:14
40 ತಿಳಿವುಗಳ ಹೋಲಿಕೆ  

ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು; ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ನಂಬಿಕೆಯಲ್ಲಿ ದೃಢವಿಲ್ಲದವರನ್ನೂ ಸೇರಿಸಿಕೊಳ್ಳಿರಿ. ಆದರೆ ಸಂದೇಹಾಸ್ಪದವಾದ ಕಾರ್ಯಗಳನ್ನು ಅವರ ಮುಂದೆ ಚರ್ಚಿಸಬೇಡಿರಿ.


ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವೂ ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು - ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯವೆಂಬದಾಗಿ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು ಅಂದನು.


ನಾವು ಆತನನ್ನು ಪ್ರಸಿದ್ಧಿಪಡಿಸುವವರಾಗಿ ಸಕಲರಿಗೂ ಬುದ್ಧಿಹೇಳುತ್ತಾ ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವದಕ್ಕೆ ಪ್ರಯತ್ನಿಸುತ್ತಿದ್ದೇವೆ.


ಸೆರೆಯವರ ಸಂಗಡ ನೀವೂ ಜೊತೆ ಸೆರೆಯವರೆಂದು ಭಾವಿಸಿಕೊಂಡು ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ನಿಮಗೂ ಅನ್ಯಾಯ ಸಂಭವಿಸೀತೆಂದು ತಿಳಿದು ಅನ್ಯಾಯ ಅನುಭವಿಸುವವರನ್ನು ನೆನಸಿರಿ. ದಾಂಪತ್ಯವು ಮಾನ್ಯವಾದದ್ದೆಂದು ಎಲ್ಲರೂ ಎಣಿಸಬೇಕು;


ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು; ನೀತಿ ಭಕ್ತಿ ನಂಬಿಕೆ ಪ್ರೀತಿ ಸ್ಥಿರಚಿತ್ತ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವದಕ್ಕೆ ಪ್ರಯಾಸಪಡು.


ನೀವು ಪೂರ್ಣ ವಿನಯ ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ


ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.


ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗೆತ್ತಿಕೊಳ್ಳುವನು. ಹಾಲುಕುಡಿಸುವ ಕುರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.


ಆದಕಾರಣ ನಾನು ಕಣ್ಣೀರುಸುರಿಸುತ್ತಾ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿಹೇಳಿದೆನೆಂದು ನೀವು ಜ್ಞಾಪಕಮಾಡಿಕೊಂಡು ಎಚ್ಚರವಾಗಿರಿ.


ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ನ್ಯಾಯವನ್ನು ದಿಗ್ವಿಜಯಕ್ಕಾಗಿ ಕಳುಹಿಸಿಕೊಡುವನು.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಆದದರಿಂದ ಜೋಲುಬಿದ್ದ ಕೈಗಳನ್ನೂ ನಡುಗುವ ಮೊಣಕಾಲುಗಳನ್ನೂ ಸುಧಾರಿಸಿಕೊಳ್ಳಿರಿ;


ಸಭೆಯ ಹಿರಿಯನು ನಿಂದಾರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರು ದುರ್ಮಾರ್ಗಸ್ಥರೆನಿಸಿಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವರಾಗಲಿ ಆಗಿರಬಾರದು.


ಅವನು ಕುಡಿದು ಜಗಳವಾಡುವವನೂ ಹೊಡೆದಾಡುವವನೂ ಆಗಿರಬಾರದು; ಸಾತ್ವಿಕನೂ ಕುತರ್ಕ ಮಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.


ಒಬ್ಬರಿಗೊಬ್ಬರು ಉಪಕಾರಿಗಳಾಗಿಯೂ ಕರುಣೆಯುಳ್ಳವರಾಗಿಯೂ ಕ್ಷವಿುಸುವವರಾಗಿಯೂ ಇರ್ರಿ.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.


ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ ಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು.


ಯಾಕಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದೆನು.


ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು ಎಂದು ಹೇಳಿದನು.


ಅವರ ಹೆಂಡತಿ, ಮನೆ, ಹೊಲಗದ್ದೆ ಇವೆಲ್ಲಾ ಅನ್ಯರ ಪಾಲಾಗುವವು; ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.


ಅನೇಕರು ಬರೀ ಮಾತಿನವರಾಗಿಯೂ ಮೋಸಗಾರರಾಗಿಯೂ ಇದ್ದು ಅಧಿಕಾರಕ್ಕೆ ಒಳಗಾಗದವರಾಗಿದ್ದಾರೆ; ಅವರೊಳಗೆ ಹೆಚ್ಚು ಜನರು ಸುನ್ನತಿಯವರು.


ಆದರೆ ಈ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈ ವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಕ್ಕೆ ನೈವೇದ್ಯ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿದ್ದು ಕಲೆಯನ್ನು ಹೊಂದುತ್ತದೆ.


ಆದರೂ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು