Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 14:10 - ಕನ್ನಡ ಸತ್ಯವೇದವು J.V. (BSI)

10 ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ ಎಂದು ಕೇಳಲು ಆತನು - ಹೋಗು, ನಾನು ಅವರನ್ನು ನಿನ್ನ ಕೈಗೆ ಒಪ್ಪಿಸುವೆನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದಾವೀದನು ದೇವರಾದ ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಅವರನ್ನು ನಿನ್ನ ಕೈಗೆ ಒಪ್ಪಿಸುವೆನು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಫಿಲಿಷ್ಟಿಯರ ಮೇಲೆ ನಾನು ದಾಳಿಮಾಡಬಹುದೊ? ನೀವು ನನಗೆ ಜಯವನ್ನು ಕೊಡುವಿರೋ", ಎಂದು ದಾವೀದನು ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸಿದನು. “ಹೌದು, ಅವರನ್ನು ಎದುರಿಸು, ನಾನು ನಿನಗೆ ಜಯವನ್ನು ಕೊಡುವೆನು,” ಎಂದು ಸರ್ವೇಶ್ವರ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದಾವೀದನು ಯೆಹೋವನಿಗೆ, “ನಾನು ಫಿಲಿಷ್ಟಿಯರ ಸಂಗಡ ಯುದ್ಧಕ್ಕೆ ಹೋಗಬಹುದೇ?” ಎಂದು ವಿಚಾರಿಸಲಾಗಿ ಯೆಹೋವನು ಅವನಿಗೆ, “ಹೋಗು, ನಾನು ನಿನಗೆ ಫಿಲಿಷ್ಟಿಯರ ಮೇಲೆ ಜಯ ಕೊಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ದಾವೀದನು, “ನಾನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಬಹುದೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವಿರೋ?” ಎಂದು ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು ಅವನಿಗೆ, “ಹೋಗು, ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 14:10
14 ತಿಳಿವುಗಳ ಹೋಲಿಕೆ  

ನಿನ್ನ ಎಲ್ಲಾ ನಡವಳಿಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.


ದಾವೀದನು ತಿರಿಗಿ ದೇವರ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ - ನೀನು ಅವರನ್ನು ಬೆನ್ನಟ್ಟಬೇಡ; ಅವರ ಎದುರಿನಿಂದ ತಿರುಗಿಕೊಂಡು ಹೋಗಿ ಬಾಕಾಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.


ಅವರು ನಮ್ಮ ಬಳಿಗೆ ಕೂಡಿಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ ನಮ್ಮ ದೇವಮಂಜೂಷವನ್ನು ತೆಗೆದುಕೊಂಡು ಬರೋಣ ಅನ್ನಲು


ಆಗ ಇಸ್ರಾಯೇಲ್ಯರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ ಅವರನ್ನು - ನಾನು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವರು - ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು.


ದಾವೀದನು ಯೆಹೋವನನ್ನು - ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿ ಕೊಡುವಿಯೋ ಎಂದು ಕೇಳಲು ಆತನು - ಹೋಗು, ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸುವೆನು ಎಂದು ಉತ್ತರಕೊಟ್ಟದರಿಂದ


ಅನಂತರ ದಾವೀದನು ಯೆಹೋವನನ್ನು - ನಾನು ಯೆಹೂದದೇಶದ ಯಾವದಾದರೊಂದು ಪಟ್ಟಣಕ್ಕೆ ಹೋಗಬಹುದೋ ಎಂದು ಕೇಳಲು ಆತನು - ಹೋಗಬಹುದು ಅಂದನು. ಅವನು ತಿರಿಗಿ - ಯಾವ ಊರಿಗೆ ಹೋಗಲಿ ಎಂದು ಕೇಳಿದ್ದಕ್ಕೆ - ಹೆಬ್ರೋನಿಗೆ ಹೋಗು ಎಂಬ ಉತ್ತರ ಸಿಕ್ಕಿತು.


ಆಗ ದಾವೀದನು ಯೆಹೋವನನ್ನು - ನಾನು ಆ ಗುಂಪನ್ನು ಹಿಂದಟ್ಟಬಹುದೋ? ಅದು ನನಗೆ ಸಿಕ್ಕುವದೋ ಎಂದು ಕೇಳಲು ಅತನು - ಹಿಂದಟ್ಟು, ಅದು ನಿನಗೆ ಸಿಕ್ಕುವದು; ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ ಎಂದು ಉತ್ತರಕೊಟ್ಟನು.


ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ - ನೀನು ನೆಟ್ಟಗೆ ಹೋಗಿ ಅವರ ಮೇಲೆ ಬೀಳಬೇಡ; ಅವರ ಹಿಂದಳವನ್ನು ಸುತ್ತಿಕೊಂಡು ಹೋಗಿ ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.


ಫಿಲಿಷ್ಟಿಯರು ದೇಶದೊಳಗೆ ನುಗ್ಗಿ ರೆಫಾಯೀಮ್ ತಗ್ಗಿನಲ್ಲಿ ಸುಲಿಗೆ ಮಾಡುತ್ತಿದ್ದದರಿಂದ ದಾವೀದನು ದೇವರಾದ ಯೆಹೋವನನ್ನು -


ಅಷ್ಟರಲ್ಲಿ ಬಾಳ್‍ಪೆರಾಚೀವಿುಗೆ ಬಂದ ಅವರನ್ನು ದಾವೀದನು ಸೋಲಿಸಿ - ಯೆಹೋವನು ಕಟ್ಟೆಯೊಡೆದ ಪ್ರವಾಹದಂತೆ ನನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ನನ್ನ ಮುಖಾಂತರವಾಗಿ ನಾಶಮಾಡಿದ್ದಾನೆಂದು ಹೇಳಿದ್ದರಿಂದ ಆ ಯುದ್ಧಸ್ಥಳಕ್ಕೆ ಬಾಳ್‍ಪೆರಾಚೀಮೆಂದು ಹೆಸರಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು