Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:39 - ಕನ್ನಡ ಸತ್ಯವೇದವು J.V. (BSI)

39 ಅವರು ಅಲ್ಲಿ ಮೂರು ದಿವಸ ದಾವೀದನ ಸಂಗಡ ಇದ್ದು ಅನ್ನಪಾನಗಳನ್ನು ತೆಗೆದುಕೊಂಡರು; ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವರು ಅಲ್ಲಿ ಮೂರು ದಿನ ದಾವೀದನ ಸಂಗಡ ಇದ್ದು ಅನ್ನ ಪಾನಗಳನ್ನು ತೆಗೆದುಕೊಂಡರು. ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅವರುದಾವೀದನೊಂದಿಗೆ, ತಮ್ಮ ಸಹಬಾಂಧವರು ಸಿದ್ಧಪಡಿಸಿದ ಆಹಾರ ಪಾನೀಯಗಳನ್ನು ಸೇವಿಸುತ್ತಾ, ಮೂರು ದಿನಗಳನ್ನು ಕಳೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಈ ಜನರೆಲ್ಲಾ ದಾವೀದನೊಂದಿಗೆ ಮೂರು ದಿನಗಳನ್ನು ಕಳೆದರು. ಅವರ ಕುಟುಂಬದವರು ತಯಾರಿಸಿದ ಆಹಾರವನ್ನು ಅವರು ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಅವರ ಕುಟುಂಬದವರು ಅವರಿಗೋಸ್ಕರ ಸಿದ್ಧಮಾಡಿದ ಆಹಾರವನ್ನು ತಿನ್ನುತ್ತಾ, ಕುಡಿಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:39
8 ತಿಳಿವುಗಳ ಹೋಲಿಕೆ  

ಅದಕ್ಕೆ ಯೆಹೂದ್ಯರೆಲ್ಲರೂ - ಅರಸನು ನಮಗೆ ಸಮೀಪಬಂಧು; ನೀವು ಅದಕ್ಕಾಗಿ ಉರಿಗೊಳ್ಳುವದೇಕೆ? ನಾವೇನು ಅರಸನ ಖರ್ಚಿನಿಂದ ಊಟಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ ಎಂದು ಉತ್ತರಕೊಟ್ಟರು.


ಸಭೆಯಾಗಿ ನೆರೆದು ಬಂದಿರುವ ಇಸ್ರಾಯೇಲ್ಯರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ದ್ರಾಕ್ಷೇ ಹಣ್ಣಿನ ಉಂಡೆಯನ್ನೂ ಕೊಡಿಸಿದನು. ತರುವಾಯ ಜನರೆಲ್ಲರೂ ತಮ್ಮತಮ್ಮ ಮನೆಗಳಿಗೆ ಹೋದರು.


ಇದಲ್ಲದೆ ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಸಹಭೋಜನಕ್ಕೆ ಕರಸಿದನು. ಅವರು ಸಹಭೋಜನ ಮಾಡಿ ಆ ರಾತ್ರಿಯೆಲ್ಲಾ ಬೆಟ್ಟದ ಮೇಲೆ ಇದ್ದರು.


ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು; ಅವರೆಲ್ಲರೂ ಭೋಜನೋಪಚಾರಗಳನ್ನು ತೀರಿಸಿಕೊಂಡು


ದಾವೀದನನ್ನು ಇಸ್ರಾಯೇಲ್ಯರೆಲ್ಲರ ಅರಸನನ್ನಾಗಿ ಮಾಡುವದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲ್ಯರು ದಾವೀದನಿಗೆ ರಾಜ್ಯಾಭಿಷೇಕ ಮಾಡುವದರಲ್ಲಿ ಏಕಮನಸ್ಸುಳ್ಳವರಾಗಿದ್ದರು.


ಇದಲ್ಲದೆ ಇಸ್ಸಾಕಾರ್ ಜೆಬುಲೂನ್ ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತಗಳವರು ಎತ್ತು, ಕತ್ತೆ, ಹೇಸರಕತ್ತೆ, ಒಂಟೆ ಇವುಗಳ ಮೇಲೆ ಆಹಾರಪದಾರ್ಥಗಳನ್ನು ಹೇರಿಕೊಂಡು ಬಂದರು. ಅವರು ತಂದವುಗಳಾವವಂದರೆ - ತರತರದ ರೊಟ್ಟಿ, ಅಂಜೂರ ಹಣ್ಣಿನ ಉಂಡೆ, ಒಣಗಿದ ದ್ರಾಕ್ಷೇಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವೇ. ಇಸ್ರಾಯೇಲ್ಯರೊಳಗೆ ಮಹಾ ಸಂತೋಷವಿತ್ತಷ್ಟೆ.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು ಯೆಹೋವನ ಆಜ್ಞಾನುಸಾರವಾಗಿ ಇಸ್ರಾಯೇಲ್ಯರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು