Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 15:2 - ಕನ್ನಡ ಸತ್ಯವೇದವು J.V. (BSI)

2 ಆ ಕಾಲದಲ್ಲಿ ದಾವೀದನು - ಲೇವಿಯರು ಹೊರತಾಗಿ ಯಾರೂ ದೇವಮಂಜೂಷವನ್ನು ಹೊರಬಾರದು; ಅದನ್ನು ಹೊರುವದಕ್ಕೂ ಸದಾಕಾಲ ತನ್ನ ಸೇವೆಮಾಡುವದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ಕಾಲದಲ್ಲಿ ದಾವೀದನು, “ಲೇವಿಯರ ಹೊರತಾಗಿ ಯಾರೂ ಮಂಜೂಷವನ್ನು ಹೊರಬಾರದು, ಅದನ್ನು ಹೊರುವುದಕ್ಕೂ, ಸದಾಕಾಲ ತನ್ನ ಸೇವೆಮಾಡುವುದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ‘ಲೇವಿಯರು ಮಾತ್ರವೇ ದೇವಮಂಜೂಷವನ್ನು ಹೊರಬೇಕು. ಏಕೆಂದರೆ ಸದಾಕಾಲ ತಮ್ಮ ಸೇವೆಮಾಡುವುದಕ್ಕೂ ಮಂಜೂಷವನ್ನು ಹೊರುವುದಕ್ಕೂ ಸರ್ವೇಶ್ವರನಿಂದ ಆಯ್ಕೆಯಾದವರು ಅವರೇ’ ಎಂದು ನಿಶ್ಚಯಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಲೇವಿಯರು ಮಾತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬರಬೇಕು. ಯೆಹೋವನು ಅವರನ್ನೇ ತನ್ನ ನಿರಂತರವಾದ ಸೇವೆಗಾಗಿ ನೇಮಿಸಿದ್ದಾನೆ” ಎಂದು ದಾವೀದನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ದಾವೀದನು, “ಲೇವಿಯರ ಹೊರತಾಗಿ ಮತ್ತ್ಯಾರೂ ದೇವರ ಮಂಜೂಷವನ್ನು ಹೊರಬಾರದು. ಯೆಹೋವ ದೇವರು ದೇವರ ಮಂಜೂಷವನ್ನು ಹೊರಲೂ, ಯುಗಯುಗಕ್ಕೆ ಅವರಿಗೆ ಸೇವೆಮಾಡಲೂ ಅವರನ್ನು ಆಯ್ದುಕೊಂಡಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 15:2
17 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವದಕ್ಕೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಅವರನ್ನು ನೇವಿುಸಿದನು. ಅವರು ಇಂದಿನವರೆಗೂ ಆ ಕೆಲಸವನ್ನು ನಡಿಸುತ್ತಾರೆ.


ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟು ಅವರಿಗೆ -


ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ - ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ; ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಯೆಹೋವನ ಮಂಜೂಷದ ಮುಂದೆ ನಡೆಯಲಿ ಅಂದನು.


ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷ ಹೊತ್ತಿರುವದನ್ನು ಕಂಡಕೂಡಲೆ ನೀವೂ ನಿಮ್ಮ ಸ್ಥಳವನ್ನು ಬಿಟ್ಟು ಅದರ ಹಿಂದೆ ಹೋಗಿರಿ.


ಇದಲ್ಲದೆ ಇವರಲ್ಲಿ ಯಾಜಕರೂ ಲೇವಿಯರೂ ಆಗತಕ್ಕವರನ್ನು ಆರಿಸಿಕೊಳ್ಳುವೆನು ಎಂದು ಯೆಹೋವನು ಹೇಳುತ್ತಾನೆ.


ಎಲ್ಲಾ ಇಸ್ರಾಯೇಲ್ಯರನ್ನು ಉಪದೇಶಿಸತಕ್ಕವರೂ ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ - ದಾವೀದನ ಮಗನೂ ಇಸ್ರಾಯೇಲ್‍ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇಟ್ಟುಬಿಡಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವದು ಅವಶ್ಯವಿಲ್ಲ; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ ಆತನ ಪ್ರಜೆಗಳಾದ ಇಸ್ರಾಯೇಲ್ಯರನ್ನೂ ಸೇವಿಸಿರಿ.


ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ; ದೇವದರ್ಶನದ ಗುಡಾರದ ಸಾಮಾನುಗಳನ್ನು ವಹಿಸುವದೇ ಅವರಿಗೆ ನೇಮಕವಾದ ಕೆಲಸ; ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು.


ಯೆಹೋವನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ ದಾವೀದನು ಒಂದು ಎತ್ತನ್ನೂ ಕೊಬ್ಬಿದ ಕರುವನ್ನೂ ಯಜ್ಞಮಾಡಿದನು.


ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.


ನೀನು ಲೇವಿ ಕುಲದವರನ್ನು ಹತ್ತಿರಕ್ಕೆ ಕರೆದು ಅವರು [ದೇವರ ಸೇವಾಕಾರ್ಯಕ್ಕಾಗಿ] ಯಾಜಕನಾದ ಆರೋನನ ಕೈಕೆಳಗಿರುವಂತೆ ಅವನ ಮುಂದೆ ನಿಲ್ಲಿಸು.


ನೀನು ಲೇವಿಯರನ್ನು ಆರೋನನಿಗೂ ಅವನ ಮಕ್ಕಳಿಗೂ ಒಪ್ಪಿಸಬೇಕು; ಇಸ್ರಾಯೇಲ್ಯರಲ್ಲಿ ಆರೋನನಿಗೆ ಸಂಪೂರ್ಣವಾಗಿ ವಶಮಾಡಲ್ಪಟ್ಟವರು ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು