Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 10:12 - ಕನ್ನಡ ಸತ್ಯವೇದವು J.V. (BSI)

12 ಅವರಲ್ಲಿದ್ದ ಶೂರರೆಲ್ಲರೂ ಹೊರಟುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಯಾಬೇಷಿಗೆ ತೆಗೆದುಕೊಂಡು ಬಂದು ಅವರ ಎಲುಬುಗಳನ್ನು ಅಲ್ಲಿದ್ದ ಏಲಾವೃಕ್ಷದ ಕೆಳಗೆ ಸಮಾಧಿಮಾಡಿ ಏಳು ದಿವಸ ಉಪವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಅವರಲ್ಲಿರುವ ಶೂರರೆಲ್ಲರೂ ಹೊರಟುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಯಾಬೇಷಿಗೆ ತೆಗೆದುಕೊಂಡು ಬಂದು, ಅವರ ಎಲುಬುಗಳನ್ನು ಅಲ್ಲಿದ್ದ ಏಲಾ ಮರದ ಕೆಳಗೆ ಸಮಾಧಿ ಮಾಡಿ, ಏಳು ದಿನಗಳ ವರೆಗೆ ಉಪವಾಸ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರಲ್ಲಿ ಅತೀ ಶೂರರಾದವರು ಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ತೆಗೆದುಕೊಂಡು ಯಾಬೇಷಿಗೆ ಬಂದರು. ಅಲ್ಲಿ ಅವುಗಳನ್ನು ಏಲಾ ಮರದ ಕೆಳಗೆ ಸಮಾಧಿಮಾಡಿ ಏಳು ದಿನ ಉಪವಾಸ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಯಾಬೇಷ್ ಗಿಲ್ಯಾದಿನ ರಣವೀರರು ಹೊರಟು ಸೌಲನ ಮತ್ತು ಅವನ ಗಂಡುಮಕ್ಕಳ ಶವಗಳನ್ನು ಯಾಬೇಷ್ ಗಿಲ್ಯಾದಿಗೆ ತಂದರು. ಆ ರಣವೀರರು ಸೌಲನ ಮತ್ತು ಅವನ ಗಂಡುಮಕ್ಕಳ ಎಲುಬುಗಳನ್ನು ಯಾಬೇಷಿನಲ್ಲಿದ್ದ ಒಂದು ದೊಡ್ಡ ಮರದ ಬುಡದಲ್ಲಿ ಹೂಳಿಟ್ಟರು. ಅನಂತರ ಏಳು ದಿವಸಗಳ ತನಕ ಅವರು ಶೋಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶವವನ್ನೂ, ಅವನ ಪುತ್ರರ ಶವಗಳನ್ನೂ ತೆಗೆದುಕೊಂಡು ಯಾಬೇಷಿಗೆ ಬಂದು, ಅವರ ಎಲುಬುಗಳನ್ನು ತೆಗೆದುಕೊಂಡು, ಅವುಗಳನ್ನು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಸಮಾಧಿಮಾಡಿ, ಏಳು ದಿವಸ ಉಪವಾಸ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 10:12
10 ತಿಳಿವುಗಳ ಹೋಲಿಕೆ  

ಸೂರ್ಯಾಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು - ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ ಬೇರೆ ಯಾವದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದು ಮಾಡಲಿ ಎಂದು ಆಣೆಯಿಟ್ಟು ಹೇಳಿದನು.


ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಗೋಳಾಡಿಸಿದನು.


ಅಲ್ಲಿ ರೆಬೆಕ್ಕಳ ದಾದಿಯಾದ ದೆಬೋರಳು ಸತ್ತುಹೋಗಲು ಅವರು ಆಕೆಗೆ ಬೇತೇಲಿನ ತಗ್ಗಿನಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿ ಅದಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು.


ಆದದರಿಂದ ಯೆಹೂದ್ಯರಲ್ಲಿ ಅನೇಕರು ಮಾರ್ಥಳ ಮತ್ತು ಮರಿಯಳ ಬಳಿಗೆ ಅವರನ್ನು ತಮ್ಮನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.


ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಕ್ಷೇತ್ರದಲ್ಲಿರುವ ಮೋರೆಯೆಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.


ಅವರಲ್ಲಿದ್ದ ಶೂರರೆಲ್ಲರೂ ಹೊರಟು ರಾತ್ರಿಯೆಲ್ಲಾ ನಡೆದುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ಷೆಯಾನಿನ ಗೋಡೆಯಿಂದ ಇಳಿಸಿ ಯಾಬೇಷಿಗೆ ತೆಗೆದುಕೊಂಡು ಬಂದು ಅಲ್ಲಿ ಅವುಗಳನ್ನು ಸುಟ್ಟುಬಿಟ್ಟರು.


ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರ್ತಮಾನವು ಯಾಬೇಷ್ ಗಿಲ್ಯಾದಿನವರಿಗೆ ಮುಟ್ಟಿದಾಗ


ಅಮ್ಮೋನಿಯನಾದ ನಾಹಾಷನು ಹೊರಟುಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆಹಾಕಲು ಯಾಬೇಷಿನವರು ಅವನನ್ನು - ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನ ಸೇವಕರಾಗಿರುವೆವು ಎಂದು ಬೇಡಿಕೊಂಡರು.


ಇವರು ಬಂದಿದ್ದ ದೂತರಿಗೆ - ನಾಳೆ ಮಧ್ಯಾಹ್ನದಲ್ಲಿ ನಿಮಗೆ ಸಹಾಯಸಿಕ್ಕುವದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ ಎಂದು ಹೇಳಿ ಅವರನ್ನು ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು