Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:10 - ಕನ್ನಡ ಸತ್ಯವೇದವು J.V. (BSI)

10 ಉಜ್ಜನು ಮಂಜೂಷದ ಮೇಲೆ ಕೈ ಹಾಕಿದ್ದರಿಂದ ಯೆಹೋವನು ಅವನ ಮೇಲೆ ಕೋಪಗೊಂಡು ಅವನನ್ನು ಹತಮಾಡಿದನು; ಅವನು ಅಲ್ಲೇ ದೇವರ ಮುಂದೆ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಉಜ್ಜನು ಮಂಜೂಷದ ಮೇಲೆ ಕೈಹಾಕಿದ್ದರಿಂದ ಯೆಹೋವನು ಅವನ ಮೇಲೆ ಕೋಪಗೊಂಡು ಅವನನ್ನು ಹತಮಾಡಿದನು. ಅವನು ಅಲ್ಲೇ ದೇವರ ಸನ್ನಿಧಿಯಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮಂಜೂಷವನ್ನು ಮುಟ್ಟಿದ್ದಕ್ಕಾಗಿ ಕೂಡಲೇ ಸರ್ವೇಶ್ವರ ಉಜ್ಜನ ಮೇಲೆ ಉಗ್ರಕೋಪ ತಾಳಿ ಅವನನ್ನು ಕೊಂದುಹಾಕಿದರು. ದೇವರ ಸನ್ನಿಧಿಯಲ್ಲಿಯೇ ಅವನು ಮರಣ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಯೆಹೋವನು ಅವನ ಮೇಲೆ ಕೋಪಗೊಂಡು ಆ ಪವಿತ್ರವಾದ ಪೆಟ್ಟಿಗೆಯನ್ನು ಮುಟ್ಟಿದ್ದಕ್ಕೆ ಅವನನ್ನು ಅಲ್ಲಿಯೇ ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಉಜ್ಜನು ಮಂಜೂಷದ ಮೇಲೆ ಕೈ ಹಾಕಿದ್ದರಿಂದ ಯೆಹೋವ ದೇವರು ಉಜ್ಜನ ಮೇಲೆ ಕೋಪಗೊಂಡು ಅವನನ್ನು ಶಿಕ್ಷಿಸಿದರು. ಅವನು ಅಲ್ಲಿಯೇ ದೇವರ ಮುಂದೆ ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:10
10 ತಿಳಿವುಗಳ ಹೋಲಿಕೆ  

ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾನುಸಾರವಾಗಿ ಲೇವಿಯರು ದೇವಮಂಜೂಷಕ್ಕೆ ಕೋಲುಗಳನ್ನು ಸಿಕ್ಕಿಸಿ ಅದನ್ನು ಹೆಗಲಿನ ಮೇಲೆ ಹೊತ್ತುಕೊಂಡರು.


ನೀವು ಮೊದಲನೆಯ ಸಾರಿ ಇರಲಿಲ್ಲವಾದದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ಬಂದ ನಮ್ಮಲ್ಲಿ ಒಬ್ಬನನ್ನು ಸಂಹರಿಸಿದನಷ್ಟೆ ಎಂದು ಹೇಳಲು


ದಂಡು ಹೊರಡುವ ಕಾಲದಲ್ಲಿ ಆರೋನನೂ ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದನಂತರ ಕೆಹಾತ್ಯರು ಅವುಗಳನ್ನು ಹೊರುವದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು; ಮುಟ್ಟಿದರೆ ಸತ್ತಾರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.


ಬೇತ್‍ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಹಣಿಕಿನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಇದಲ್ಲದೆ ಐವತ್ತು ಸಾವಿರ ಜನರು ಮರಣಹೊಂದಿದರು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನುಂಟುಮಾಡಿದದರಿಂದ ಬೇತ್‍ಷೆಮೆಷಿನವರು ಗೋಳಾಡಿ -


ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ - ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ; ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಯೆಹೋವನ ಮಂಜೂಷದ ಮುಂದೆ ನಡೆಯಲಿ ಅಂದನು.


ಮತ್ತು ಯೆಹೋವನ ಬಳಿಯಿಂದ ಬೆಂಕಿ ಹೊರಟು ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ಭಸ್ಮ ಮಾಡಿತು.


ಯೆಹೋವನು ಉಜ್ಜನನ್ನು ಮುರಿದುಬಿಟ್ಟದ್ದರಿಂದ ದಾವೀದನು ಉರಿಗೊಂಡು ಆ ಸ್ಥಳಕ್ಕೆ ಪೆರೆಚ್ಉಜ್ಜ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು