Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 14:15 - ಕನ್ನಡ ಸತ್ಯವೇದವು J.V. (BSI)

15 ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳವು ಕೇಳಿಸುವಾಗಲೇ ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬಾಕಾಮರಗಳ ತುದಿಯಲ್ಲಿ ಹೆಜ್ಜೆಗಳ ಶಬ್ದವು ಕೇಳಿಸುವಾಗಲೇ ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನನ್ನು ಮುನ್ನಡೆಸುತ್ತಿದ್ದಾನೆ ಎಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳುವಾಗ, ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕಾಗಿ ನನಗೆ ಮುಂದಾಗಿ ಹೊರಟಿದ್ದಾರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದು ಸರ್ವೇಶ್ವರ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಒಬ್ಬ ಕಾವಲುಗಾರನನ್ನು ಮರಕ್ಕೆ ಹತ್ತಿಸು; ಫಿಲಿಷ್ಟಿಯರು ಬರುವ ಸಪ್ಪಳ ಕೇಳಿದೊಡನೆ ಅವರ ಮೇಲೆ ದಾಳಿಮಾಡು. ನಾನು ನಿನ್ನ ಮುಂದಾಗಿ ಹೋಗಿ ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 14:15
16 ತಿಳಿವುಗಳ ಹೋಲಿಕೆ  

ಆಗ ಬಿರುಗಾಳಿ ಬೀಸುತ್ತದೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.


ಆಹಾ, ಬಹು ಜನಸಮೂಹವಿದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! ಇಗೋ, ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗಗಳ ಆರ್ಭಟ! ಸೇನಾಧೀಶ್ವರನಾದ ಯೆಹೋವನು ಸೈನ್ಯವನ್ನು ಯುದ್ಧಕ್ಕಾಗಿ ಅಣಿಮಾಡುತ್ತಿದ್ದಾನೆ.


ಆದದರಿಂದ ನಾನು ಅವನ ಮೇಲೆ [ಭಯದ] ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಸಂಹೃತನಾಗುವಂತೆ ಮಾಡುವೆನು ಎಂಬದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ ಎಂದು ಉತ್ತರಕೊಟ್ಟನು.


ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯ ಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು - ಇಸ್ರಾಯೇಲ್ಯರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರೋಧವಾಗಿ ಕರತಂದಿದ್ದಾನೆ ಅಂದುಕೊಂಡು


ಗಿದ್ಯೋನನು ಆ ಕನಸನ್ನೂ ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು ಇಸ್ರಾಯೇಲ್ಯರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ - ಏಳಿರಿ, ಯೆಹೋವನು ವಿುದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ ಅಂದನು.


ಅದೇ ದಿವಸ ರಾತ್ರಿಯಲ್ಲಿ ಯೆಹೋವನು ಅವನಿಗೆ - ನೀನು ಎದ್ದು ಹೋಗಿ ಶತ್ರುಗಳ ಪಾಳೆಯದ ಮೇಲೆ ಬೀಳು; ಅದನ್ನು ನಿನಗೆ ಒಪ್ಪಿಸಿಕೊಟ್ಟಿದ್ದೇನೆ.


ಆಗ ದೆಬೋರಳು ಬಾರಾಕನಿಗೆ - ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇದೇ; ನಿಶ್ಚಯವಾಗಿ ಆತನು ತಾನೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವನು ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದಿಳಿದನು.


ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದಲ್ಲಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವು ಅವರಲ್ಲಿ ದಿಗಿಲುಹುಟ್ಟಿಸುವದು; ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು; ಯಾರೂ ಹಿಂದಟ್ಟಿ ಬಾರದಿರುವಾಗಲೂ ಅವರು ಓಡಿ ಬೀಳುವರು;


ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ - ನೀನು ನೆಟ್ಟಗೆ ಹೋಗಿ ಅವರ ಮೇಲೆ ಬೀಳಬೇಡ; ಅವರ ಹಿಂದಳವನ್ನು ಸುತ್ತಿಕೊಂಡು ಹೋಗಿ ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.


ದಾವೀದನು ತಿರಿಗಿ ದೇವರ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ - ನೀನು ಅವರನ್ನು ಬೆನ್ನಟ್ಟಬೇಡ; ಅವರ ಎದುರಿನಿಂದ ತಿರುಗಿಕೊಂಡು ಹೋಗಿ ಬಾಕಾಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.


ದಾವೀದನು ದೇವರ ಆಜ್ಞಾನುಸಾರವಾಗಿ ಮಾಡಿದನು; ಇಸ್ರಾಯೇಲ್ಯರು ಫಿಲಿಷ್ಟಿಯ ಸೈನ್ಯವನ್ನು ಗಿಬ್ಯೋನಿನಿಂದ ಗೆಜೆರಿನವರೆಗೂ ಸಂಹರಿಸುತ್ತಾ ಹೋದರು.


ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನುಂಟುಮಾಡುವನು ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು