Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:32 - ಕನ್ನಡ ಸತ್ಯವೇದವು J.V. (BSI)

32 ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಸಂತಾನದವರು - ಜಿಮ್ರಾನ್, ಯೊಕ್ಷಾನ್, ಮೆದಾನ್, ವಿುದ್ಯಾನ್, ಇಷ್ಬಾಕ್, ಶೂಹ ಎಂಬವರು. ಯೊಕ್ಷಾನನು, ಶೆಬ, ದೆದಾನ್ ಎಂಬವರನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಸಂತಾನದವರು: ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್ ಮತ್ತು ಶೂಹ ಎಂಬವರು. ಯೊಕ್ಷಾನನು ಶೆಬಾ ಮತ್ತು ದೆದಾನ್ ಎಂಬವರನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅಬ್ರಹಾಮನಿಗೆ ಕೆಟೂರಳೆಂಬ ಉಪಪತ್ನಿ ಇದ್ದಳು. ಇವಳಿಂದ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬ ಆರು ಜನ ಮಕ್ಕಳು ಜನಿಸಿದರು. ಯೊಕ್ಷಾನ್‍ನಿಗೆ ಶೆಬಾ ಮತ್ತು ದೆದಾನ್ ಎಂಬಿಬ್ಬರು ಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಕೆಟೂರಳು ಅಬ್ರಹಾಮನ ದಾಸಿಯಾಗಿದ್ದಳು. ಆಕೆಗೆ ಅಬ್ರಹಾಮನಲ್ಲಿ ಹುಟ್ಟಿದ ಗಂಡುಮಕ್ಕಳು ಯಾರೆಂದರೆ: ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್ ಮತ್ತು ಶೂಹ. ಯೊಕ್ಷಾನನ ಮಕ್ಕಳು ಯಾರೆಂದರೆ: ಶೆಬ ಮತ್ತು ದೆದಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅಬ್ರಹಾಮನಿಗೆ ಕೆಟೂರಳೆಂಬ ಉಪಪತ್ನಿ ಇದ್ದಳು. ಅವಳಿಂದ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬ ಆರು ಜನ ಮಕ್ಕಳು ಜನಿಸಿದರು. ಯೊಕ್ಷಾನನಿಗೆ ಶೆಬಾ ಮತ್ತು ದೆದಾನ್ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:32
19 ತಿಳಿವುಗಳ ಹೋಲಿಕೆ  

ದೆದಾನಿನವರು ಹಲ್ಲಣಕ್ಕೆ ಸರಿಯಾದ ಒಳ್ಳೆಯ ಜಮಖಾನೆಗಳನ್ನು ನಿನಗೋಸ್ಕರ ತರುವ ವ್ಯಾಪಾರಿಗಳಾಗಿದ್ದರು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಎದೋವಿುನ ಮೇಲೆ ಕೈಯೆತ್ತಿ ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.


ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.


ಸಮುದ್ರದ ಆಚಿನ ಕರಾವಳಿಯ ಅರಸರು, ದೆದಾನ್ಯರು, ತೇಮಾದೇಶದವರು, ಬೂಜ್‍ದೇಶದವರು, ಚಂಡಿಕೆಬಿಟ್ಟುಕೊಂಡಿರುವವರೆಲ್ಲರು,


ಉಷ್ಟ್ರಸಮೂಹವೂ ವಿುದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಆ ಸ್ವಾರ್ಥವಾಹರೆಲ್ಲಾ ಕನಕವನ್ನೂ ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.


ಅರಬಿಯ ವಿಷಯವಾದ ದೈವೋಕ್ತಿ. ಸಾರ್ಥವಾಹರಾದ ದೇದಾನ್ಯರೇ, ಮರುಭೂವಿುಯ ಪೊದೆಗಳಲ್ಲಿ ಇಳಿದುಕೊಳ್ಳಿರಿ.


ಅವನು ಬಾಳಲಿ; ಶೆಬಾ ಪ್ರಾಂತದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳುಂಟಾಗಲಿ.


ತಾರ್ಷೀಷ್‍ಪ್ರಾಂತದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ತೇಮದ ಗುಂಪಿನವರು ಕಣ್ಣೆತ್ತಿ ನೋಡಿದರು, ಶೆಬದ ಸಮೂಹದವರು ಆ ತೊರೆಗಳನ್ನು ಹಾರೈಸಿದರು.


ಯೆಹೋವನಾಮ ಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬದ ರಾಣಿಯು ಕೇಳಿ ಅವನನ್ನು ಒಗಟುಗಳಿಂದ ಪರೀಕ್ಷಿಸುವದಕ್ಕೆ ಬಂದಳು.


ಇಸ್ರಾಯೇಲ್ಯರ ವರ್ಗಸಮೂಹದವರು ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಅಳುತ್ತಿರುವಾಗ ಇಸ್ರಾಯೇಲ್ಯನಾದ ಒಬ್ಬ ಮನುಷ್ಯನು ಮೋಶೆಗೂ ಸರ್ವಸಮೂಹದವರಿಗೂ ಎದುರಾಗಿಯೇ ಒಬ್ಬ ವಿುದ್ಯಾನ್ ಸ್ತ್ರೀಯನ್ನು ತನ್ನ ಕುಲದವರ ಬಳಿಗೆ ಕರಕೊಂಡು ಬರುವದನ್ನು ಕಂಡರು.


(ಅಷ್ಟರಲ್ಲಿ ವಿುದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು.) ಅವರು ಯೋಸೇಫನನ್ನು ಗುಂಡಿಯೊಳಗಿಂದ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ರೂಪಾಯಿಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು.


ಇಷ್ಮಾಯೇಲನ ಸಂತಾನದವರು ಇವರೇ.


ಏಫ, ಏಫೆರ್, ಹನೋಕ್, ಅಬೀದ, ಎಲ್ದಾಯ ಎಂಬಿವರು ವಿುದ್ಯಾನನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು