Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 14:1 - ಕನ್ನಡ ಸತ್ಯವೇದವು J.V. (BSI)

1 ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವದಕ್ಕೋಸ್ಕರ ದೂತರನ್ನೂ ದೇವದಾರು ಮರಗಳನ್ನೂ ಶಿಲ್ಪಿಗಳನ್ನೂ ಬಡಗಿಯವರನ್ನೂ ಅವನ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನೂ, ದೇವದಾರುಮರಗಳನ್ನೂ, ಶಿಲ್ಪಿಗಳನ್ನೂ ಮತ್ತು ಬಡಗಿಗಳನ್ನು ಅವನ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಟೈರಿನ ಅರಸ ಹೀರಾಮನು ದಾವೀದನ ಬಳಿಗೆ ತನ್ನ ವಾಣಿಜ್ಯ ನಿಯೋಗವನ್ನು ಕಳುಹಿಸಿದನು. ಅರಮನೆಯನ್ನು ಕಟ್ಟಲು ಅವನಿಗೆ ದೇವದಾರು ಮರದ ದಿಮ್ಮಿಗಳನ್ನು, ಶಿಲ್ಪಿಗಳನ್ನು ಹಾಗು ಬಡಗಿಯವರನ್ನು ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತೂರ್ ಪಟ್ಟಣದ ರಾಜನಾದ ಹೀರಾಮನು ದಾವೀದನ ಬಳಿಗೆ ತನ್ನ ಸಂದೇಶಕರನ್ನು ಕಳುಹಿಸಿದನು. ಇವರೊಂದಿಗೆ ದೇವದಾರು ಮರದ ತೊಲೆಗಳನ್ನು, ಕಲ್ಲುಕುಟಿಗರನ್ನು ಮತ್ತು ಬಡಗಿಯರನ್ನು ಕಳುಹಿಸಿದನು. ದಾವೀದನಿಗೊಂದು ಮನೆಯನ್ನು ಕಟ್ಟಲು ಇವರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಟೈರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 14:1
16 ತಿಳಿವುಗಳ ಹೋಲಿಕೆ  

ಆದರೆ ಪಾರಸಿಯ ರಾಜನಾದ ಕೋರೆಷನಿಂದ ಪಡಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗ ಬಡಗಿ ಇವರಿಗೆ ಹಣವನ್ನೂ ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರುಮರಗಳನ್ನು ತರತಕ್ಕ ಚೀದೋನ್ಯರು, ತೂರ್ಯರು ಇವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.


ಇದಲ್ಲದೆ ಅವನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೂರಾಮನಿಗೆ - ನನ್ನ ತಂದೆಯಾದ ದಾವೀದನು ತನ್ನ ವಾಸಕ್ಕೋಸ್ಕರ ಅರಮನೆಯನ್ನು ಕಟ್ಟಿಸಿಕೊಳ್ಳುವದಕ್ಕಾಗಿ ನೀನು ಅವನಿಗೆ ದೇವದಾರುಮರಗಳನ್ನು ಕಳುಹಿಸಿದಿಯಲ್ಲಾ.


ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಕೂಡಿಸುವದಕ್ಕೆ ಆಜ್ಞಾಪಿಸಿ ಅವರಲ್ಲಿದ್ದ ಕಲ್ಲು ಕುಟಿಗರನ್ನು ದೇವಾಲಯ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವದಕ್ಕೆ ನೇವಿುಸಿದನು.


ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿವಸ ಪ್ರವಾದಿಯಾದ ನಾತಾನನಿಗೆ - ನೋಡು, ನಾನು ದೇವದಾರುಮರದ ಮನೆಯಲ್ಲಿ ವಾಸವಾಗಿದ್ದೇನೆ; ಯೆಹೋವನ ನಿಬಂಧನ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ ಎಂದು ಹೇಳಿದನು.


ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವದಕ್ಕಾಗಿ ಬೇಕಾದ ಕಲ್ಲು ಮರಗಳನ್ನು ಸಿದ್ಧಪಡಿಸಿದವರು ಇವರೇ.


ಆದದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು; ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯರಂತೆ ಮರ ಕೊಯ್ಯುವದರಲ್ಲಿ ಜಾಣರು ನಮ್ಮಲ್ಲಿರುವದಿಲ್ಲವೆಂದು ನಿನಗೆ ಗೊತ್ತುಂಟಲ್ಲಾ ಎಂದು ಹೇಳಿಸಿದನು.


ದಾವೀದನ ಜೀವಮಾನದಲ್ಲೆಲ್ಲಾ ಅವನ ವಿುತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ತಂದೆಗೆ ಬದಲಾಗಿ ಅಭಿಷೇಕಿಸಲ್ಪಟ್ಟನೆಂದು ಕೇಳಿದಾಗ ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.


ಒಂದು ದಿವಸ ಪ್ರವಾದಿಯಾದ ನಾತಾನನಿಗೆ - ನೋಡು, ನಾನು ದೇವದಾರುಮರದ ಮನೆಯಲ್ಲಿ ವಾಸವಾಗಿದ್ದೇನೆ; ದೇವರ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ ಎಂದು ಹೇಳಿದನು.


ಇದರಿಂದ ದಾವೀದನು ದೇವಪ್ರಜೆಗಳಾದ ಇಸ್ರಾಯೇಲ್ಯರ ನಿವಿುತ್ತವಾಗಿ ತನ್ನ ರಾಜ್ಯವು ಉನ್ನತಸ್ಥಾನಕ್ಕೆ ಮುಟ್ಟಿದ್ದನ್ನು ನೋಡಿ ಯೆಹೋವನು ತನ್ನನ್ನು ಇಸ್ರಾಯೇಲ್ ರಾಜನನ್ನಾಗಿ ಸ್ಥಿರಪಡಿಸಿದನೆಂದು ತಿಳಿದುಕೊಂಡನು.


ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಮಂದಿ ಹೊರೆಹೊರುವವರೂ ಎಂಭತ್ತು ಸಾವಿರ ಮಂದಿ ಕಲ್ಲುಗಣಿಯಲ್ಲಿ ಕೆಲಸ ಮಾಡುವವರೂ ಇದ್ದರು.


ಎಪ್ಪತ್ತುಸಾವಿರ ಮಂದಿ ಹೊರೆಹೊರುವವರನ್ನೂ ಎಂಭತ್ತು ಸಾವಿರ ಮಂದಿ ಕಲ್ಲುಗಣಿಯಲ್ಲಿ ಕೆಲಸಮಾಡುವವರನ್ನೂ ಇವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರು ನೂರು ಮಂದಿ ಮೇಸ್ತ್ರಿಗಳನ್ನೂ ಲೆಕ್ಕಿಸಿ ನೇವಿುಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು