Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:9 - ಕನ್ನಡ ಸತ್ಯವೇದವು J.V. (BSI)

9 ಯಾಕಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇವಿುಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಸಂಪಾದಿಸಿಕೊಳ್ಳಬೇಕೆಂದು ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕೋಪಾಗ್ನಿಗೆ ನಾವು ಗುರಿಯಾಗಬೇಕೆಂದಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಾವು ಜೀವೋದ್ಧಾರ ಹೊಂದಬೇಕೆಂಬುದೇ ದೈವೇಚ್ಛೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ನಮ್ಮನ್ನು ಆರಿಸಿಕೊಂಡದ್ದು ತನ್ನ ಕೋಪಕ್ಕೆ ಗುರಿಯಾಗಲಿ ಎಂದಲ್ಲ. ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ರಕ್ಷಣೆಯಾಗಲೆಂದೇ ದೇವರು ನಮ್ಮನ್ನು ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ ದೇವರು ನಮ್ಮನ್ನು ಕೋಪಾಗ್ನಿಗೆ ನೇಮಿಸದೆ ನಾವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿ ರಕ್ಷಣೆಯನ್ನು ಹೊಂದಬೇಕೆಂದೇ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ದೆವಾನ್ ಅಮ್ಕಾ ಅಪ್ನಾಚ್ಯಾ ರಾಗಾತ್ ನಾಸ್ ಹೊವ್‍ಸಾಟ್ನಿ ಮನುನ್ ರಚುಕ್ ನಾ, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ಅಮ್ಕಾ ಸುಟ್ಕಾ ಗಾವುಚಿ ಮನುನ್ ತೆನಿ ರಚ್ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:9
23 ತಿಳಿವುಗಳ ಹೋಲಿಕೆ  

ಆತನು ಸತ್ತವರೊಳಗಿಂದ ಎಬ್ಬಿಸಿದಂಥ ಆಕಾಶದೊಳಗಿಂದ ಬರುವಂಥ ಆತನ ಕುಮಾರನನ್ನು ಎದುರುನೋಡುವವರಾದಿರೆಂತಲೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.


ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆಯಾಗಿದ್ದೀರಿ; ಮೊದಲು ವಾತ್ಸಲ್ಯ ಹೊಂದಿರಲಿಲ್ಲ, ಈಗ ವಾತ್ಸಲ್ಯ ಹೊಂದಿದವರಾಗಿದ್ದೀರಿ.


ಆದಕಾರಣ ದೇವರಾರಿಸಿಕೊಂಡವರು ನನ್ನ ಕೂಡ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.


ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ದೇವರ ವಾಕ್ಯವನ್ನು ಹೊಗಳಿದರು; ಮತ್ತು ನಿತ್ಯಜೀವಕ್ಕೆ ನೇವಿುಸಲ್ಪಟ್ಟವರೆಲ್ಲರು ನಂಬಿದರು.


ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನುಂಟುಮಾಡಿದ್ದಾನೆ.


ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸು ಮುಖ್ಯ ಪಾಪಿಯಾದ ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘಶಾಂತಿಯನ್ನು ತೋರ್ಪಡಿಸಿದನು.


ಸಂಕಟಗಳನ್ನು ಅನುಭವಿಸುವದಕ್ಕಾಗಿ ನಾವು ನೇವಿುಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದೆನು.


ಅದು ಎಡವುವ ಕಲ್ಲು ಮುಗ್ಗರಿಸುವ ಬಂಡೆ ಎಂತಲೂ ಬರೆದಿರುವ ಮಾತು ಸರಿಬೀಳುತ್ತದೆ. ಅವರು ದೇವರ ವಾಕ್ಯವನ್ನು ನಂಬಲೊಲ್ಲದೆ ಇರುವದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ; ಅದಕ್ಕಾಗಿಯೇ ಅವರು ನೇಮಕವಾದರು.


ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅರಿಯದವರೂ ಆಗಿರುವ ಕೆಲವು ಜನರು ಸಭೆಯಲ್ಲಿ ಕಳ್ಳತನದಿಂದ ಹೊಕ್ಕಿದ್ದಾರೆ; ಅವರಿಗೆ ಈ ದಂಡನೆಯಾಗಬೇಕೆಂದು ಪೂರ್ವದಲ್ಲೇ ಅವರ ವಿಷಯವಾಗಿ ಬರೆದದೆ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ -


ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದು ಅವರೆಲ್ಲರಿಗೆ ದೊರೆಯಲಿಲ್ಲ, ಅವರೊಳಗೆ ಆಯಲ್ಪಟ್ಟವರಿಗೆ ದೊರೆಯಿತು. ವಿುಕ್ಕವರು ಮೊಂಡರಾದರು.


ಅವನ ವಿಷಯವಾಗಿ - ಅವನ ಮನೆ ಹಾಳುಬೀಳಲಿ, ಅದು ಜನಶೂನ್ಯವಾಗಲಿ ಎಂತಲೂ ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದದೆ.


ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆಹೊಂದಿದ್ದೀರೋ


ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ; ಹಾಗೆ ಆತನ ವಿಷಯವಾಗಿ ಬರೆದದೆಯಲ್ಲಾ. ಆದರೆ ಯಾವನು ಮನುಷ್ಯಕುಮಾರನನ್ನು ಹಿಡುಕೊಡುವನೋ ಅವನ ಗತಿಯನ್ನು ಏನು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಅವನಿಗೆ ಒಳ್ಳೇದಾಗಿತ್ತು ಅಂದನು.


ನನ್ನ ವಿಷಯದಲ್ಲಿ ನೇಮಕವಾದದ್ದನ್ನು ಪೂರೈಸುವನಷ್ಟೆ, ಆತನಲ್ಲಿ ಇಂಥಾ ಸಂಕಲ್ಪಗಳು ಅನೇಕವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು