Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 10:13 - ಕನ್ನಡ ಸತ್ಯವೇದವು J.V. (BSI)

13 ಸೌಲನು ಯೆಹೋವನ ಮಾತನ್ನು ಕೇಳದೆ ಆತನಿಗೆ ವಿರೋಧವಾಗಿ ದ್ರೋಹಮಾಡಿದ್ದರಿಂದಲೂ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೆ ಪ್ರೇತಸಿದ್ಧರಲ್ಲಿ ವಿಚಾರಿಸಿದ್ದರಿಂದಲೂ ಅವನಿಗೆ ಇಂಥ ಮರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸೌಲನು ಸರ್ವೇಶ್ವರನಿಗೆ ಅವಿಧೇಯನಾದ್ದರಿಂದ ಮರಣ ಹೊಂದಿದನು. ಅವನು ಸರ್ವೇಶ್ವರನ ಆಜ್ಞೆಗಳನ್ನು ಮೀರಿದನು; ಸರ್ವೇಶ್ವರನನ್ನು ವಿಚಾರಿಸದೆ ಭೂತಪ್ರೇತಗಳನ್ನು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸೌಲನು ಯೆಹೋವನಿಗೆ ಅವಿಧೇಯನಾಗಿದ್ದರಿಂದ ಸತ್ತನು. ಅವನು ಯೆಹೋವನ ಮಾತನ್ನು ಕೇಳದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೀಗೆಯೇ ಸೌಲನು ಯೆಹೋವ ದೇವರಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಯೆಹೋವ ದೇವರ ವಾಕ್ಯವನ್ನು ಕೈಗೊಳ್ಳದೆ, ಅದಕ್ಕೆ ವಿರೋಧವಾಗಿ ನಡೆದು, ಯೆಹೋವ ದೇವರನ್ನು ವಿಚಾರಿಸದೆ, ಯಕ್ಷಿಣಿಗಾರರನ್ನು ವಿಚಾರಿಸಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 10:13
18 ತಿಳಿವುಗಳ ಹೋಲಿಕೆ  

ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.


ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವದು; ಹಟವು ವಿುಥ್ಯಾಭಕ್ತಿಗೂ ವಿಗ್ರಹಾರಾಧನೆಗೂ ಸಮಾನವಾಗಿರುವದು. ನೀನು ಯೆಹೋವನ ಮಾತನ್ನು ತಳ್ಳಿಬಿಟ್ಟದ್ದರಿಂದ ಆತನು ನಿನ್ನನ್ನು ಅರಸುತನದಿಂದ ತಳ್ಳಿಬಿಟ್ಟಿದ್ದಾನೆ ಎಂದು ನುಡಿದನು.


ಲೊಚಗುಟ್ಟುವ ಪಿಟಿಪಿಟಿಗುಟ್ಟುವ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸಿರಿ ಎಂದು ಒಂದು ವೇಳೆ ನಿಮಗೆ ಹೇಳಾರು. ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವದು ಯುಕ್ತವೋ?


ಸೇನಾಧೀಶ್ವರನಾದ ಯೆಹೋವನು ನಿನಗೆ - ಇಸ್ರಾಯೇಲ್ಯರು ಐಗುಪ್ತದಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು.


ಮಾಟಗಾರ್ತಿಯನ್ನು ಬದುಕಲೀಸಬಾರದು.


ಇದಲ್ಲದೆ ಅವನು ತನ್ನ ಮಗನನ್ನು ಆಹುತಿಕೊಟ್ಟನು. ಕಣಿಹೇಳಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೈತಾಳಿಕರ ಬಳಿಕೆ ಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ ಆತನು ಅವನಿಗೆ ಕನಸುಗಳಿಂದಾಗಲಿ ಊರೀವಿುನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲೇ ಇಲ್ಲ.


ಐಗುಪ್ತದ ಅಂತರಾತ್ಮವು ಬರಿದಾಗುವದು; ಅದರ ಆಲೋಚನೆಯನ್ನು ಭಂಗಪಡಿಸುವೆನು; ಅಲ್ಲಿಯವರು ವಿಗ್ರಹಗಳನ್ನೂ ಮಂತ್ರಗಾರರನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸುವರು.


ವೃಥಾದ್ರೋಹಿಗಳಿಗೆ ಆಶಾಭಂಗವಾಗಬೇಕೇ ಹೊರತು ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.


ಇಗೋ, ನಿನ್ನನ್ನು ಬಿಟ್ಟವರು ನಾಶವಾಗುವರು; ನಿನಗೆ ದ್ರೋಹಮಾಡಿದವರೆಲ್ಲರನ್ನು ನಿರ್ಮೂಲ ಮಾಡುತ್ತೀ.


ದುಷ್ಟರಾದರೋ ದೇಶದೊಳಗಿಂದ ಕೀಳಲ್ಪಡುವರು, ದ್ರೋಹಿಗಳು ನಿರ್ಮೂಲರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು